AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ರೆಡಿ: ಪಂಚ್ ಡೈಲಾಗ್ ಹೊಡೆದ ನಟ ಅಡಿವಿಸೇಷ್

Adivi Sesh next movie: ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಕಾರಣ ಕೆಲವು ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಬದಲಾಯಿಸಿಕೊಂಡಿವೆ. ಆದರೆ ತೆಲುಗಿನ ‘ಡಕೈತ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದು, ತಾವೂ ಸಹ ‘ಟಾಕ್ಸಿಕ್’ ಬಿಡುಗಡೆ ದಿನಾಂಕದಂದೆ ಚಿತ್ರಮಂದಿರಕ್ಕೆ ಬರುತ್ತಿರುವುದಾಗಿ ಘೋಷಿಸಿದ್ದಾರೆ. ‘ಟಾಕ್ಸಿಕ್’ ಬಗ್ಗೆ ಭಯವಿಲ್ಲವೆಂದು ಸಿನಿಮಾ ಡೈಲಾಗ್ ಹೊಡೆದಿದ್ದಾರೆ ನಟ ಅಡಿವಿಸೇಷ್.

‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ರೆಡಿ: ಪಂಚ್ ಡೈಲಾಗ್ ಹೊಡೆದ ನಟ ಅಡಿವಿಸೇಷ್
Adivi Yash
ಮಂಜುನಾಥ ಸಿ.
|

Updated on: Dec 19, 2025 | 11:41 AM

Share

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ಈಗಾಗಲೇ ಘೋಷಿಸಿದ್ದಾರೆ ಯಶ್ ಮತ್ತು ತಂಡ. ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಕಾರಣ ಕೆಲವು ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಬದಲಾಯಿಸಿಕೊಂಡಿವೆ. ಆದರೆ ತೆಲುಗಿನ ‘ಡಕೈತ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದು, ತಾವೂ ಸಹ ‘ಟಾಕ್ಸಿಕ್’ ಬಿಡುಗಡೆ ದಿನಾಂಕದಂದೆ ಚಿತ್ರಮಂದಿರಕ್ಕೆ ಬರುತ್ತಿರುವುದಾಗಿ ಘೋಷಿಸಿದ್ದಾರೆ.

‘ಡಕೈತ್’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಈ ಸಂದರ್ಭ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಡಿವಿಸೇಷ್ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಯ್ತು. ‘ಮಾರ್ಚ್ 19 ‘ಡಕೈತ್’ ಸಿನಿಮಾ ಬಿಡುಗಡೆಗೆ ಒಳ್ಳೆಯ ಸಮಯ ಅಲ್ಲವೇನೋ? ಅದೇ ದಿನ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಸಹ ಬರುತ್ತಿವೆ. ಇಷ್ಟು ಪ್ಯಾಷನ್​​ನಿಂದ ಸಿನಿಮಾ ಮಾಡಿದ್ದೀರಿ, ಏಕೆ ಎರಡು ದೊಡ್ಡ ಸಿನಿಮಾಗಳ ನಡುವೆ ಬಿಡುಗಡೆ ಮಾಡುವ ನಿರ್ಣಯ ಮಾಡಿದ್ದೀರಿ’ ಎಂದು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಾರೆ.

ಉತ್ತರ ನೀಡಿರುವ ನಟ ಅಡಿವಿಸೇಷ್, ‘ಸ್ವಲ್ಪ ಹಳೆಯದ್ದನ್ನು ನೆನಪು ಮಾಡಿಕೊಳ್ಳಿ. 2023ರಲ್ಲಿ ನನ್ನ ನಟನೆಯ ‘ಮೇಜರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಯಶ್ ರಾಜ್ ಫಿಲಮ್ಸ್ ನಿರ್ಮಿಸಿ, ಅಕ್ಷಯ್ ಕುಮಾರ್ ನಟಿಸಿದ್ದ ‘ಪೃಥ್ವಿರಾಜ್’ ಸಿನಿಮಾ ಬಿಡುಗಡೆ ಆಗಿತ್ತು. ಅದೇ ಸಮಯದಲ್ಲಿ ಕಮಲ್ ಹಾಸನ್ ನಟನೆಯ ‘ವಿಕ್ರಂ’ ಸಿನಿಮಾ ಸಹ ಬಿಡುಗಡೆ ಆಗಿತ್ತು. ಆಗಲೂ ಇದೇ ಪ್ರಶ್ನೆಯನ್ನು ಕೇಳಲಾಗಿತ್ತು, ಆಗ ಕೊಟ್ಟಿದ್ದ ಉತ್ತರವನ್ನೇ ಈಗಲೂ ಕೊಡುತ್ತೇನೆ, ‘‘ಸಮುದ್ರದಲ್ಲಿ ಸಾಕಷ್ಟು ದೊಡ್ಡ ಮೀನುಗಳು ಇರಬಹುದು ಆದರೆ ನಾವು ಚಿನ್ನದ ಮೀನು (ಗೋಲ್ಡ್ ಫಿಶ್)’’ ಎಂದಿದ್ದಾರೆ.

ಇದನ್ನೂ ಓದಿ:ಯಶ್ ಅಂದ್ರೆ ಏನು ಎಂಬುದನ್ನು ವಿವರಿಸಿದ ರಾಧಿಕಾ

ಆ ಮೂಲಕ ಎಷ್ಟೇ ದೊಡ್ಡ ಸಿನಿಮಾಗಳು ಬಂದರೂ ಸಹ ನಾವು ಗೆಲ್ಲುವುದು ಪಕ್ಕಾ ಎಂದಿದ್ದಾರೆ ಅಡಿವಿಸೇಷ್. ಅವರ ನಟನೆಯ ‘ಡಕೈತ್’ ಸಿನಿಮಾನಲ್ಲಿ ಮೃಣಾಲ್ ಠಾಕೂರ್ ನಾಯಕಿ. ಸಿನಿಮಾನಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಕಾಶ್ ರೈ, ಸುನಿಲ್ ಅವರುಗಳು ಪ್ರಮುಖ ಪಾತ್ರದಲ್ಲಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಗಮನ ಸೆಳೆದಿದೆ. ಸಿನಿಮಾ ಸಹ ಚೆನ್ನಾಗಿ ಇರುವಂತಿದೆ ಆದರೂ ಎರಡು ದೊಡ್ಡ ಸಿನಿಮಾಗಳ ನಡುವೆ ಬಿಡುಗಡೆ ಮಾಡುವುದು ಒಳ್ಳೆಯ ನಿರ್ಧಾರವೇ ಎಂಬುದು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ.

ಅಡಿವಿಸೇಷ್ ಅವರು ಕೆಲವು ಒಳ್ಳೆಯ ಸಿನಿಮಾಗಳನ್ನು ನೀಡಿದ್ದಾರೆ. ‘ಗೂಢಚಾರಿ’, ‘ಮೇಜರ್’, ‘ಹಿಟ್: ದಿ ಸೆಕೆಂಡ್ ಕೇಸ್’ ಸಿನಿಮಾಗಳನ್ನು ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!