AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

Adipurush Movie Twitter Review: ಈ ಸಿನಿಮಾ ನೋಡಿದ ಅನೇಕರು ಗ್ರಾಫಿಕ್ಸ್ ಬಗ್ಗೆ ಪುಕಾರು ತೆಗೆದಿದ್ದಾರೆ. ಸಾಕಷ್ಟು ಮಂದಿ ಈ ಚಿತ್ರದ ಕುರಿತು ಟೀಕೆ ಹೊರಹಾಕಿದ್ದಾರೆ.

Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್
ಪ್ರಭಾಸ್
TV9 Web
| Edited By: |

Updated on:Jun 16, 2023 | 12:11 PM

Share

ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾದ (Adipurush Movie) ಟೀಸರ್ ಹಾಗೂ ಟ್ರೇಲರ್ ಗಮನ ಸೆಳೆಯಲು ವಿಫಲವಾಗಿತ್ತು. ಆದರೂ, ಇದು 3ಡಿ ಸಿನಿಮಾ ಆಗಿದ್ದರಿಂದ ಅಭಿಮಾನಿಗಳಿಗೆ ಒಂದಷ್ಟು ನಿರೀಕ್ಷೆ ಇತ್ತು. ‘ಆದಿಪುರುಷ್’ ಸಿನಿಮಾ ನೋಡಿದ ಬಳಿಕ ಈ ನಿರೀಕ್ಷೆ ಹುಸಿಯಾಗಿದೆ. ‘ಆದಿಪುರುಷ್’ ಸಿನಿಮಾ ವೀಕ್ಷಿಸಿದ ಅನೇಕರು ಕಿಡಿಕಾರಿದ್ದಾರೆ. ಸಾಲುಸಾಲು ಸೋಲು ಕಂಡ ಪ್ರಭಾಸ್ (Prabhas)​​ ಈ ಚಿತ್ರದ ಮೂಲಕವೂ ಗೆಲ್ಲೋದು ಅನುಮಾನ ಎನ್ನುವ ಮಾತು ವ್ಯಕ್ತವಾಗಿದೆ. ಸಿನಿಮಾ ನೋಡಿದ ಅನೇಕರು ಟ್ವಿಟರ್​ನಲ್ಲಿ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ.

‘ಆದಿಪುರುಷ್’ ಸಿನಿಮಾ ಇಂದು (ಜೂನ್ 16) ರಿಲೀಸ್ ಆಗಿದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಡರೆ, ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ‘ತಾನಾಜಿ’ ಮೂಲಕ ಗಮನ ಸೆಳೆದಿದ್ದ ಓಂ ರಾವತ್ ‘ಆದಿಪುರುಷ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಗ್ರಾಫಿಕ್ಸ್ ಬಗ್ಗೆ ಪುಕಾರು ತೆಗೆದಿದ್ದಾರೆ. ಸಾಕಷ್ಟು ಮಂದಿ ಈ ಚಿತ್ರದ ಕುರಿತು ಟೀಕೆ ಹೊರಹಾಕಿದ್ದಾರೆ.

‘ಆದಿಪುರುಷ್’ ಟೀಸರ್ ರಿಲೀಸ್ ಆದ ಸಂದರ್ಭದಲ್ಲಿ ಸಾಕಷ್ಟು ಟ್ರೋಲ್​ಗಳು ಬಂದಿತ್ತು. ‘ಓಂ ಕಮ್​ ಟು ಮೈ ರೂಂ’ ಎಂದು ಪ್ರಭಾಸ್ ಸಿಟ್ಟಿನಿಂದ ಹೇಳಿದ ವಿಡಿಯೋ ವೈರಲ್ ಆಗಿತ್ತು. ಸಿನಿಮಾ ನೋಡಿದ ಅನೇಕರು ಇದೇ ಡೈಲಾಗ್ ಹೇಳುತ್ತಿದ್ದಾರೆ. ಕೆಲವರು ‘ಅಣ್ಣಾ ಓಂ ರಾವತ್ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’ ಎಂದು ವ್ಯಂಗ್ಯವಾಗಿ ಕಿಡಿಕಾರಿದ್ದಾರೆ. ಗ್ರಾಫಿಕ್ಸ್ ವಿಚಾರದಲ್ಲಿ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Adipurush Review: ಗ್ರಾಫಿಕ್ಸ್​ ನಂಬಿಕೊಂಡು ಯುದ್ಧ ಮಾಡಿದ ರಾಮ-ರಾವಣ; ಇದು ಓಂ ರಾವತ್​ ರಾಮಾಯಣ

ರಾಮಾಯಣದ ಕಥೆ ಕುರಿತು ಸಾಕಷ್ಟು ಸಿನಿಮಾ ಹಾಗೂ ಸೀರಿಸ್​​ಗಳು ಬಂದಿವೆ. ಹೀಗಿರುವಾಗ ಮತ್ತದೇ ಕಥೆ ಹೇಳಬೇಕು ಎಂದರೆ ಅದು ದೊಡ್ಡ ಚಾಲೆಂಜ್. ಇದನ್ನು ಓಂ ರಾವತ್ ಸರಿಯಾಗಿ ನಿಭಾಯಿಸಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸಾಕಷ್ಟು ಮಂದಿ ಸಿನಿಮಾದ ಗ್ರಾಫಿಕ್ಸ್​ ಬಗ್ಗೆ ಕಿಡಿಕಾರಿದ್ದಾರೆ. ‘ನೂರಾರು ಕೋಟಿ ಸುರಿದು ಇಷ್ಟು ಕಳಪೆ ಗ್ರಾಫಿಕ್ಸ್​ನ ನಿರೀಕ್ಷಿಸಿರಲಿಲ್ಲ’ ಎಂಬ ಮಾತನ್ನು ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:10 pm, Fri, 16 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್