HanuMan Movie: ‘ಆದಿಪುರುಷ್’ ಸೋತ ಬಳಿಕ ‘ಹನುಮಾನ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ; ನಡೆಯಲಿದೆ ಭರ್ಜರಿ ಕ್ಲ್ಯಾಶ್

ಜನವರಿ 12ರಂದು ’ಹನುಮಾನ್’ ಸಿನಿಮಾ ತೆರೆಗೆ ತರುವುದಾಗಿ ತಂಡ ತಿಳಿಸಿದೆ. ಇದು ಸಂಪೂರ್ಣವಾಗಿ ಪೌರಾಣಿಕ ಕಥೆಯನ್ನು ಹೊಂದಿರುವ ಚಿತ್ರ ಅಲ್ಲ.

HanuMan Movie: ‘ಆದಿಪುರುಷ್’ ಸೋತ ಬಳಿಕ ‘ಹನುಮಾನ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ; ನಡೆಯಲಿದೆ ಭರ್ಜರಿ ಕ್ಲ್ಯಾಶ್
ಹನುಮಾನ್
Follow us
|

Updated on: Jul 01, 2023 | 2:11 PM

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ (Adipurush Movie) ಇತ್ತೀಚೆಗೆ ರಿಲೀಸ್ ಆಗಿ ಫ್ಲಾಪ್ ಆಯಿತು. ಸಿನಿಮಾ ಬಗ್ಗೆ ಅನೇಕರು ನೆಗೆಟಿವ್ ವಿಮರ್ಶೆ ಕೊಟ್ಟರು. ಮಹಾಕಾವ್ಯವನ್ನು ಹಾಳು ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದವು. ಈ ಸಿನಿಮಾ ವಿರುದ್ಧ ಕೋರ್ಟ್​ನಲ್ಲಿ ಕೇಸ್ ಕೂಡ ದಾಖಲಾಯಿತು. ಸದ್ಯ ಈ ಸಿನಿಮಾ ಬಗ್ಗೆ ಹುಟ್ಟಿಕೊಂಡಿರುವ ಚರ್ಚೆ ನಿಂತಿಲ್ಲ. ಹೀಗಿರುವಾಗಲೇ ‘ಹನುಮಾನ್’ (HanuMan Movie) ಚಿತ್ರದ ರಿಲೀಸ್ ದಿನಾಂಕ ಅನೌನ್ಸ್ ಮಾಡಲಾಗಿದೆ. ಈ ಚಿತ್ರ 2024ರ ಜನವರಿ 12ರಂದು ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ಈಗಾಗಲೇ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಇವುಗಳ ಜೊತೆ ‘ಹನುಮಾನ್’ ಸಿನಿಮಾ ಸ್ಪರ್ಧೆ ಮಾಡಬೇಕಿದೆ.

‘ಹನುಮಾನ್’ ಸಿನಿಮಾದ ಟೀಸರ್ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರ ಈ ವರ್ಷ ಮೇ ತಿಂಗಳಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ವಿಎಫ್​ಎಕ್ಸ್ ಕೆಲಸಗಳು ಬಾಕಿ ಇದ್ದಿದ್ದರಿಂದ ಸಿನಿಮಾದ ರಿಲೀಸ್ ವಿಳಂಬ ಆಯಿತು. ಈಗ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಜನವರಿ 12ರಂದು ಸಿನಿಮಾ ತೆರೆಗೆ ತರುವುದಾಗಿ ತಂಡ ತಿಳಿಸಿದೆ. ಇದು ಸಂಪೂರ್ಣವಾಗಿ ಪೌರಾಣಿಕ ಕಥೆಯನ್ನು ಹೊಂದಿರುವ ಚಿತ್ರ ಅಲ್ಲ. ಹನುಮಂತನ ಪಾತ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ಬೇರೆಯದೇ ಕಥೆ ಹೇಳಲಾಗುತ್ತಿದೆ.

ಪ್ರಶಾಂತ್​ ವರ್ಮಾ ಅವರ ನಿರ್ದೇಶನ ಇರುವ ‘ಹನುಮಾನ್​’ ಚಿತ್ರಕ್ಕೆ, ತೇಜ ಸಜ್ಜಾ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ವರಲಕ್ಷ್ಮಿ ಶರತ್​ಕುಮಾರ್​, ವಿನಯ್ ರೈ, ಅಮೃತಾ ಅಯ್ಯರ್​, ವೆನ್ನೆಲಾ ಕಿಶೋರ್​, ರಾಜ್​ ದೀಪಕ್​ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಲಿದೆ.

ಇದನ್ನೂ ಓದಿ: Hanuman: ‘ಆದಿಪುರುಷ್​’ ಬಳಿಕ ‘ಹನುಮಾನ್​’ ಸಿನಿಮಾ ಮೇಲೆ ಮೂಡಿದೆ ನಿರೀಕ್ಷೆ: ಇದೂ ಸಹ ಪ್ಯಾನ್​ ಇಂಡಿಯಾ ಚಿತ್ರ

2024 ಸಂಕ್ರಾಂತಿಗೆ ಬಿಗ್ ಕ್ಲ್ಯಾಶ್ ಏರ್ಪಡುತ್ತಿದೆ. ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’, ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಮೊದಲಾದ ಸಿನಿಮಾಗಳು ಇದೇ ಸಂದರ್ಭದಲ್ಲಿ ರಿಲೀಸ್ ಆಗುತ್ತಿವೆ. ಇದರ ಜೊತೆ ‘ಹನುಮಾನ್​’ ಚಿತ್ರ ಕೂಡ ಸ್ಪರ್ಧೆಗೆ ಮುಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ