AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Trailer: ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ: ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

​Adipurush Movie: ‘ಟಿ ಸೀರೀಸ್‌’ ಮೂಲಕ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗಿದೆ. ಪ್ರಭಾಸ್​, ಕೃತಿ ಸನೋನ್​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

Adipurush Trailer: ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ: ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು
ಪ್ರಭಾಸ್
ಮದನ್​ ಕುಮಾರ್​
|

Updated on: May 09, 2023 | 2:11 PM

Share

ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಜೂನ್​ 16ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಇಂದು (ಮೇ 9) ‘ಆದಿಪುರುಷ್​’ ಟ್ರೇಲರ್​ (Adipurush Trailer) ಬಿಡುಗಡೆ ಮಾಡುವ ಮೂಲಕ ಕೌತುಕ ಹೆಚ್ಚಿಸಲಾಗಿದೆ. ರಾಮಾಯಣವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ ಪ್ರಭಾಸ್​ (Prabhas), ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ (Adipurush) ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.

‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ
Image
ನಿಕ್ ನೇಮ್​ನಿಂದ ಪ್ರಭಾಸ್​ನ ಕರೆದ ಅನುಷ್ಕಾ ಶೆಟ್ಟಿ; ನಟಿ ಪ್ರೀತಿಯಿಂದ ಇಟ್ಟ ಹೆಸರೇನು?
Image
ಕ್ಷುಲ್ಲಕ ಕಾರಣಕ್ಕೆ ಪವನ್ ಕಲ್ಯಾಣ್ ಅಭಿಮಾನಿಯನ್ನು ಕೊಂದ ಪ್ರಭಾಸ್ ಅಭಿಮಾನಿ
Image
Adipurush: ವಿದೇಶಿ ಪ್ರೇಕ್ಷಕರಿಗೆ ಮೊದಲು ದರ್ಶನ ನೀಡಲಿರುವ ‘ಆದಿಪುರುಷ್​’; ಟ್ರೈಬ್ಯಾಕಾದಲ್ಲಿ ಪ್ರೀಮಿಯರ್​
Image
‘ಆದಿಪುರುಷ್​’ ಚಿತ್ರದ ಅವಧಿ ಬರೋಬ್ಬರಿ 3 ಗಂಟೆ; ಪ್ರಭಾಸ್ ಅಭಿಮಾನಿಗಳಿಗೆ ಶುರುವಾಯ್ತು ಚಿಂತೆ

ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!