AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚಾರ್ಯ’ ಸಿನಿಮಾ ರಿಲೀಸ್ ಆಗಿ 10 ತಿಂಗಳ ಬಳಿಕ ಸೆಟ್​​ಗೆ ಬಿತ್ತು ಬೆಂಕಿ; ಸಿಗರೇಟ್​ನಿಂದ ಸಂಭವಿಸಿತು ದುರಂತ

ಸಿನಿಮಾದಲ್ಲಿ ಬರುವ ಧರ್ಮಸ್ಥಲಿ ದೇವಸ್ಥಾನ, ಸುತ್ತಲೂ ಹಳ್ಳಿಯಂತಹ ಬೃಹತ್ ಸೆಟ್​​ನ ಇಲ್ಲಿ ನಿರ್ಮಿಸಲಾಗಿತ್ತು. ಈ ಸೆಟ್‌ಗೆ 20 ಕೋಟಿ ರೂ. ಖರ್ಚಾಗಿದೆ ಎಂದು ಹೇಳಲಾಗಿತ್ತು.

‘ಆಚಾರ್ಯ’ ಸಿನಿಮಾ ರಿಲೀಸ್ ಆಗಿ 10 ತಿಂಗಳ ಬಳಿಕ ಸೆಟ್​​ಗೆ ಬಿತ್ತು ಬೆಂಕಿ; ಸಿಗರೇಟ್​ನಿಂದ ಸಂಭವಿಸಿತು ದುರಂತ
ಆಚಾರ್ಯ ಸಿನಿಮಾ ಸೆಟ್
TV9 Web
| Edited By: |

Updated on: Feb 28, 2023 | 12:39 PM

Share

ಮೆಗಾಸ್ಟಾರ್ ಚಿರಂಜೀವಿ (Chiranjeevi) ಮತ್ತು ರಾಮ್ ಚರಣ್ ಅಭಿನಯದ ‘ಆಚಾರ್ಯ’ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದರು. ಈ ಚಿತ್ರ ಕಳೆದ ಏಪ್ರಿಲ್ 29 ರಂದು ಬಿಡುಗಡೆಯಾಯಿತು. ಈ ಸಿನಿಮಾ ರಿಲೀಸ್​ಗೂ ಮುನ್ನವೇ ಭಾರೀ ನಿರೀಕ್ಷೆ ಮೂಡಿಸಿತ್ತು. ಆದರೆ, ಈ ಸಿನಿಮಾ ಫ್ಲಾಪ್ ಆಯಿತು. ಈ ಚಿತ್ರದಿಂದ ನಿರ್ಮಾಪಕರಿಗೆ ಸಾಕಷ್ಟು ನಷ್ಟ ಉಂಟಾಯಿತು. ಈ ಸಿನಿಮಾಗಾಗಿ ಹೈದರಾಬಾದ್​​ನ ಕೋಕಾಪೇಟ್​​ನ (Kokapet) 20 ಎಕರೆಯಲ್ಲಿ ವಿಶೇಷ ಸೆಟ್ ನಿರ್ಮಿಸಲಾಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 10 ತಿಂಗಳ ಬಳಿಕ ಸೆಟ್​ಗೆ ಬೆಂಕಿ ಬಿದ್ದಿದೆ.

ಸಿನಿಮಾದಲ್ಲಿ ಬರುವ ಧರ್ಮಸ್ಥಲಿ ದೇವಸ್ಥಾನ, ಸುತ್ತಲೂ ಹಳ್ಳಿಯಂತಹ ಬೃಹತ್ ಸೆಟ್​​ನ ಇಲ್ಲಿ ನಿರ್ಮಿಸಲಾಗಿತ್ತು. ಈ ಸೆಟ್‌ಗೆ 20 ಕೋಟಿ ರೂ. ಖರ್ಚಾಗಿದೆ ಎಂದು ಹೇಳಲಾಗಿತ್ತು. ಖ್ಯಾತ ಕಲಾ ನಿರ್ದೇಶಕ ಸುರೇಶ್ ಈ ಸೆಟ್ ವಿನ್ಯಾಸಗೊಳಿಸಿದ್ದರು. ಸಿನಿಮಾ ಫ್ಲಾಪ್ ಆದರೂ ಚಿತ್ರದ ಸೆಟ್​​ಗಳು ಗಮನ ಸೆಳೆದಿದ್ದವು.  ಸಿನಿಮಾ ಮುಗಿದ ಬಳಿಕವೂ ಈ ಸೆಟ್‌ಗಳನ್ನು ಹಾಗೆಯೇ ಇಡಲಾಗಿತ್ತು. ಸೆಟ್​ನ ಒಂದಷ್ಟು ಭಾಗ ಬೆಂಕಿಗೆ ಆಹುತಿ ಆಗಿದೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ.

ಸೋಮವಾರ (ಫೆ.27) ರಾತ್ರಿ ಈ ಘಟನೆ ನಡೆದಿದೆ. ಸೆಟ್‌ನಲ್ಲಿ ಕಾಣಿಸಿಕೊಂಡ ಬೆಂಕಿ ದೊಡ್ಡದಾಗಿದೆ. ಸ್ಥಳೀಯರು ಸಮೀಪದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಧರ್ಮಸ್ಥಲಿ ದೇವಸ್ಥಾನ ಮತ್ತು ಅದರ ಸುತ್ತಮುತ್ತಲಿನ ಬಹುತೇಕ ಸೆಟ್​​ಗಳು ಸುಟ್ಟು ಭಸ್ಮವಾಗಿವೆ. ಇದರಿಂದ ಕೋಟ್ಯಂತರ ಮೌಲ್ಯದ ಸೆಟ್ ಕ್ಷಣಾರ್ಧದಲ್ಲಿ ಸುಟ್ಟು ಬೂದಿ ಆಗಿದೆ.

ಇದನ್ನೂ ಓದಿ
Image
Acharya Box Office: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ‘ಆಚಾರ್ಯ’; ಇದುವರೆಗೆ ಆದ ಕಲೆಕ್ಷನ್ ಎಷ್ಟು?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ
Image
‘ಕೆಜಿಎಫ್​ 2’ ಎದುರು 3ನೇ ವಾರವೂ ಮಂಕಾದ ಸ್ಟಾರ್​ ಸಿನಿಮಾಗಳು; ಇನ್ನೂ ನಿಂತಿಲ್ಲ ರಾಕಿ ಭಾಯ್​ ಹವಾ

ಇದನ್ನೂ ಓದಿ: ‘ಆಚಾರ್ಯ’ ಸಿನಿಮಾ ವಿತರಕರ ನಷ್ಟ ಭರಿಸಲು ಸಂಭಾವನೆಯನ್ನೇ ಹಿಂದಿರುಗಿಸಿದ ನಟ ಚಿರಂಜೀವಿ

ಸೆಟ್​​ನ ಬಳಿ ಕುಳಿತಿದ್ದ ವ್ಯಕ್ತಿ ಸಿಗರೇಟು ಹತ್ತಿಸಿದ್ದ. ಅದನ್ನು ಎಸೆದಾಗ ಬೆಂಕಿ ಹೊತ್ತಿಕೊಂಡಿದೆ. ಈ ಬಗ್ಗೆ ‘ಆಚಾರ್ಯ’ ತಂಡದಿಂದ ಯಾರೂ ಪ್ರತಿಕ್ರಿಯೆ ಕೊಟ್ಟಿಲ್ಲ. ‘ಆಚಾರ್ಯ’ ಚಿತ್ರವನ್ನು ರಾಮ್ ಚರಣ್ ಅವರೇ ನಿರ್ಮಿಸಿದ್ದರು. ಈ ಚಿತ್ರದ ಬಜೆಟ್ 140 ಕೋಟಿ ರೂಪಾಯಿ ಎನ್ನಲಾಗಿದೆ. ಆದರೆ, ಈ ಸಿನಿಮಾಗೆ 50 ಕೋಟಿ ರೂಪಾಯಿ ಬಿಸ್ನೆಸ್ ಮಾಡಲೂ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ