AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಕೆ ಬೆನ್ನಲ್ಲೇ ವರಸೆ ಬದಲಿಸಿದ ‘ಆದಿಪುರುಷ್’ ತಂಡ; ಮೊದಲು ಹೇಳಿದ್ದೊಂದು, ಈಗ ಹೇಳೋದೊಂದು

ರಾಮ ನವಮಿ, ಹನುಮ ಜಯಂತಿ ಸಂದರ್ಭದಲ್ಲಿ ಪೋಸ್ಟರ್ ರಿಲೀಸ್ ಮಾಡಿ ‘ಆದಿಪುರುಷ್’ ತಂಡ ಶುಭಕೋರಿತ್ತು. ಆದರೆ, ಯಾವಾಗ ಟೀಕೆಗಳು ಎದುರಾದವೋ ಆಗ ತಂಡ ತನ್ನ ನಿಲುವು ಬದಲಾಯಿಸಿದೆ.

ಟೀಕೆ ಬೆನ್ನಲ್ಲೇ ವರಸೆ ಬದಲಿಸಿದ ‘ಆದಿಪುರುಷ್’ ತಂಡ; ಮೊದಲು ಹೇಳಿದ್ದೊಂದು, ಈಗ ಹೇಳೋದೊಂದು
ಆದಿಪುರುಷ್ ತಂಡ
ರಾಜೇಶ್ ದುಗ್ಗುಮನೆ
|

Updated on: Jun 19, 2023 | 12:04 PM

Share

‘ಆದಿಪುರುಷ್’ (Adipurush Movie) ತಂಡ ಈಗ ಟೀಕೆಗಳ ಮೇಲೆ ಟೀಕೆ ಎದುರಿಸುತ್ತಿದೆ. ಮೂಲ ರಾಮಾಯಣಕ್ಕೂ ಈ ರಾಮಾಯಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಪ್ರತಿ ದೃಶ್ಯಕ್ಕೂ ಸಿನಿಮೀಯ ಅಂಶಗಳನ್ನು ನೀಡಲಾಗಿದೆ. ಈ ಕಾರಣಕ್ಕೆ ರಾಮ ಭಕ್ತರು, ಹನುಮಂತನ ಭಕ್ತರು ಚಿತ್ರತಂಡದ ವಿರುದ್ಧ ಕಿಡಿಕಾರಿದ್ದಾರೆ. ಈ ಮಧ್ಯೆ ಚಿತ್ರತಂಡ ಕೂಡ ಪ್ಲೇಟ್ ಬದಲಿಸುತ್ತಿದೆ. ರಿಲೀಸ್​ಗೂ ಮೊದಲು ಇದು ರಾಮಾಯಣ (Ramayana) ಆಧಾರಿತ ಚಿತ್ರ ಎಂದು ಹೇಳುತ್ತಾ ಬಂದಿದ್ದ ತಂಡ, ಈಗ ತನ್ನ ನಿಲುವು ಬದಲಾಯಿಸಿದೆ. ಇದು ರಾಮಾಯಾಣ ಆಧರಿಸಿದ ಸಿನಿಮಾ ಅಲ್ಲವೇ ಅಲ್ಲ ಎನ್ನುತ್ತಿದೆ. ಚಿತ್ರತಂಡದ ಈ ದ್ವಂದ ನೀತಿ ಬಗ್ಗೆ ಟೀಕೆ ವ್ಯಕ್ತವಾಗಿದೆ.

‘ಆದಿಪುರುಷ್’ ಸಿನಿಮಾ ರಾಮಾಯಣ ಆಧರಿಸಿದ ಚಿತ್ರ ಎಂದು ನಿರ್ದೇಶಕ ಓಂ ರಾವತ್ ಈ ಮೊದಲಿನಿಂದಲೂ ಹೇಳಿಕೊಳ್ಳುತ್ತಾ ಬರುತ್ತಿದ್ದಾರೆ. ರಾಮ ನವಮಿ, ಹನುಮ ಜಯಂತಿ ಸಂದರ್ಭದಲ್ಲಿ ಪೋಸ್ಟರ್ ರಿಲೀಸ್ ಮಾಡಿ ತಂಡ ಶುಭಕೋರಿತ್ತು. ಆದರೆ, ಯಾವಾಗ ಟೀಕೆಗಳು ಎದುರಾದವೋ ಆಗ ತಂಡ ತನ್ನ ನಿಲುವು ಬದಲಾಯಿಸಿದೆ.

‘ಆದಿಪುರುಷ್​’ ಹೀರೋ ಪ್ರಭಾಸ್​ಗೆ 150 ಕೋಟಿ ರೂ. ಸಂಬಳ; ಇನ್ನುಳಿದ ಕಲಾವಿದರಿಗೆ ಸಿಕ್ಕ ಸಂಭಾವನೆ ಎಷ್ಟು?

‘ಆದಿಪುರುಷ್ ಮಾಡರ್ನ್ ಮಾಡೋಕೆ ನಾವು ಪ್ರಯತ್ನಿಸಿಲ್ಲ. ಜನರು ಓದಿದ, ಕೇಳಿದ ರಾಮಾಯಣವನ್ನೇ ನಾವು ಹೇಳುತ್ತಿದ್ದೇವೆ’ ಎಂದು ‘ಆದಿಪುರುಷ್’ ತಂಡದ ಸಂಭಾಷಣಾಕಾರ ಮನೋಜ್ ಈ ಮೊದಲು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಸಿನಿಮಾ ರಿಲೀಸ್ ಆದ ಬಳಿಕ ನಿಲುವು ಬದಲಾಗಿದೆ. ‘ನಾವು ಈ ಮೊದಲಿನಿಂದಲೂ ಇದನ್ನೇ ಹೇಳುತ್ತಾ ಬರುತ್ತಿದ್ದೇವೆ. ನಾವು ರಾಮಯಾಣವನ್ನೇ ಸಿನಿಮಾ ಮಾಡಿಲ್ಲ. ರಾಮಾಯಣವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡಿದ್ದೇವೆ ಅಷ್ಟೇ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಆದಿಪುರುಷ್​’ ಪ್ರದರ್ಶನಕ್ಕೂ ಮುನ್ನ ಬರುವ ಸ್ಪಷ್ಟೀಕರಣದಲ್ಲಿ ಏನಿದೆ? ಚಿತ್ರತಂಡದ ಅಸಲಿ ವಾದ ಇಲ್ಲಿದೆ ನೋಡಿ..

ಈ ಎರಡೂ ಹೇಳಿಕೆಗಳನ್ನು ಜೋಡಿಸಿ ವಿಡಿಯೋಗಳನ್ನು ಹರಿಬಿಡಲಾಗಿದೆ. ‘ಆದಿಪುರುಷ್’ ತಂಡದವರು ಹೇಗೆ ಮಾತು ಬದಲಾಯಿಸುತ್ತಾರೆ ಎಂಬುದಕ್ಕೆ ಇವು ಸಾಕ್ಷಿ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಚಿತ್ರತಂಡದವರ ನಡೆಗೆ ಅನೇಕರಿಂದ ಟೀಕೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ