AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಿರುವ ನಿರ್ದೇಶಕ; ‘ಬಾಹುಬಲಿ’ ನಟನಿಗೆ ಅಂಥದ್ದೇನಾಗಿದೆ?

ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ‘ಆದಿಪುರುಷ್​’ ಚಿತ್ರದಲ್ಲಿ ರಾಮನ ಪಾತ್ರ ಮಾಡುತ್ತಿರುವ ಅವರು ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಿರುವ ನಿರ್ದೇಶಕ; ‘ಬಾಹುಬಲಿ’ ನಟನಿಗೆ ಅಂಥದ್ದೇನಾಗಿದೆ?
ಪ್ರಭಾಸ್​
TV9 Web
| Edited By: |

Updated on:Sep 17, 2021 | 8:31 AM

Share

ನಟ ಪ್ರಭಾಸ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅವರು ಏನೇ ಮಾಡಿದರೂ ಅದು ಈಗ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಆಗುತ್ತದೆ. ಅಷ್ಟರಮಟ್ಟಿಗೆ ಅವರ ಜನಪ್ರಿಯತೆ ಹೆಚ್ಚಿದೆ. ಅಷ್ಟೇ ಅಲ್ಲ, ಅವರನ್ನು ಟ್ರೋಲ್​ ಮಾಡುವವರ ಸಂಖ್ಯೆ ಕೂಡ ದೊಡ್ಡದಿದೆ. ಇತ್ತೀಚೆಗೆ ಅವರ ಒಂದು ಫೋಟೋ ವೈರಲ್​ ಆಗಿತ್ತು. ಅದನ್ನು ಕಂಡ ಬಳಿಕ ಅವರನ್ನು ಅಂಕಲ್​ ಎಂದು ಅನೇಕರು ಹೀಯಾಳಿಸಿದ್ದರು. ಇದರಿಂದ ಹೆಚ್ಚು ಚಿಂತೆಗೆ ಒಳಗಾಗಿರುವುದು ‘ಆದಿಪುರುಷ್​’ ಸಿನಿಮಾ ನಿರ್ದೇಶಕ ಓಂ ರಾವುತ್​! ಪ್ರಭಾಸ್​ ಟ್ರೋಲ್​ ಆಗುವುದಕ್ಕೂ, ಓಂ ರಾವುತ್​ ಟೆನ್ಷನ್​ ಮಾಡಿಕೊಳ್ಳುವುದಕ್ಕೂ ಏನು ಸಂಬಂಧ? ಅದಕ್ಕಿದೆ ಒಂದು ಲಿಂಕ್.

ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ತಯಾರಾಗುತ್ತಿದೆ. ಅದರಲ್ಲಿ ಪ್ರಭಾಸ್​ಗೆ ರಾಮನ ಪಾತ್ರ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ಇಂಥ ಫ್ಯಾಟ್​ ಅವತಾರದಲ್ಲಿ ರಾಮನನ್ನು ನೋಡಲು ಜನರು ಇಷ್ಟಪಡುವುದಿಲ್ಲ ಎಂಬುದು ಖಚಿತ. ಹಾಗಾಗಿ ಪ್ರಭಾಸ್​ ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ. ಅದಕ್ಕಾಗಿ ಈ ಚಿತ್ರದ ನಿರ್ದೇಶಕ ಓಂ ರಾವುತ್​ ಒಂದು ಪ್ಲ್ಯಾನ್​ ಮಾಡಿದ್ದಾರೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಈಗ ಕೇಳಿಬರುತ್ತಿದೆ. ಹೀಗೆ ಏಕಾಏಕಿ ದೇಹದ ತೂಕ ಹೆಚ್ಚಲು ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಇಂಗ್ಲೆಂಡ್​ನಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಗುವುದು. ಅಲ್ಲಿಯೇ ಚಿಕಿತ್ಸೆ ಕೊಡಿಸಿ, ಆದಷ್ಟು ಬೇಗ ಅವರನ್ನು ಮೊದಲಿನ ಗೆಟಪ್​ಗೆ ಮರಳಿಸಲು ನಿರ್ದೇಶಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಕುರಿತಂತೆ ಚಿತ್ರತಂಡದ ಯಾರೊಬ್ಬರೂ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.

‘ಬಾಹುಬಲಿ’ ಸರಣಿ ಸಿನಿಮಾಗಳ ಬಳಿಕ ಪ್ರಭಾಸ್​ ‘ಸಾಹೋ’ ಸಿನಿಮಾ ಒಪ್ಪಿಕೊಂಡಿದ್ದರು. ಹಿಂದಿಯಲ್ಲೂ ಆ ಚಿತ್ರ ತೆರೆಕಂಡಿತ್ತು. ಆದರೆ ಹೇಳಿಕೊಳ್ಳುವ ಮಟ್ಟಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಹಣ ಗಳಿಸಲಿಲ್ಲ. ಆಗಲೇ ಉತ್ತರ ಭಾರತದ ಹಲವು ಮಂದಿಗೆ ಪ್ರಭಾಸ್​ ಮೇಲಿದ್ದ ಕ್ರೇಜ್​ ಕಮ್ಮಿ ಆಗಿತ್ತು. ಈ ನಡುವೆ ಪ್ರಭಾಸ್​ ಫಿಟ್ನೆಸ್​ ಕೂಡ ಕಳೆದುಕೊಂಡರೆ ಅದು ‘ಆದಿಪುರುಷ್​’ ಚಿತ್ರದ ಮೇಲೆ ಖಂಡಿತ ಕೆಟ್ಟ ಪರಿಣಾಮ ಬೀರಲಿದೆ ಎಂಬುದು ನಿರ್ದೇಶಕ ಓಂ ರಾವುತ್​ ಅವರಿಗೆ ಖಚಿತ ಆದಂತಾಗಿದೆ. ಹಾಗಾಗಿ ಪ್ರಭಾಸ್​ ಆದಷ್ಟು ಬೇಗ ಮೊದಲಿನ ಲುಕ್​ಗೆ ಮರಳಬೇಕು ಎಂದು ಓಂ ರಾವುತ್​ ಒತ್ತಾಯ ಹೇರುತ್ತಿದ್ದಾರೆ.

ಇದನ್ನೂ ಓದಿ:

Prabhas: ಡೇಟಿಂಗ್​ ವಿಚಾರಕ್ಕೆ ಜಾಗತಿಕ ಮಟ್ಟದಲ್ಲಿ ಪ್ರಭಾಸ್​ ಸುದ್ದಿ; ಇದೆಲ್ಲ ಯಾರ ಜೊತೆ, ಏನು ಕಥೆ?

ಪ್ರಶಾಂತ್​ ನೀಲ್​ ಕಣ್ಣು ತಪ್ಪಿಸಿ ಪ್ರಭಾಸ್​ ವಿಡಿಯೋ ಲೀಕ್​? ಸಲಾರ್​ ಸೆಟ್​​ನಲ್ಲಿ ಕಿತಾಪತಿ

Published On - 8:25 am, Fri, 17 September 21

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್