Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್​ ಯೂನಿವರ್ಸ್​ ಮೂರನೇ ರನ್ನರ್​ ಅಪ್​ ಅಡ್ಲಿನ್​ ಕಾಸ್ಟಿಲಿನೋಗೆ ಇದೆ ಮಂಗಳೂರು ಲಿಂಕ್​

ಅಡ್ಲಿನ್​ ಕಾಸ್ಟಿಲಿನೋ ಮ್ಯೂಸಿಕ್​ ವಿಡಿಯೋ ಮೂಲಕ ಎಲ್ಲರ ಗಮನಸೆಳೆದವರು. ಅರ್ಜುನ್​ ಕನುಂಗೋ ಅವರ ಮೆರೆ ದಿಲ್​ ವಿಚ್​ ಮ್ಯೂಸಿಕ್​ ವಿಡಿಯೋದಲ್ಲಿ ಅಡ್ಲಿನ್ ಕಾಣಿಸಿಕೊಂಡಿದ್ದರು.

ಮಿಸ್​ ಯೂನಿವರ್ಸ್​ ಮೂರನೇ ರನ್ನರ್​ ಅಪ್​ ಅಡ್ಲಿನ್​ ಕಾಸ್ಟಿಲಿನೋಗೆ ಇದೆ ಮಂಗಳೂರು ಲಿಂಕ್​
ಅಡ್ಲಿನ್​ ಕಾಸ್ಟಿಲಿನೋ
Follow us
ರಾಜೇಶ್ ದುಗ್ಗುಮನೆ
|

Updated on: May 17, 2021 | 7:50 PM

 69ನೇ ಮಿಸ್​ ಯೂನಿವರ್ಸ್​ ಸೌಂದರ್ಯ ಸ್ಪರ್ಧೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ. ಇದರಲ್ಲಿ ಆ್ಯಂಡಿಯಾ ಮೆಜಾ ಅವರು ಮಿಸ್​ ಯೂನಿವರ್ಸ್ ಆಗಿ ಹೊರ ಹೊಮ್ಮಿದ್ದಾರೆ. ಭಾರತದಿಂದ ಸ್ಪರ್ಧಿಸಿದ್ದ ಅಡ್ಲಿನ್​ ಕಾಸ್ಟಿಲಿನೋ ಮೂರನೇ ರನ್ನರ್​ ಅಪ್ ಆಗಿ ಎಲ್ಲರ ಗಮನ ಸೆಳೆದರು. ಇವರಿಗೆ ಮಂಗಳೂರು ಲಿಂಕ್​ ಇದೆ ಅನ್ನೋದು ವಿಶೇಷ.

ಅಡ್ಲಿನ್​ ಕಾಸ್ಟಿಲಿನೋ ಮ್ಯೂಸಿಕ್​ ವಿಡಿಯೋ ಮೂಲಕ ಎಲ್ಲರ ಗಮನಸೆಳೆದವರು. ಅರ್ಜುನ್​ ಕನುಂಗೋ ಅವರ ಮೆರೆ ದಿಲ್​ ವಿಚ್​ ಮ್ಯೂಸಿಕ್​ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದರು. ಇದು ಫೆಬ್ರವರಿಯಲ್ಲಿ ರಿಲೀಸ್​ ಆಗಿತ್ತು. ಈ ಹಾಡು ಸುಮಾರು 20 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಶ್ರೇಯಸ್​ ಧರ್ಮಾಧಿಕಾರಿ ಅವರ ತೆರೆ ಬಿನಾ ಮ್ಯೂಸಿಕ್​ ವಿಡಿಯೋದಲ್ಲೂ ಅವರು ನಟಿಸಿದ್ದರು. ಇದು 2019ರಲ್ಲಿ ತೆರೆಗೆ ಬಂದಿತ್ತು. ಅಡ್ಲಿನ್​ ಕಾಸ್ಟಿಲಿನೋ ಇನ್​ಸ್ಟಾಗ್ರಾಂನಲ್ಲಿ ಭಾನುವಾರ (ಮೇ 16) ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಮೂರನೇ ರನ್ನರ್​ ಅಪ್​ ಆದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಅಡ್ಲಿನ್​ ಕಾಸ್ಟಿಲಿನೋ ತಂದೆ-ತಾಯಿ ಮಂಗಳೂರು ಮೂಲದವರು. ಇವರು ಬೆಳೆದಿದ್ದು ಕುವಾಯಿತ್​ನಲ್ಲಿ. ಮಿಸ್​ ಯೂನಿವರ್ಸ್​ 2021ರಲ್ಲಿ ಅವರು ಭಾರತವನ್ನು ಪ್ರತಿನಿಧಿಸಿದ್ದರು.

ಮೆಕ್ಸಿಕೋದ ಸುಂದರಿ ಆ್ಯಂಡಿಯಾ ಮೆಜಾ ಅವರು 69ನೇ ಮಿಸ್​ ಯೂನಿವರ್ಸ್​ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿರುವ ಅವರು ಫ್ಯಾಷನ್​ ಲೋಕದಲ್ಲಿ ಸಾಧನೆ ಮಾಡಿದ್ದಾರೆ. ಮಿಸ್​ ಯೂನಿವರ್ಸ್​ ಕಿರೀಟ ಪಡೆದ ಮೆಕ್ಸಿಕೋದ ಮೂರನೇ ಸುಂದರಿಯಾಗಿ ಆ್ಯಂಡಿಯಾ ಮೆಜಾ ಹೊರ ಹೊಮ್ಮಿದ್ದಾರೆ. ಅವರಿಗೆ ವಿಶ್ವಾದ್ಯಂತ ಕೋಟ್ಯಂತರ ಜನರಿಂದ ಅಭಿನಂದನೆಗಳು ಸಲ್ಲಿಕೆ ಆಗುತ್ತಿವೆ.

ಮಿಸ್​ ಯೂನಿವರ್ಸ್​ ಅಂತಿಮ ಸುತ್ತಿನ ಸ್ಪರ್ಧೆ ಮೇ 16ರಂದು ಫ್ಲೋರಿಡಾದಲ್ಲಿ ನೆರವೇರಿತು. ಬ್ರೆಜಿಲ್​ನ ಜೂಲಿಯಾ ಗಾಮಾ ಅವರು ಮೊದಲ ರನ್ನರ್​ ಅಪ್​ ಆಗಿ ಹೊರಹೊಮ್ಮಿದರು. ಪೆರುವಿನ ಜೆನಿಕ್​ ಮಸೆಟಾ ಅವರು ಎರಡನೇ ರನ್ನರ್​ ಅಪ್​ ಸ್ಥಾನ ಪಡೆದುಕೊಂಡರು. ಭಾರತದಿಂದ ಸ್ಪರ್ಧಿಸಿದ್ದ ಅಡ್ಲಿನ್​ ಕಾಸ್ಟಿಲಿನೋ ಮೂರನೇ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಈ ಹಂತದವರೆಗೆ ಪೈಪೋಟಿ ನೀಡಿದ ಅಡ್ಲಿನ್​ ಕಾಸ್ಟಿಲಿನೋ ಅವರಿಗೂ ಅಭಿನಂದನೆ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ: ‘ನಮ್ಮ ಜನ ಸಾಯ್ತಿದ್ದಾರೆ’; ಮಿಸ್​ ಯೂನಿವರ್ಸ್​ ಸ್ಪರ್ಧೆಯಲ್ಲಿ ದೇಶಕ್ಕಾಗಿ ಧ್ವನಿ ಎತ್ತಿದ ಮ್ಯಾನ್ಮಾರ್​ ಸುಂದರಿ

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ