AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗ ಅಧಿಕೃತ’; ನಟ ಸಿದ್ದಾರ್ಥ್ ಜೊತೆ ಹೊಸ ವರ್ಷ ಆಚರಿಸಿಕೊಂಡ ಅದಿತಿ

‘ಮಹಾ ಸಮುದ್ರಂ’ ಸಿನಿಮಾ ಸೆಟ್​ನಲ್ಲಿ ಅದಿತಿ ಹಾಗೂ ಸಿದ್ದಾರ್ಥ್ ಭೇಟಿ ಆದರು. ಆ ಬಳಿಕ ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆಯಿತು. ಈ ಗೆಳೆತನ ಪ್ರೀತಿ ಆಗಿ ಬದಲಾಗಿದೆ.

‘ಈಗ ಅಧಿಕೃತ’; ನಟ ಸಿದ್ದಾರ್ಥ್ ಜೊತೆ ಹೊಸ ವರ್ಷ ಆಚರಿಸಿಕೊಂಡ ಅದಿತಿ
ಅದಿತಿ-ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on: Jan 03, 2024 | 6:36 AM

Share

ನಟಿ ಅದಿತಿ ರಾವ್ ಹೈದರಿ (Aditi Rao Hydari) ಹಾಗೂ ನಟ ಸಿದ್ದಾರ್ಥ್ ಮೊದಲಿನಿಂದಲೂ ಡೇಟಿಂಗ್ ನಡೆಸುತ್ತಿದ್ದಾರೆ. ಆದರೆ, ಈ ವಿಚಾರವನ್ನು ಇವರು ನೇರವಾಗಿ ಒಪ್ಪಿಕೊಂಡಿಲ್ಲ. ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಇವರು ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾ ಇರುತ್ತಾರೆ. ಸಿದ್ದಾರ್ಥ್ ಸಿನಿಮಾ ರಿಲೀಸ್ ಆದರೆ ಅದಿತಿ ಬೆಂಬಲ ನೀಡುತ್ತಾರೆ. ಅದಿತಿ ಸಿನಿಮಾ ರಿಲೀಸ್ ಆಗುವ ಸಂದರ್ಭದಲ್ಲಿ ಸಿದ್ದಾರ್ಥ್ ಅವರು ಸಪೋರ್ಟ್ ಮಾಡುತ್ತಾರೆ. ಈಗ ಇಬ್ಬರೂ ಹೊಸ ವರ್ಷವನ್ನು ಒಟ್ಟಾಗಿ ಸ್ವಾಗತಿಸಿದ್ದಾರೆ. ಹಾಗಂತ ಗಾಸಿಪ್ ಮಂದಿ ಹೇಳುತ್ತಿರುವುದಲ್ಲ. ಸ್ವತಃ ಅದಿತಿ ರಾವ್ ಹೈದರಿ ಅವರು ಫೋಟೋ ಹಂಚಿಕೊಂಡಿದ್ದಾರೆ. ‘ಹಾಗಿದ್ದರೆ ಈಗ ನಿಮ್ಮ ಸಂಬಂಧ ಅಧಿಕೃತ ಆದಂತಾಯಿತು’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಸಿದ್ದಾರ್ಥ್ ಹಾಗೂ ಅದಿತಿ ಅವರು ಹಲವು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಅದಿತಿ ಬರ್ತ್​​ಡೇಗೆ ಸಾಕಷ್ಟು ಪ್ರೀತಿಯಿಂದ ಸಿದ್ದಾರ್ಥ್ ವಿಶ್ ಮಾಡಿದ್ದಿದೆ. ಅದಿತಿ ಅವರು ಕೂಡ ಸಿದ್ದಾರ್ಥ್​ ಜನ್ಮದಿನಕ್ಕೆ ಶುಭಾಶಯ ಕೋರಿದ್ದರು. ಈಗ ಇಬ್ಬರೂ ಒಟ್ಟಿಗೆ ಫೋಟೋ ಹಾಕುವ ಮೂಲಕ ಫ್ಯಾನ್ಸ್​ಗೆ ಸರ್​ಪ್ರೈಸ್ ನೀಡಿದ್ದಾರೆ. ಸಿದ್ದಾರ್ಥ್ ಹಾಗೂ ಅದಿತಿ ವಿದೇಶದಲ್ಲಿ ಸಮಯ ಕಳೆಯುತ್ತಿದ್ದಾರೆ. ಅಲ್ಲಿಂದಲೇ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

‘ಮಹಾ ಸಮುದ್ರಂ’ ಸಿನಿಮಾ ಸೆಟ್​ನಲ್ಲಿ ಅದಿತಿ ಹಾಗೂ ಸಿದ್ದಾರ್ಥ್ ಭೇಟಿ ಆದರು. ಆ ಬಳಿಕ ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆಯಿತು. ಈ ಗೆಳೆತನ ಪ್ರೀತಿ ಆಗಿ ಬದಲಾಗಿದೆ. ಅವರು ಶೀಘ್ರವೇ ಮದುವೆ ಆಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. 2024ರಲ್ಲಿ ಇವರ ಮದುವೆ ನಡೆಯಲಿದೆಯೇ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದ ನಟಿ ಅದಿತಿ ರಾವ್ ಹೈದರಿ; ಇಲ್ಲಿವೆ ಫೋಟೋಸ್

ಸಿದ್ದಾರ್ಥ್ ಅವರು ‘ಟೆಸ್ಟ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅದಿತಿ ರಾವ್ ಹೈದರಿ ಅವರು ‘ಗಾಂಧಿ ಟಾಕ್ಸ್​’ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಹೊಸ ವರ್ಷದ ಪ್ರಯುಕ್ತ ಇಬ್ಬರೂ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಿದೇಶ ಪ್ರಯಾಣ ಮಾಡಿದ್ದಾರೆ. ಶೀಘ್ರವೇ ಅವರು ಭಾರತಕ್ಕೆ ಮರಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್