AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಕೆ ಬೆನ್ನಲ್ಲೇ ವರಸೆ ಬದಲಿಸಿದ ‘ಆದಿಪುರುಷ್’ ತಂಡ; ಮೊದಲು ಹೇಳಿದ್ದೊಂದು, ಈಗ ಹೇಳೋದೊಂದು

ರಾಮ ನವಮಿ, ಹನುಮ ಜಯಂತಿ ಸಂದರ್ಭದಲ್ಲಿ ಪೋಸ್ಟರ್ ರಿಲೀಸ್ ಮಾಡಿ ‘ಆದಿಪುರುಷ್’ ತಂಡ ಶುಭಕೋರಿತ್ತು. ಆದರೆ, ಯಾವಾಗ ಟೀಕೆಗಳು ಎದುರಾದವೋ ಆಗ ತಂಡ ತನ್ನ ನಿಲುವು ಬದಲಾಯಿಸಿದೆ.

ಟೀಕೆ ಬೆನ್ನಲ್ಲೇ ವರಸೆ ಬದಲಿಸಿದ ‘ಆದಿಪುರುಷ್’ ತಂಡ; ಮೊದಲು ಹೇಳಿದ್ದೊಂದು, ಈಗ ಹೇಳೋದೊಂದು
ಆದಿಪುರುಷ್ ತಂಡ
ರಾಜೇಶ್ ದುಗ್ಗುಮನೆ
|

Updated on: Jun 19, 2023 | 12:04 PM

Share

‘ಆದಿಪುರುಷ್’ (Adipurush Movie) ತಂಡ ಈಗ ಟೀಕೆಗಳ ಮೇಲೆ ಟೀಕೆ ಎದುರಿಸುತ್ತಿದೆ. ಮೂಲ ರಾಮಾಯಣಕ್ಕೂ ಈ ರಾಮಾಯಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಪ್ರತಿ ದೃಶ್ಯಕ್ಕೂ ಸಿನಿಮೀಯ ಅಂಶಗಳನ್ನು ನೀಡಲಾಗಿದೆ. ಈ ಕಾರಣಕ್ಕೆ ರಾಮ ಭಕ್ತರು, ಹನುಮಂತನ ಭಕ್ತರು ಚಿತ್ರತಂಡದ ವಿರುದ್ಧ ಕಿಡಿಕಾರಿದ್ದಾರೆ. ಈ ಮಧ್ಯೆ ಚಿತ್ರತಂಡ ಕೂಡ ಪ್ಲೇಟ್ ಬದಲಿಸುತ್ತಿದೆ. ರಿಲೀಸ್​ಗೂ ಮೊದಲು ಇದು ರಾಮಾಯಣ (Ramayana) ಆಧಾರಿತ ಚಿತ್ರ ಎಂದು ಹೇಳುತ್ತಾ ಬಂದಿದ್ದ ತಂಡ, ಈಗ ತನ್ನ ನಿಲುವು ಬದಲಾಯಿಸಿದೆ. ಇದು ರಾಮಾಯಾಣ ಆಧರಿಸಿದ ಸಿನಿಮಾ ಅಲ್ಲವೇ ಅಲ್ಲ ಎನ್ನುತ್ತಿದೆ. ಚಿತ್ರತಂಡದ ಈ ದ್ವಂದ ನೀತಿ ಬಗ್ಗೆ ಟೀಕೆ ವ್ಯಕ್ತವಾಗಿದೆ.

‘ಆದಿಪುರುಷ್’ ಸಿನಿಮಾ ರಾಮಾಯಣ ಆಧರಿಸಿದ ಚಿತ್ರ ಎಂದು ನಿರ್ದೇಶಕ ಓಂ ರಾವತ್ ಈ ಮೊದಲಿನಿಂದಲೂ ಹೇಳಿಕೊಳ್ಳುತ್ತಾ ಬರುತ್ತಿದ್ದಾರೆ. ರಾಮ ನವಮಿ, ಹನುಮ ಜಯಂತಿ ಸಂದರ್ಭದಲ್ಲಿ ಪೋಸ್ಟರ್ ರಿಲೀಸ್ ಮಾಡಿ ತಂಡ ಶುಭಕೋರಿತ್ತು. ಆದರೆ, ಯಾವಾಗ ಟೀಕೆಗಳು ಎದುರಾದವೋ ಆಗ ತಂಡ ತನ್ನ ನಿಲುವು ಬದಲಾಯಿಸಿದೆ.

‘ಆದಿಪುರುಷ್​’ ಹೀರೋ ಪ್ರಭಾಸ್​ಗೆ 150 ಕೋಟಿ ರೂ. ಸಂಬಳ; ಇನ್ನುಳಿದ ಕಲಾವಿದರಿಗೆ ಸಿಕ್ಕ ಸಂಭಾವನೆ ಎಷ್ಟು?

‘ಆದಿಪುರುಷ್ ಮಾಡರ್ನ್ ಮಾಡೋಕೆ ನಾವು ಪ್ರಯತ್ನಿಸಿಲ್ಲ. ಜನರು ಓದಿದ, ಕೇಳಿದ ರಾಮಾಯಣವನ್ನೇ ನಾವು ಹೇಳುತ್ತಿದ್ದೇವೆ’ ಎಂದು ‘ಆದಿಪುರುಷ್’ ತಂಡದ ಸಂಭಾಷಣಾಕಾರ ಮನೋಜ್ ಈ ಮೊದಲು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಸಿನಿಮಾ ರಿಲೀಸ್ ಆದ ಬಳಿಕ ನಿಲುವು ಬದಲಾಗಿದೆ. ‘ನಾವು ಈ ಮೊದಲಿನಿಂದಲೂ ಇದನ್ನೇ ಹೇಳುತ್ತಾ ಬರುತ್ತಿದ್ದೇವೆ. ನಾವು ರಾಮಯಾಣವನ್ನೇ ಸಿನಿಮಾ ಮಾಡಿಲ್ಲ. ರಾಮಾಯಣವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡಿದ್ದೇವೆ ಅಷ್ಟೇ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಆದಿಪುರುಷ್​’ ಪ್ರದರ್ಶನಕ್ಕೂ ಮುನ್ನ ಬರುವ ಸ್ಪಷ್ಟೀಕರಣದಲ್ಲಿ ಏನಿದೆ? ಚಿತ್ರತಂಡದ ಅಸಲಿ ವಾದ ಇಲ್ಲಿದೆ ನೋಡಿ..

ಈ ಎರಡೂ ಹೇಳಿಕೆಗಳನ್ನು ಜೋಡಿಸಿ ವಿಡಿಯೋಗಳನ್ನು ಹರಿಬಿಡಲಾಗಿದೆ. ‘ಆದಿಪುರುಷ್’ ತಂಡದವರು ಹೇಗೆ ಮಾತು ಬದಲಾಯಿಸುತ್ತಾರೆ ಎಂಬುದಕ್ಕೆ ಇವು ಸಾಕ್ಷಿ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಚಿತ್ರತಂಡದವರ ನಡೆಗೆ ಅನೇಕರಿಂದ ಟೀಕೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!