ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಿರುವ ನಿರ್ದೇಶಕ; ‘ಬಾಹುಬಲಿ’ ನಟನಿಗೆ ಅಂಥದ್ದೇನಾಗಿದೆ?

ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ‘ಆದಿಪುರುಷ್​’ ಚಿತ್ರದಲ್ಲಿ ರಾಮನ ಪಾತ್ರ ಮಾಡುತ್ತಿರುವ ಅವರು ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಿರುವ ನಿರ್ದೇಶಕ; ‘ಬಾಹುಬಲಿ’ ನಟನಿಗೆ ಅಂಥದ್ದೇನಾಗಿದೆ?
ಪ್ರಭಾಸ್​
Follow us
| Updated By: ಮದನ್​ ಕುಮಾರ್​

Updated on:Sep 17, 2021 | 8:31 AM

ನಟ ಪ್ರಭಾಸ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅವರು ಏನೇ ಮಾಡಿದರೂ ಅದು ಈಗ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಆಗುತ್ತದೆ. ಅಷ್ಟರಮಟ್ಟಿಗೆ ಅವರ ಜನಪ್ರಿಯತೆ ಹೆಚ್ಚಿದೆ. ಅಷ್ಟೇ ಅಲ್ಲ, ಅವರನ್ನು ಟ್ರೋಲ್​ ಮಾಡುವವರ ಸಂಖ್ಯೆ ಕೂಡ ದೊಡ್ಡದಿದೆ. ಇತ್ತೀಚೆಗೆ ಅವರ ಒಂದು ಫೋಟೋ ವೈರಲ್​ ಆಗಿತ್ತು. ಅದನ್ನು ಕಂಡ ಬಳಿಕ ಅವರನ್ನು ಅಂಕಲ್​ ಎಂದು ಅನೇಕರು ಹೀಯಾಳಿಸಿದ್ದರು. ಇದರಿಂದ ಹೆಚ್ಚು ಚಿಂತೆಗೆ ಒಳಗಾಗಿರುವುದು ‘ಆದಿಪುರುಷ್​’ ಸಿನಿಮಾ ನಿರ್ದೇಶಕ ಓಂ ರಾವುತ್​! ಪ್ರಭಾಸ್​ ಟ್ರೋಲ್​ ಆಗುವುದಕ್ಕೂ, ಓಂ ರಾವುತ್​ ಟೆನ್ಷನ್​ ಮಾಡಿಕೊಳ್ಳುವುದಕ್ಕೂ ಏನು ಸಂಬಂಧ? ಅದಕ್ಕಿದೆ ಒಂದು ಲಿಂಕ್.

ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ತಯಾರಾಗುತ್ತಿದೆ. ಅದರಲ್ಲಿ ಪ್ರಭಾಸ್​ಗೆ ರಾಮನ ಪಾತ್ರ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ಇಂಥ ಫ್ಯಾಟ್​ ಅವತಾರದಲ್ಲಿ ರಾಮನನ್ನು ನೋಡಲು ಜನರು ಇಷ್ಟಪಡುವುದಿಲ್ಲ ಎಂಬುದು ಖಚಿತ. ಹಾಗಾಗಿ ಪ್ರಭಾಸ್​ ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ. ಅದಕ್ಕಾಗಿ ಈ ಚಿತ್ರದ ನಿರ್ದೇಶಕ ಓಂ ರಾವುತ್​ ಒಂದು ಪ್ಲ್ಯಾನ್​ ಮಾಡಿದ್ದಾರೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಈಗ ಕೇಳಿಬರುತ್ತಿದೆ. ಹೀಗೆ ಏಕಾಏಕಿ ದೇಹದ ತೂಕ ಹೆಚ್ಚಲು ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಇಂಗ್ಲೆಂಡ್​ನಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಗುವುದು. ಅಲ್ಲಿಯೇ ಚಿಕಿತ್ಸೆ ಕೊಡಿಸಿ, ಆದಷ್ಟು ಬೇಗ ಅವರನ್ನು ಮೊದಲಿನ ಗೆಟಪ್​ಗೆ ಮರಳಿಸಲು ನಿರ್ದೇಶಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಕುರಿತಂತೆ ಚಿತ್ರತಂಡದ ಯಾರೊಬ್ಬರೂ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.

‘ಬಾಹುಬಲಿ’ ಸರಣಿ ಸಿನಿಮಾಗಳ ಬಳಿಕ ಪ್ರಭಾಸ್​ ‘ಸಾಹೋ’ ಸಿನಿಮಾ ಒಪ್ಪಿಕೊಂಡಿದ್ದರು. ಹಿಂದಿಯಲ್ಲೂ ಆ ಚಿತ್ರ ತೆರೆಕಂಡಿತ್ತು. ಆದರೆ ಹೇಳಿಕೊಳ್ಳುವ ಮಟ್ಟಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಹಣ ಗಳಿಸಲಿಲ್ಲ. ಆಗಲೇ ಉತ್ತರ ಭಾರತದ ಹಲವು ಮಂದಿಗೆ ಪ್ರಭಾಸ್​ ಮೇಲಿದ್ದ ಕ್ರೇಜ್​ ಕಮ್ಮಿ ಆಗಿತ್ತು. ಈ ನಡುವೆ ಪ್ರಭಾಸ್​ ಫಿಟ್ನೆಸ್​ ಕೂಡ ಕಳೆದುಕೊಂಡರೆ ಅದು ‘ಆದಿಪುರುಷ್​’ ಚಿತ್ರದ ಮೇಲೆ ಖಂಡಿತ ಕೆಟ್ಟ ಪರಿಣಾಮ ಬೀರಲಿದೆ ಎಂಬುದು ನಿರ್ದೇಶಕ ಓಂ ರಾವುತ್​ ಅವರಿಗೆ ಖಚಿತ ಆದಂತಾಗಿದೆ. ಹಾಗಾಗಿ ಪ್ರಭಾಸ್​ ಆದಷ್ಟು ಬೇಗ ಮೊದಲಿನ ಲುಕ್​ಗೆ ಮರಳಬೇಕು ಎಂದು ಓಂ ರಾವುತ್​ ಒತ್ತಾಯ ಹೇರುತ್ತಿದ್ದಾರೆ.

ಇದನ್ನೂ ಓದಿ:

Prabhas: ಡೇಟಿಂಗ್​ ವಿಚಾರಕ್ಕೆ ಜಾಗತಿಕ ಮಟ್ಟದಲ್ಲಿ ಪ್ರಭಾಸ್​ ಸುದ್ದಿ; ಇದೆಲ್ಲ ಯಾರ ಜೊತೆ, ಏನು ಕಥೆ?

ಪ್ರಶಾಂತ್​ ನೀಲ್​ ಕಣ್ಣು ತಪ್ಪಿಸಿ ಪ್ರಭಾಸ್​ ವಿಡಿಯೋ ಲೀಕ್​? ಸಲಾರ್​ ಸೆಟ್​​ನಲ್ಲಿ ಕಿತಾಪತಿ

Published On - 8:25 am, Fri, 17 September 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ