AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚಾರ್ಯ’ ಸಿನಿಮಾ ರಿಲೀಸ್ ಆಗಿ 10 ತಿಂಗಳ ಬಳಿಕ ಸೆಟ್​​ಗೆ ಬಿತ್ತು ಬೆಂಕಿ; ಸಿಗರೇಟ್​ನಿಂದ ಸಂಭವಿಸಿತು ದುರಂತ

ಸಿನಿಮಾದಲ್ಲಿ ಬರುವ ಧರ್ಮಸ್ಥಲಿ ದೇವಸ್ಥಾನ, ಸುತ್ತಲೂ ಹಳ್ಳಿಯಂತಹ ಬೃಹತ್ ಸೆಟ್​​ನ ಇಲ್ಲಿ ನಿರ್ಮಿಸಲಾಗಿತ್ತು. ಈ ಸೆಟ್‌ಗೆ 20 ಕೋಟಿ ರೂ. ಖರ್ಚಾಗಿದೆ ಎಂದು ಹೇಳಲಾಗಿತ್ತು.

‘ಆಚಾರ್ಯ’ ಸಿನಿಮಾ ರಿಲೀಸ್ ಆಗಿ 10 ತಿಂಗಳ ಬಳಿಕ ಸೆಟ್​​ಗೆ ಬಿತ್ತು ಬೆಂಕಿ; ಸಿಗರೇಟ್​ನಿಂದ ಸಂಭವಿಸಿತು ದುರಂತ
ಆಚಾರ್ಯ ಸಿನಿಮಾ ಸೆಟ್
TV9 Web
| Edited By: |

Updated on: Feb 28, 2023 | 12:39 PM

Share

ಮೆಗಾಸ್ಟಾರ್ ಚಿರಂಜೀವಿ (Chiranjeevi) ಮತ್ತು ರಾಮ್ ಚರಣ್ ಅಭಿನಯದ ‘ಆಚಾರ್ಯ’ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದರು. ಈ ಚಿತ್ರ ಕಳೆದ ಏಪ್ರಿಲ್ 29 ರಂದು ಬಿಡುಗಡೆಯಾಯಿತು. ಈ ಸಿನಿಮಾ ರಿಲೀಸ್​ಗೂ ಮುನ್ನವೇ ಭಾರೀ ನಿರೀಕ್ಷೆ ಮೂಡಿಸಿತ್ತು. ಆದರೆ, ಈ ಸಿನಿಮಾ ಫ್ಲಾಪ್ ಆಯಿತು. ಈ ಚಿತ್ರದಿಂದ ನಿರ್ಮಾಪಕರಿಗೆ ಸಾಕಷ್ಟು ನಷ್ಟ ಉಂಟಾಯಿತು. ಈ ಸಿನಿಮಾಗಾಗಿ ಹೈದರಾಬಾದ್​​ನ ಕೋಕಾಪೇಟ್​​ನ (Kokapet) 20 ಎಕರೆಯಲ್ಲಿ ವಿಶೇಷ ಸೆಟ್ ನಿರ್ಮಿಸಲಾಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 10 ತಿಂಗಳ ಬಳಿಕ ಸೆಟ್​ಗೆ ಬೆಂಕಿ ಬಿದ್ದಿದೆ.

ಸಿನಿಮಾದಲ್ಲಿ ಬರುವ ಧರ್ಮಸ್ಥಲಿ ದೇವಸ್ಥಾನ, ಸುತ್ತಲೂ ಹಳ್ಳಿಯಂತಹ ಬೃಹತ್ ಸೆಟ್​​ನ ಇಲ್ಲಿ ನಿರ್ಮಿಸಲಾಗಿತ್ತು. ಈ ಸೆಟ್‌ಗೆ 20 ಕೋಟಿ ರೂ. ಖರ್ಚಾಗಿದೆ ಎಂದು ಹೇಳಲಾಗಿತ್ತು. ಖ್ಯಾತ ಕಲಾ ನಿರ್ದೇಶಕ ಸುರೇಶ್ ಈ ಸೆಟ್ ವಿನ್ಯಾಸಗೊಳಿಸಿದ್ದರು. ಸಿನಿಮಾ ಫ್ಲಾಪ್ ಆದರೂ ಚಿತ್ರದ ಸೆಟ್​​ಗಳು ಗಮನ ಸೆಳೆದಿದ್ದವು.  ಸಿನಿಮಾ ಮುಗಿದ ಬಳಿಕವೂ ಈ ಸೆಟ್‌ಗಳನ್ನು ಹಾಗೆಯೇ ಇಡಲಾಗಿತ್ತು. ಸೆಟ್​ನ ಒಂದಷ್ಟು ಭಾಗ ಬೆಂಕಿಗೆ ಆಹುತಿ ಆಗಿದೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ.

ಸೋಮವಾರ (ಫೆ.27) ರಾತ್ರಿ ಈ ಘಟನೆ ನಡೆದಿದೆ. ಸೆಟ್‌ನಲ್ಲಿ ಕಾಣಿಸಿಕೊಂಡ ಬೆಂಕಿ ದೊಡ್ಡದಾಗಿದೆ. ಸ್ಥಳೀಯರು ಸಮೀಪದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಧರ್ಮಸ್ಥಲಿ ದೇವಸ್ಥಾನ ಮತ್ತು ಅದರ ಸುತ್ತಮುತ್ತಲಿನ ಬಹುತೇಕ ಸೆಟ್​​ಗಳು ಸುಟ್ಟು ಭಸ್ಮವಾಗಿವೆ. ಇದರಿಂದ ಕೋಟ್ಯಂತರ ಮೌಲ್ಯದ ಸೆಟ್ ಕ್ಷಣಾರ್ಧದಲ್ಲಿ ಸುಟ್ಟು ಬೂದಿ ಆಗಿದೆ.

ಇದನ್ನೂ ಓದಿ
Image
Acharya Box Office: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ‘ಆಚಾರ್ಯ’; ಇದುವರೆಗೆ ಆದ ಕಲೆಕ್ಷನ್ ಎಷ್ಟು?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ
Image
‘ಕೆಜಿಎಫ್​ 2’ ಎದುರು 3ನೇ ವಾರವೂ ಮಂಕಾದ ಸ್ಟಾರ್​ ಸಿನಿಮಾಗಳು; ಇನ್ನೂ ನಿಂತಿಲ್ಲ ರಾಕಿ ಭಾಯ್​ ಹವಾ

ಇದನ್ನೂ ಓದಿ: ‘ಆಚಾರ್ಯ’ ಸಿನಿಮಾ ವಿತರಕರ ನಷ್ಟ ಭರಿಸಲು ಸಂಭಾವನೆಯನ್ನೇ ಹಿಂದಿರುಗಿಸಿದ ನಟ ಚಿರಂಜೀವಿ

ಸೆಟ್​​ನ ಬಳಿ ಕುಳಿತಿದ್ದ ವ್ಯಕ್ತಿ ಸಿಗರೇಟು ಹತ್ತಿಸಿದ್ದ. ಅದನ್ನು ಎಸೆದಾಗ ಬೆಂಕಿ ಹೊತ್ತಿಕೊಂಡಿದೆ. ಈ ಬಗ್ಗೆ ‘ಆಚಾರ್ಯ’ ತಂಡದಿಂದ ಯಾರೂ ಪ್ರತಿಕ್ರಿಯೆ ಕೊಟ್ಟಿಲ್ಲ. ‘ಆಚಾರ್ಯ’ ಚಿತ್ರವನ್ನು ರಾಮ್ ಚರಣ್ ಅವರೇ ನಿರ್ಮಿಸಿದ್ದರು. ಈ ಚಿತ್ರದ ಬಜೆಟ್ 140 ಕೋಟಿ ರೂಪಾಯಿ ಎನ್ನಲಾಗಿದೆ. ಆದರೆ, ಈ ಸಿನಿಮಾಗೆ 50 ಕೋಟಿ ರೂಪಾಯಿ ಬಿಸ್ನೆಸ್ ಮಾಡಲೂ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ