AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಹನುಮ ಜಯಂತಿ ಪ್ರಯುಕ್ತ ಹೊಸ ಪೋಸ್ಟರ್​ ಹಂಚಿಕೊಂಡ ‘ಆದಿಪುರುಷ್​’ ಚಿತ್ರತಂಡ

Hanuma Jayanti 2023: ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ಮೂಡಿಬರುತ್ತಿದೆ. ಜೂನ್​ 16ರಂದು ಈ ಚಿತ್ರ ಬಿಡುಗಡೆ ಆಗಲಿದೆ.

Adipurush: ಹನುಮ ಜಯಂತಿ ಪ್ರಯುಕ್ತ ಹೊಸ ಪೋಸ್ಟರ್​ ಹಂಚಿಕೊಂಡ ‘ಆದಿಪುರುಷ್​’ ಚಿತ್ರತಂಡ
ಆದಿಪುರುಷ್ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
|

Updated on:Apr 06, 2023 | 12:26 PM

Share

ಮುಖ್ಯಾಂಶಗಳು

  • ಓಂ ರಾವತ್​ ನಿರ್ದೇಶನದಲ್ಲಿ ಸಿದ್ಧವಾಗುತ್ತಿದೆ ‘ಆದಿಪುರುಷ್​’ ಸಿನಿಮಾ
  • ಹನುಮ ಜಯಂತಿ ದಿನ ರಿಲೀಸ್​ ಆಗಿದೆ ಆಂಜನೇಯನ ಪೋಸ್ಟರ್​
  • ಹನುಮಾನ್ ಪಾತ್ರದಲ್ಲಿ ಅಭಿನಯಿಸುತ್ತಿರುವ ನಟ ದೇವದತ್ತ ನಾಗೆ

ಎಲ್ಲೆಡೆ ಇಂದು (ಏಪ್ರಿಲ್​ 6) ಹನುಮ ಜಯಂತಿ (Hanuma Jayanti 2023) ಆಚರಿಸಲಾಗುತ್ತಿದೆ. ಆ ಸಂಭ್ರಮವನ್ನು ಹೆಚ್ಚಿಸುವ ರೀತಿಯಲ್ಲಿ ‘ಆದಿಪುರುಷ್​’ (Adipurush Movie) ತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಬಂಡೆಯ ಮೇಲೆ ಕುಳಿತು ಧ್ಯಾನ ಮಾಡುತ್ತಿರುವ ಆಂಜನೇಯನ ಪೋಸ್ಟರ್​ ಇದಾಗಿದ್ದು, ಹಿನ್ನೆಲೆಯಲ್ಲಿ ರಾಮನ ಪಾತ್ರ ಮಾಡಿರುವ ಪ್ರಭಾಸ್​ ಫೋಟೋ ಕಾಣಿಸಿದೆ. ಇದನ್ನು ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಈ ಮೊದಲು ರಿಲೀಸ್​ ಆದ ಪೋಸ್ಟರ್​ಗಳನ್ನು ಟ್ರೋಲ್​ ಮಾಡಲಾಗಿತ್ತು. ಆದರೆ ಹನುಮಂತದ ಪೋಸ್ಟರ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಓಂ ರಾವತ್​ (Om Raut) ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ಮೂಡಿಬರುತ್ತಿದೆ. ಜೂನ್​ 16ರಂದು ಈ ಚಿತ್ರ ಬಿಡುಗಡೆ ಆಗಲಿದೆ. ರಾಮನಾಗಿ ಪ್ರಭಾಸ್​, ಸೀತೆಯಾಗಿ ಕೃತಿ ಸನೋನ್​, ಲಕ್ಷ್ಮಣನಾಗಿ ಸನ್ನಿ ಸಿಂಗ್​​, ರಾವಣನಾಗಿ ಸೈಫ್​ ಅಲಿ ಖಾನ್​ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಆಂಜನೇಯನ ಪಾತ್ರಕ್ಕೆ ಹೆಚ್ಚು ಮಹತ್ವ ಇದೆ. ಈ ಪಾತ್ರದಲ್ಲಿ ದೇವದತ್ತ ನಾಗೆ ಅವರು ನಟಿಸುತ್ತಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಅವರನ್ನು ಕಂಡು ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ದೇವದತ್ತ ನಾಗೆ ಅವರು ಮಾರಾಠಿ ಧಾರಾವಾಹಿಯಲ್ಲಿ ಪೌರಾಣಿಕ ಪಾತ್ರ ಮಾಡಿ ಫೇಮಸ್​ ಆಗಿದ್ದಾರೆ. ‘ಒನ್ಸ್​ ಅಪಾನ್​ ಎ ಟೈಮ್ ಇನ್​ ಮುಂಬೈ ದೊಬಾರಾ​’, ‘ತಾನಾಜಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರನ್ನು ‘ಆದಿಪುರುಷ್​’ ಸಿನಿಮಾದಲ್ಲಿ ಹನುಮಂತನ ವೇಷದಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಪೋಸ್ಟರ್​ ವೈರಲ್​ ಆಗಿದೆ.

‘ಆದಿಪುರುಷ್​’ ಪೋಸ್ಟರ್​ ಮೇಲೆ ಕೇಸ್​:

ರಾಮನವಮಿ ಪ್ರಯುಕ್ತ ‘ಆದಿಪುರುಷ್​’ ಸಿನಿಮಾ ತಂಡದಿಂದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಯಿತು. ಆದರೆ ಅದನ್ನು ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಈ ವಿಷಯ ಈಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ. ನಿರ್ದೇಶಕ ಓಂ ರಾವತ್ ನಟ ಪ್ರಭಾಸ್​ ಸೇರಿದಂತೆ ಇಡೀ ಚಿತ್ರತಂಡದ ಮೇಲೆ ದೂರು ನೀಡಲಾಗಿದೆ. ಈ ಪೋಸ್ಟರ್​ನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?

ಸಂಜಯ್​ ದೀನನಾಥ್​ ತಿವಾರಿ ಎಂಬುವವರು ‘ಆದಿಪುರುಷ್​’ ಸಿನಿಮಾತಂಡದ ವಿರುದ್ಧ ದೂರು ನೀಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ರಾಮಚರಿತಮಾನಸದ ವಿವರಗಳನ್ನು ಆಕ್ಷೇಪಾರ್ಹವಾಗಿ ಚಿತ್ರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಮ ಧರಿಸಿದ ವಸ್ತ್ರ ಸರಿಯಾಗಿಲ್ಲ. ಜನಿವಾರವನ್ನು ತೆಗೆಯಲಾಗಿದೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿಂದೆ ಟೀಸರ್​ ಬಿಡುಗಡೆ ಆದಾಗಲೂ ಕಿರಿಕ್​ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Thu, 6 April 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ