AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Khosla: ‘ಮನಸ್ಸು ಒಡೆದಿದೆ’; ಕಣ್ಣೀರಲ್ಲಿ ಕೈ ತೊಳೆದ ‘ಆದಿಪುರುಷ್’ ನಿರ್ಮಾಪಕನ ಪತ್ನಿ

Bhushan Kumar: ಪ್ರಭಾಸ್ ನಟನೆಯ ‘ಆದಿಪುರುಷ್ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ ಫ್ಲಾಪ್ ಆಯಿತು. ಟಿ ಸೀರಿಸ್ ಬ್ಯಾನರ್ ಮೂಲಕ ಭೂಷಣ್ ಕುಮಾರ್ ನಿರ್ಮಿಸಿದ್ದರು. ಈಗ ಅವರ ಕುಟುಂಬಕ್ಕೆ ಆಘಾತ ಆಗಿದೆ.

Divya Khosla: ‘ಮನಸ್ಸು ಒಡೆದಿದೆ’; ಕಣ್ಣೀರಲ್ಲಿ ಕೈ ತೊಳೆದ ‘ಆದಿಪುರುಷ್’ ನಿರ್ಮಾಪಕನ ಪತ್ನಿ
ತಾಯಿ ಜೊತೆ ದಿವಯಾ-ಭೂಷಣ್
ರಾಜೇಶ್ ದುಗ್ಗುಮನೆ
|

Updated on: Jul 07, 2023 | 8:15 AM

Share

ಪ್ರಭಾಸ್ ನಟನೆಯ ‘ಆದಿಪುರುಷ್ ಚಿತ್ರ (Adipurush Movie) ಇತ್ತೀಚೆಗೆ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಚಿತ್ರದಿಂದ ಪ್ರಭಾಸ್​ಗೆ ತೀವ್ರ ಹಿನ್ನಡೆ ಆಗಿದೆ. ಈ ಚಿತ್ರವನ್ನು ಟಿ ಸೀರಿಸ್ ಬ್ಯಾನರ್ ಮೂಲಕ ಭೂಷಣ್ ಕುಮಾರ್ (Bhushan Kumar) ನಿರ್ಮಿಸಿದ್ದರು. ಈ ಚಿತ್ರ ಸೋತ ಬೇಸರದಲ್ಲಿ ಅವರಿದ್ದಾರೆ. ಮತ್ತೊಂದು ಕಡೆ ಅವರ ಪತ್ನಿ ದಿವ್ಯಾ ಖೋಸ್ಲಾ ಕುಮಾರ್ ತಾಯಿ ಅನಿತಾ ಮೃತಪಟ್ಟಿದ್ದಾರೆ. ಇದರಿಂದ ಅವರ ಕುಟುಂಬದಲ್ಲಿ ದುಃಖ ಆವರಿಸಿದೆ. ಗುರುವಾರ (ಜುಲೈ 6) ಅನಿತಾ ನಿಧನ ಹೊಂದಿದ ವಿಚಾರವನ್ನು ಕುಟುಂಬದವರು ಖಚಿತಪಡಿಸಿದ್ದಾರೆ.

ತಾಯಿಯನ್ನು ಕಳೆದುಕೊಂಡ ವಿಚಾರವನ್ನು ದಿವ್ಯಾ ಖೋಸ್ಲಾ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ತಮ್ಮ ತಾಯಿಯೊಂದಿಗೆ ಇರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ‘ಅಮ್ಮಾ.. ನನ್ನ ಹೃದಯ ಒಡೆದಿದೆ.. ನನ್ನ ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ. ಆದರೆ ಅವರು ನನ್ನ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತಾರೆ. ನೀವು ನನಗೆ ಕಲಿಸಿದ ಮೌಲ್ಯಗಳನ್ನು ನಾನು ಶಾಶ್ವತವಾಗಿ ನನ್ನೊಂದಿಗೆ ಇಟ್ಟುಕೊಳ್ಳುತ್ತೇನೆ. ನಾನು ನಿಮ್ಮ ಮಗಳು ಎಂದು ಹೆಮ್ಮೆಪಡುತ್ತೇನೆ. ಲವ್ ಯೂ ಅಮ್ಮಾ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: HanuMan Movie: ‘ಆದಿಪುರುಷ್’ ಸೋತ ಬಳಿಕ ‘ಹನುಮಾನ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ; ನಡೆಯಲಿದೆ ಭರ್ಜರಿ ಕ್ಲ್ಯಾಶ್

ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ದಿವ್ಯಾ ಖೋಸ್ಲಾ ಕುಮಾರ್ ಅವರನ್ನು ಸಂತೈಸುವ ಕೆಲಸ ಮಾಡಿದ್ದಾರೆ. ಅವರ ತಾಯಿಯ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ. ದಿವ್ಯಾ ಖೋಸ್ಲಾ ಕುಮಾರ್ ಈ ಹಿಂದೆ ಹಲವು ಹಿಂದಿ ಚಿತ್ರಗಳಲ್ಲಿ ನಟಿಸಿದ್ದರು. ಕೆಲ ಸಿನಿಮಾಗಳನ್ನು ನಿರ್ದೇಶನ ಕೂಡ ಮಾಡಿದ್ದಾರೆ. ಫೆಬ್ರವರಿ 13, 2005ರಂದು, ಅವರು ಭೂಷಣ್ ಕುಮಾರ್ ಅವರನ್ನು ವಿವಾಹವಾದರು. 2011ರಲ್ಲಿ ಅವರಿಗೆ ಗಂಡು ಮಗು ಜನಿಸಿತು.

ಹಿಂದಿಯಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಟಿ ಸೀರಿಸ್​ಗೆ ಇದೆ. ‘ಆದಿಪುರುಷ್’ ಚಿತ್ರದ ಬಗ್ಗೆ ಭೂಷಣ್ ಕುಮಾರ್ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆ ಹುಸಿಯಾಗಿದೆ. ರಾಮಾಯಣ ಕಥೆ ತಿರುಚಿದ ಆರೋಪ ಸಿನಿಮಾ ಮೇಲಿದೆ. ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋಲು ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ