AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

Adipurush Movie Twitter Review: ಈ ಸಿನಿಮಾ ನೋಡಿದ ಅನೇಕರು ಗ್ರಾಫಿಕ್ಸ್ ಬಗ್ಗೆ ಪುಕಾರು ತೆಗೆದಿದ್ದಾರೆ. ಸಾಕಷ್ಟು ಮಂದಿ ಈ ಚಿತ್ರದ ಕುರಿತು ಟೀಕೆ ಹೊರಹಾಕಿದ್ದಾರೆ.

Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್
ಪ್ರಭಾಸ್
TV9 Web
| Edited By: |

Updated on:Jun 16, 2023 | 12:11 PM

Share

ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾದ (Adipurush Movie) ಟೀಸರ್ ಹಾಗೂ ಟ್ರೇಲರ್ ಗಮನ ಸೆಳೆಯಲು ವಿಫಲವಾಗಿತ್ತು. ಆದರೂ, ಇದು 3ಡಿ ಸಿನಿಮಾ ಆಗಿದ್ದರಿಂದ ಅಭಿಮಾನಿಗಳಿಗೆ ಒಂದಷ್ಟು ನಿರೀಕ್ಷೆ ಇತ್ತು. ‘ಆದಿಪುರುಷ್’ ಸಿನಿಮಾ ನೋಡಿದ ಬಳಿಕ ಈ ನಿರೀಕ್ಷೆ ಹುಸಿಯಾಗಿದೆ. ‘ಆದಿಪುರುಷ್’ ಸಿನಿಮಾ ವೀಕ್ಷಿಸಿದ ಅನೇಕರು ಕಿಡಿಕಾರಿದ್ದಾರೆ. ಸಾಲುಸಾಲು ಸೋಲು ಕಂಡ ಪ್ರಭಾಸ್ (Prabhas)​​ ಈ ಚಿತ್ರದ ಮೂಲಕವೂ ಗೆಲ್ಲೋದು ಅನುಮಾನ ಎನ್ನುವ ಮಾತು ವ್ಯಕ್ತವಾಗಿದೆ. ಸಿನಿಮಾ ನೋಡಿದ ಅನೇಕರು ಟ್ವಿಟರ್​ನಲ್ಲಿ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ.

‘ಆದಿಪುರುಷ್’ ಸಿನಿಮಾ ಇಂದು (ಜೂನ್ 16) ರಿಲೀಸ್ ಆಗಿದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಡರೆ, ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ‘ತಾನಾಜಿ’ ಮೂಲಕ ಗಮನ ಸೆಳೆದಿದ್ದ ಓಂ ರಾವತ್ ‘ಆದಿಪುರುಷ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಗ್ರಾಫಿಕ್ಸ್ ಬಗ್ಗೆ ಪುಕಾರು ತೆಗೆದಿದ್ದಾರೆ. ಸಾಕಷ್ಟು ಮಂದಿ ಈ ಚಿತ್ರದ ಕುರಿತು ಟೀಕೆ ಹೊರಹಾಕಿದ್ದಾರೆ.

‘ಆದಿಪುರುಷ್’ ಟೀಸರ್ ರಿಲೀಸ್ ಆದ ಸಂದರ್ಭದಲ್ಲಿ ಸಾಕಷ್ಟು ಟ್ರೋಲ್​ಗಳು ಬಂದಿತ್ತು. ‘ಓಂ ಕಮ್​ ಟು ಮೈ ರೂಂ’ ಎಂದು ಪ್ರಭಾಸ್ ಸಿಟ್ಟಿನಿಂದ ಹೇಳಿದ ವಿಡಿಯೋ ವೈರಲ್ ಆಗಿತ್ತು. ಸಿನಿಮಾ ನೋಡಿದ ಅನೇಕರು ಇದೇ ಡೈಲಾಗ್ ಹೇಳುತ್ತಿದ್ದಾರೆ. ಕೆಲವರು ‘ಅಣ್ಣಾ ಓಂ ರಾವತ್ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’ ಎಂದು ವ್ಯಂಗ್ಯವಾಗಿ ಕಿಡಿಕಾರಿದ್ದಾರೆ. ಗ್ರಾಫಿಕ್ಸ್ ವಿಚಾರದಲ್ಲಿ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Adipurush Review: ಗ್ರಾಫಿಕ್ಸ್​ ನಂಬಿಕೊಂಡು ಯುದ್ಧ ಮಾಡಿದ ರಾಮ-ರಾವಣ; ಇದು ಓಂ ರಾವತ್​ ರಾಮಾಯಣ

ರಾಮಾಯಣದ ಕಥೆ ಕುರಿತು ಸಾಕಷ್ಟು ಸಿನಿಮಾ ಹಾಗೂ ಸೀರಿಸ್​​ಗಳು ಬಂದಿವೆ. ಹೀಗಿರುವಾಗ ಮತ್ತದೇ ಕಥೆ ಹೇಳಬೇಕು ಎಂದರೆ ಅದು ದೊಡ್ಡ ಚಾಲೆಂಜ್. ಇದನ್ನು ಓಂ ರಾವತ್ ಸರಿಯಾಗಿ ನಿಭಾಯಿಸಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸಾಕಷ್ಟು ಮಂದಿ ಸಿನಿಮಾದ ಗ್ರಾಫಿಕ್ಸ್​ ಬಗ್ಗೆ ಕಿಡಿಕಾರಿದ್ದಾರೆ. ‘ನೂರಾರು ಕೋಟಿ ಸುರಿದು ಇಷ್ಟು ಕಳಪೆ ಗ್ರಾಫಿಕ್ಸ್​ನ ನಿರೀಕ್ಷಿಸಿರಲಿಲ್ಲ’ ಎಂಬ ಮಾತನ್ನು ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:10 pm, Fri, 16 June 23

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?