AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕ​ ಅದ್ನಾನ್​​ ಸಮಿ ಹೆಸರಲ್ಲಿದೆ ವಿಶೇಷ ದಾಖಲೆ

1995ರಲ್ಲಿ ಕೆಲ ಉರ್ದು ಹಾಡುಗಳನ್ನು ಹಾಡಿದ್ದರು. 2001ರಲ್ಲಿ ತೆರೆಕಂಡ ‘ಅಜ್ನಬೀ’ ಸಿನಿಮಾದಲ್ಲಿ ಹಾಡುವ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ನಂತರ ಬಾಲಿವುಡ್​ನಲ್ಲಿ ಸಾಕಷ್ಟು ಹಿಟ್​ ಹಾಡುಗಳನ್ನು ನೀಡಿದರು.

ಗಾಯಕ​ ಅದ್ನಾನ್​​ ಸಮಿ ಹೆಸರಲ್ಲಿದೆ ವಿಶೇಷ ದಾಖಲೆ
ಅದ್ನಾನ್​ ಸಮಿ
TV9 Web
| Edited By: |

Updated on:Nov 27, 2021 | 6:13 PM

Share

ಸಂಗೀತ ಸಂಯೋಜಕ, ಗಾಯಕ ಅದ್ನಾನ್​ ಸಮಿ ಸಾಕಷ್ಟು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾಕಷ್ಟು ಹಾಡುಗಳು ಅವರ ಕಂಠದಲ್ಲಿ ಮೂಡಿ ಬಂದಿದೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಧ್ವನಿಯನ್ನು ಸಾಕಷ್ಟು ಜನರು ಇಷ್ಟಪಡುತ್ತಾರೆ. ಅವರಿಗೆ ಸಾಕಷ್ಟು ಪ್ರಶಸ್ತಿಗಳು ಕೂಡ ಒಲಿದಿವೆ. ಇದರ ಜತೆಗೆ ಅವರ ಹೆಸರಲ್ಲಿ ವಿಶೇಷ ದಾಖಲೆ ಕೂಡ ಇದೆ. ಈ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಹಾಗಾದರೆ ಏನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. 

1995ರಲ್ಲಿ ಕೆಲ ಉರ್ದು ಹಾಡುಗಳನ್ನು ಹಾಡಿದ್ದರು. 2001ರಲ್ಲಿ ತೆರೆಕಂಡ ‘ಅಜ್ನಬೀ’ ಸಿನಿಮಾದಲ್ಲಿ ಹಾಡುವ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ನಂತರ ಬಾಲಿವುಡ್​ನಲ್ಲಿ ಸಾಕಷ್ಟು ಹಿಟ್​ ಹಾಡುಗಳನ್ನು ನೀಡಿದರು. ತೆಲುಗು, ತಮಿಳು ಸಿನಿಮಾಗಳನ್ನು ಕೂಡ ಅವರು ಹಾಡಿದ್ದಾರೆ. ಕನ್ನಡದ ಮೂರು ಸಿನಿಮಾಗಳ ಹಾಡಿಗೆ ಅವರು ಧ್ವನಿಯಾಗಿದ್ದಾರೆ. ಇವರ ಹೆಸರಲ್ಲಿ ಒಂದು ವಿಶೇಷ ದಾಖಲೆ ಇದೆ.

ವಿಶ್ವದಲ್ಲಿಯೇ ಅತಿ ವೇಗವಾಗಿ ಕೀಬೋರ್ಡ್​ ನುಡಿಸುವ ಕಲಾವಿದ ಎನ್ನುವ ದಾಖಲೆ ಅದ್ನಾನ್​ ಸಮಿ ಹೆಸರಲ್ಲಿದೆ. ಈ ದಾಖಲೆಯನ್ನು ಮುರಿಯೋಕೆ ಈವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ ಅನ್ನೊದು ವಿಶೇಷ. 2020ರ ಜನವರಿ 25ರಂದು ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ಇದಲ್ಲದೆ ಇನ್ನೂ ಅನೇಕ ಅವಾರ್ಡ್​ಗಳು ಅದ್ನಾನ್​ ಸಮಿಗೆ ಒಲಿದಿದೆ.  2019ರ ನಂತರ ಅವರು ಯಾವುದೇ ಸಿನಿಮಾ ಹಾಡಿಗೆ ಧ್ವನಿಯಾಗಿಲ್ಲ. ಅವರಿಗೆ ಐವತ್ತು ವರ್ಷ ವಯಸ್ಸಾಗಿದೆ. ಎರಡು ಸಿನಿಮಾದಲ್ಲಿ ಅವರು ನಟಿಸಿದ್ದಾರೆ ಅನ್ನೋದು ವಿಶೇಷ.

ಸಾಕಷ್ಟು ವಾದ್ಯಗಳನ್ನು ನುಡಿಸುವ ಕಲೆ ಕೂಡ ಅದ್ನಾನ್​ ಸಮಿಗೆ ಕರಗತವಾಗಿದೆ. ಪಿಯಾನೋ, ಕೀಬೋರ್ಡ್, ಗಿಟಾರ್​, ಸಾಕ್ಸೋಫೋನ್​, ವೈಲಿನ್​, ಡ್ರಮ್ಸ್​, ಎಲೆಕ್ಟ್ರಿಕ್​ ಗಿಟಾರ್​, ತಬಲಾ, ಸಂತೂರ್​, ಸಿತಾರ್​ ಮೊದಲಾದ ವಾದ್ಯಗಳನ್ನು ಅವರು ನುಡಿಸುತ್ತಾರೆ.

ಇದನ್ನೂ ಓದಿ: Kichcha Sudeep: ರವಿಚಂದ್ರನ್​ ನನ್ನ ಅಣ್ಣ ಎಂದ ಕಿಚ್ಚ ಸುದೀಪ್​

Samantha: ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​

Published On - 6:13 pm, Sat, 27 November 21

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?