ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

Indian Idol 12: ಫೇಕ್​ ಲವ್​ ಸ್ಟೋರಿಗಳನ್ನು ಸೃಷ್ಟಿಸಿ ಜನರನ್ನು ಸೆಳೆಯುವ ತಂತ್ರ ನಡೆಯುತ್ತಿದೆ. ನಿಜವಾದ ಟ್ಯಾಲೆಂಟ್​ಗೆ ಬೆಲೆ ನೀಡುವ ಬದಲು ಇಂಥ ಫೇಕ್​ ಲವ್​​ಸ್ಟೋರಿ ಮತ್ತು ಸ್ಪರ್ಧಿಗಳ ಬಡತನವನ್ನು ಮುಂದಿಟ್ಟುಕೊಂಡು ಶೋ ನಡೆಸುತ್ತಿರುವುದು ಸರಿಯಲ್ಲ ಎಂದು ಅಭಿಜೀತ್​ ಸಾವಂತ್ ಟೀಕೆ ಮಾಡಿದ್ದಾರೆ.

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ
ಇಂಡಿಯನ್ ಐಡಲ್ 12
Follow us
| Updated By: ರಾಜೇಶ್ ದುಗ್ಗುಮನೆ

Updated on: May 21, 2021 | 3:32 PM

ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಬಗ್ಗೆ ಪರ-ವಿರೋಧದ ಅನೇಕ ಚರ್ಚೆಗಳು ಸೋಶಿಯಲ್​ ಮೀಡಿಯಾದಲ್ಲಿ ನಡೆದಿದೆ. ಹಿಂದಿಯ ‘ಇಂಡಿಯನ್​ ಐಡಲ್​ 12’ ಸಿಂಗಿಂಗ್​ ರಿಯಾಲಿಟಿ ಶೋ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿದೆ. ‘ಇಂಡಿಯನ್​ ಐಡಲ್​ 12’ ಬಗ್ಗೆ ಈಗ ಇಂಡಿಯನ್​ ಐಡಲ್​ ಮೊದಲ ಸೀಸನ್​ನ ವಿನ್ನರ್​ ಅಭಿಜೀತ್​ ಸಾವಂತ್​ ಮಾತನಾಡಿದ್ದಾರೆ.

ಈ ರೀತಿಯ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಗಳ ನಡುವಿನ ಲವ್​ಸ್ಟೋರಿಯನ್ನು ತೋರಿಸಲಾಗುತ್ತದೆ. ಆದರೆ ಅದು ನಿಜವಾದ ಪ್ರೇಮಕಥೆ ಆಗಿರುವುದಿಲ್ಲ. ಫೇಕ್​ ಲವ್​ ಸ್ಟೋರಿಗಳನ್ನು ಸೃಷ್ಟಿಸಿ ಜನರನ್ನು ಸೆಳೆಯುವ ತಂತ್ರ ನಡೆಯುತ್ತಿದೆ. ನಿಜವಾದ ಟ್ಯಾಲೆಂಟ್​ಗೆ ಬೆಲೆ ನೀಡುವ ಬದಲು ಇಂಥ ಫೇಕ್​ ಲವ್​​ಸ್ಟೋರಿ ಮತ್ತು ಸ್ಪರ್ಧಿಗಳ ಬಡತನವನ್ನು ಮುಂದಿಟ್ಟುಕೊಂಡು ಶೋ ನಡೆಸುತ್ತಿರುವುದು ಸರಿಯಲ್ಲ ಎಂದು ಅಭಿಜೀತ್​ ಸಾವಂತ್ ಟೀಕೆ ಮಾಡಿದ್ದಾರೆ.

‘ಇಂಡಿಯನ್​ ಐಡಲ್​ 12’ರ ಸ್ಪರ್ಧಿಗಳಾದ ಪವನ್​ ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಅದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಇತ್ತೀಚೆಗೆ ಈ ಕಾರ್ಯಕ್ರಮದಲ್ಲಿ ಲೆಜೆಂಡರಿ ಗಾಯಕ ಕಿಶೋರ್​ ಕುಮಾರ್​ ಅವರಿಗೆ ನಮನ ಸಲ್ಲಿಸುವ ಸಲುವಾಗಿ ವಿಶೇಷ ಎಪಿಸೋಡ್​ ನಡೆಸಲಾಯಿತು. ಆ ಎಪಿಸೋಡ್​ ಸರಿಯಾಗಿ ಮೂಡಿಬಂದಿಲ್ಲ ಹಾಗೂ ಕಿಶೋರ್​ ಕುಮಾರ್​ಗೆ ಅಗೌರವ ಸೂಚಿಸಿದಂತಾಗಿದೆ ಎಂದು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ಈ ವಿಶೇಷ ಎಪಿಸೋಡ್​ಗಳಲ್ಲಿ ಮುಖ್ಯ ಅತಿಥಿಯಾಗಿ ಕಿಶೋರ್​ ಕುಮಾರ್​ ಅವರ ಮಗ ಅಮಿತ್​ ಕುಮಾರ್​ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಬಂದ ಬಳಿಕ ಅವರು ಕೂಡ ‘ಇಂಡಿಯನ್​ ಐಡಲ್​ 12’ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ‘ನನಗೆ ಆ ಶೋ ಖಂಡಿತಾ ಇಷ್ಟ ಆಗಲಿಲ್ಲ. ಎಲ್ಲ ಸ್ಪರ್ಧಿಗಳನ್ನು ಹೊಗಳಬೇಕು ಎಂದು ಆಯೋಜಕರು ಹೇಳಿದ್ದರು. ಅದರಂತೆ ನಾನು ನಡೆದುಕೊಂಡೆ’ ಎಂದು ಮಾಧ್ಯಮವೊಂದಕ್ಕೆ ಅಮಿತ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದರು. ಹೀಗೆ ಎಲ್ಲ ಕಡೆಗಳಿಂದಲೂ ಇಂಡಿಯನ್​ ಐಡಲ್​ ಕಾರ್ಯಕ್ರಮದ ಬಗ್ಗೆ ಟೀಕೆ ಕೇಳಿಬರುತ್ತಿದೆ.

ಇದನ್ನೂ ಓದಿ:

IPL ಅಭಿಮಾನಿಗಳನ್ನು ಕೆಣಕಿದ ಇಂಡಿಯನ್​ ಐಡಲ್​ ನಿರೂಪಕ ಆದಿತ್ಯ ನಾರಾಯಣ್​; ಆರೋಪ ಒಪ್ಪಿಕೊಳ್ತಾರಾ ಪ್ರೇಕ್ಷಕರು?

Bigg Boss: ಕೊವಿಡ್​ ನಿಯಮ ಉಲ್ಲಂಘನೆ; ಬಿಗ್​ ಬಾಸ್​ ಮನೆ ಸೀಜ್​, 1 ಲಕ್ಷ ರೂಪಾಯಿ ದಂಡ