AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Threat To Shah Rukh Khan: ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆದರಿಕೆ ಬಂದ ನಂತರ ಶಾರುಖ್ ಖಾನ್ ತಂಡ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಶಾರುಖ್‌ಗೆ ಬೆದರಿಕೆ ಬಂದ ಫೋನ್ ಫೈಜಾನ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಆತನ ಕೊನೆಯ ಸ್ಥಳ ರಾಯ್‌ಪುರದಲ್ಲಿ ಪತ್ತೆಯಾಗಿದೆ.

Threat To Shah Rukh Khan: ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ
ಶಾರೂಖ್ ಖಾನ್
ನಯನಾ ರಾಜೀವ್
|

Updated on:Nov 07, 2024 | 2:10 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆದರಿಕೆ ಬಂದ ನಂತರ ಶಾರುಖ್ ಖಾನ್ ತಂಡ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಶಾರುಖ್‌ಗೆ ಬೆದರಿಕೆ ಬಂದ ಫೋನ್ ಫೈಜಾನ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಆತನ ಕೊನೆಯ ಸ್ಥಳ ರಾಯ್‌ಪುರದಲ್ಲಿ ಪತ್ತೆಯಾಗಿದೆ.

ಮಹಾರಾಷ್ಟ್ರ ಪೊಲೀಸ್ ತಂಡ ರಾಯಪುರ ತಲುಪಿದೆ. ಮಹಾರಾಷ್ಟ್ರ ಪೊಲೀಸರು ಫೈಜಾನ್ ಖಾನ್ ಎಂಬ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಗೆ ಮೊಬೈಲ್ ನಿಂದ ಬೆದರಿಕೆ ಕರೆ ಬಂದಿದೆ. 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಹಲವು ದಿನಗಳಿಂದ ಗ್ಯಾಂಗ್​ಸ್ಟರ್​ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಲ್ಮಾನ್ ಹೆಸರಿನಲ್ಲಿ ಒಂದರ ಹಿಂದೆ ಒಂದರಂತೆ ಬೆದರಿಕೆಗಳು ಬರುತ್ತಿವೆ. ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಪೊಲೀಸರು ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 5, ಮಂಗಳವಾರ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಶಾರುಖ್ ಖಾನ್‌ಗೆ ಬೆದರಿಕೆಯ ದೂರು ದಾಖಲಾಗಿದೆ.

ಮತ್ತಷ್ಟು ಓದಿ: ಕೊಲೆ ಬೆದರಿಕೆಯ ಮಧ್ಯೆಯೂ ರಶ್ಮಿಕಾ ಜೊತೆ ಶೂಟ್​ನಲ್ಲಿ ಭಾಗಿ ಆದ ಸಲ್ಮಾನ್ ಖಾನ್

ನವೆಂಬರ್ 5 ರ ರಾತ್ರಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಬಂದಿತ್ತು. ಎದುರಿಗಿದ್ದವರ ಹೆಸರು ಕೇಳಿದಾಗ ಕಾನ್ಸ್ಟೇಬಲ್, ನಾನು ಯಾರು ಮತ್ತು ನಾನು ಎಲ್ಲಿಂದ ಮಾತನಾಡುತ್ತಿದ್ದೇನೆ ಎಂದು ಹೇಳುವುದರಿಂದ ಏನೂ ವ್ಯತ್ಯಾಸವಾಗುವುದಿಲ್ಲ, ನೀವು ಹೆಸರನ್ನು ಬರೆಯಲು ಬಯಸಿದರೆ ಹಿಂದೂಸ್ತಾನಿ ಎಂದು ಬರೆಯಿರಿ ಎಂದಿದ್ದ.

ಇದಾದ ನಂತರ ಕಾನ್‌ಸ್ಟೆಬಲ್ ತನ್ನ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದರು. ಇದೀಗ ಶಾರುಖ್ ತಂಡ ನೀಡಿದ ದೂರಿನ ಬಳಿಕ ತನಿಖೆ ಚುರುಕುಗೊಂಡಿದೆ. ಮುಂದಿನ ದಿನಗಳಲ್ಲಿ ಶಾರುಖ್ ಖಾನ್ ಅವರನ್ನೂ ಈ ವಿಚಾರದಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ. ಶಾರುಖ್ ಖಾನ್ ಅವರಿಗೆ ಬೆದರಿಕೆ ಹಾಕಿರುವ ಘಟನೆ ಕೆಲವು ದಿನಗಳ ಹಿಂದೆ ನಡೆದಿರಬಹುದು ಎನ್ನಲಾಗಿದೆ.

ಇತ್ತೀಚೆಗಷ್ಟೇ ಕಿಂಗ್ ಖಾನ್ ಹುಟ್ಟುಹಬ್ಬದ ದಿನವಾದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಅವರ ನಿವಾಸ ‘ಮನ್ನತ್’ ಎದುರು ಅಭಿಮಾನಿಗಳ ದಂಡು ಸೇರಲು ಬಿಡಲಿಲ್ಲ. ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಂದ್ರಾ ಪೊಲೀಸರು ಶೀಘ್ರದಲ್ಲೇ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:02 pm, Thu, 7 November 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ