AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಆದಿಪುರುಷ್’ ಚಿತ್ರದ ಬಗ್ಗೆ ಟೀಕೆ; ಯಾರ ಕಣ್ಣಿಗೂ ಬಿದ್ದಿಲ್ಲ ಪ್ರಭಾಸ್​, ಕಾರಣವೇನು?

‘ಆದಿಪುರುಷ್​’ ಸಿನಿಮಾ ಟೀಕೆಗೆ ಒಳಗಾಗಿರುವುದಕ್ಕೂ ಅವರು ವಿದೇಶಕ್ಕೆ ತೆರಳಿರುವುದಕ್ಕೂ ಯಾವುದೇ ಸಂಬಂಧ ಇಲ್ಲ. ಇದಕ್ಕೆ ಅಸಲಿ ಕಾರಣ ಇಲ್ಲಿದೆ.

Prabhas: ‘ಆದಿಪುರುಷ್’ ಚಿತ್ರದ ಬಗ್ಗೆ ಟೀಕೆ; ಯಾರ ಕಣ್ಣಿಗೂ ಬಿದ್ದಿಲ್ಲ ಪ್ರಭಾಸ್​, ಕಾರಣವೇನು?
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jun 17, 2023 | 7:44 AM

Share

ಪ್ರಭಾಸ್ ರಾಮನಾಗಿ ಹಾಗೂ ಕೃತಿ ಸೋನನ್ (Kriti Sanon) ಸೀತೆಯಾಗಿ ನಟಿಸಿದ ‘ಆದಿಪುರುಷ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ರಾಮ ಹಾಗೂ ಹನುಮನ ಭಕ್ತರಿಗೆ ಸಿನಿಮಾ ಇಷ್ಟವಾಗಿದೆ. ಆದರೆ, ಒಂದು ವರ್ಗದ ಜನರು ಈ ಚಿತ್ರವನ್ನು ಬೇಕಾಬಿಟ್ಟಿ ಟೀಕೆ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹುಟ್ಟಿಕೊಂಡಿವೆ. ಇಷ್ಟೆಲ್ಲ ನಡೆಯುತ್ತಿದ್ದರೂ ಪ್ರಭಾಸ್ (Prabhas) ಅವರು ಎಲ್ಲಿಯೂ ಕಾಣಿಸಿಕೊಳ್ಳಲೇ ಇಲ್ಲ! ಇದಕ್ಕೆ ಕಾರಣ ಪ್ರಭಾಸ್ ಅಮೆರಿಕದಲ್ಲಿರುವುದು. ಅಂದಹಾಗೆ, ಸಿನಿಮಾ ಟೀಕೆಗೆ ಒಳಗಾಗಿರುವುದಕ್ಕೂ ಅವರು ವಿದೇಶಕ್ಕೆ ತೆರಳಿರುವುದಕ್ಕೂ ಯಾವುದೇ ಸಂಬಂಧ ಇಲ್ಲ.

‘ಆದಿಪುರುಷ್’ ಸಿನಿಮಾ ಯಶಸ್ಸು ಕಾಣಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ, ಟೀಸರ್ ಹಾಗೂ ಟ್ರೇಲರ್ ನೋಡಿದ ಒಂದು ವರ್ಗದ ಜನರಿಗೆ ಸಿನಿಮಾ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಪಡೆಯಬಹುದು ಎಂಬ ಅಂದಾಜು ಇತ್ತು. ಹೀಗಾಗಿ ಸಿನಿಮಾ ಟೀಕೆಗೆ ಗುರಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಈಗ ಹಾಗೆಯೇ ಆಗಿದೆ. ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿವೆ. ಹೀಗಿರುವಾಗಲೇ ಪ್ರಭಾಸ್ ಅಮೆರಿಕಕ್ಕೆ ತೆರಳಿದ್ದಾರೆ. ಇದರ ಹಿಂದೆ ಬೇರೆಯದೇ ಕಾರಣ ಇದೆ.

‘ಆದಿಪುರುಷ್’ ಸಿನಿಮಾ ಅಮೆರಿಕದಲ್ಲೂ ರಿಲೀಸ್ ಆಗಿದೆ. ಅಲ್ಲಿರುವ ಭಾರತೀಯರು ಈ ಸಿನಿಮಾ ವೀಕ್ಷಿಸುತ್ತಿದ್ದಾರೆ. ಅಲ್ಲಿನ ಜನರ ಜೊತೆ ಕುಳಿತು ಪ್ರಭಾಸ್ ಈ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇತ್ತೀಚೆಗೆ ಶೂಟಿಂಗ್ ವೇಳೆ ಅವರು ಗಾಯಗೊಂಡಿದ್ದರು. ಈ ವೇಳೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಒಂದು ತಿಂಗಳು ವಿಶ್ರಾಂತಿ ಪಡೆದಿದ್ದರು. ಈಗ ಮತ್ತೊಮ್ಮೆ ಅವರು ಸರ್ಜರಿಗೆ ಒಳಗಾಗಬೇಕಿದೆ. ಇಷ್ಟು ದಿನ ‘ಆದಿಪುರುಷ್’ ಪ್ರಚಾರದಲ್ಲಿ ಬ್ಯುಸಿ ಇದ್ದ ಅವರು ಈಗ ಬ್ರೇಕ್ ಪಡೆಯುತ್ತಿದ್ದಾರೆ. ಈ ಕಾರಣಕ್ಕೆ ಸರ್ಜರಿಗೆ ಒಳಗಾಗೋದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: Adipurush Movie: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

‘ಆದಿಪುರುಷ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಇನ್ನು ಕೆಲವೇ ಸಮಯದಲ್ಲಿ ಈ ಚಿತ್ರದ ಕಲೆಕ್ಷನ್ ಕುರಿತು ಮಾಹಿತಿ ಸಿಗಲಿದೆ. ಮೊದಲ ದಿನ ಈ ಚಿತ್ರ ಒಳ್ಳೆಯ ಗಳಿಕೆ ಮಾಡಲಿದೆ. ವಾರದ ದಿನಗಳಲ್ಲಿ ಸಿನಿಮಾ ಹೇಗೆ ಪರ್ಫಾರ್ಮ್ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?