AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

Indian Idol 12: ಫೇಕ್​ ಲವ್​ ಸ್ಟೋರಿಗಳನ್ನು ಸೃಷ್ಟಿಸಿ ಜನರನ್ನು ಸೆಳೆಯುವ ತಂತ್ರ ನಡೆಯುತ್ತಿದೆ. ನಿಜವಾದ ಟ್ಯಾಲೆಂಟ್​ಗೆ ಬೆಲೆ ನೀಡುವ ಬದಲು ಇಂಥ ಫೇಕ್​ ಲವ್​​ಸ್ಟೋರಿ ಮತ್ತು ಸ್ಪರ್ಧಿಗಳ ಬಡತನವನ್ನು ಮುಂದಿಟ್ಟುಕೊಂಡು ಶೋ ನಡೆಸುತ್ತಿರುವುದು ಸರಿಯಲ್ಲ ಎಂದು ಅಭಿಜೀತ್​ ಸಾವಂತ್ ಟೀಕೆ ಮಾಡಿದ್ದಾರೆ.

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ
ಇಂಡಿಯನ್ ಐಡಲ್ 12
ಮದನ್​ ಕುಮಾರ್​
| Edited By: |

Updated on: May 21, 2021 | 3:32 PM

Share

ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಬಗ್ಗೆ ಪರ-ವಿರೋಧದ ಅನೇಕ ಚರ್ಚೆಗಳು ಸೋಶಿಯಲ್​ ಮೀಡಿಯಾದಲ್ಲಿ ನಡೆದಿದೆ. ಹಿಂದಿಯ ‘ಇಂಡಿಯನ್​ ಐಡಲ್​ 12’ ಸಿಂಗಿಂಗ್​ ರಿಯಾಲಿಟಿ ಶೋ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿದೆ. ‘ಇಂಡಿಯನ್​ ಐಡಲ್​ 12’ ಬಗ್ಗೆ ಈಗ ಇಂಡಿಯನ್​ ಐಡಲ್​ ಮೊದಲ ಸೀಸನ್​ನ ವಿನ್ನರ್​ ಅಭಿಜೀತ್​ ಸಾವಂತ್​ ಮಾತನಾಡಿದ್ದಾರೆ.

ಈ ರೀತಿಯ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಗಳ ನಡುವಿನ ಲವ್​ಸ್ಟೋರಿಯನ್ನು ತೋರಿಸಲಾಗುತ್ತದೆ. ಆದರೆ ಅದು ನಿಜವಾದ ಪ್ರೇಮಕಥೆ ಆಗಿರುವುದಿಲ್ಲ. ಫೇಕ್​ ಲವ್​ ಸ್ಟೋರಿಗಳನ್ನು ಸೃಷ್ಟಿಸಿ ಜನರನ್ನು ಸೆಳೆಯುವ ತಂತ್ರ ನಡೆಯುತ್ತಿದೆ. ನಿಜವಾದ ಟ್ಯಾಲೆಂಟ್​ಗೆ ಬೆಲೆ ನೀಡುವ ಬದಲು ಇಂಥ ಫೇಕ್​ ಲವ್​​ಸ್ಟೋರಿ ಮತ್ತು ಸ್ಪರ್ಧಿಗಳ ಬಡತನವನ್ನು ಮುಂದಿಟ್ಟುಕೊಂಡು ಶೋ ನಡೆಸುತ್ತಿರುವುದು ಸರಿಯಲ್ಲ ಎಂದು ಅಭಿಜೀತ್​ ಸಾವಂತ್ ಟೀಕೆ ಮಾಡಿದ್ದಾರೆ.

‘ಇಂಡಿಯನ್​ ಐಡಲ್​ 12’ರ ಸ್ಪರ್ಧಿಗಳಾದ ಪವನ್​ ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಅದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಇತ್ತೀಚೆಗೆ ಈ ಕಾರ್ಯಕ್ರಮದಲ್ಲಿ ಲೆಜೆಂಡರಿ ಗಾಯಕ ಕಿಶೋರ್​ ಕುಮಾರ್​ ಅವರಿಗೆ ನಮನ ಸಲ್ಲಿಸುವ ಸಲುವಾಗಿ ವಿಶೇಷ ಎಪಿಸೋಡ್​ ನಡೆಸಲಾಯಿತು. ಆ ಎಪಿಸೋಡ್​ ಸರಿಯಾಗಿ ಮೂಡಿಬಂದಿಲ್ಲ ಹಾಗೂ ಕಿಶೋರ್​ ಕುಮಾರ್​ಗೆ ಅಗೌರವ ಸೂಚಿಸಿದಂತಾಗಿದೆ ಎಂದು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ಈ ವಿಶೇಷ ಎಪಿಸೋಡ್​ಗಳಲ್ಲಿ ಮುಖ್ಯ ಅತಿಥಿಯಾಗಿ ಕಿಶೋರ್​ ಕುಮಾರ್​ ಅವರ ಮಗ ಅಮಿತ್​ ಕುಮಾರ್​ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಬಂದ ಬಳಿಕ ಅವರು ಕೂಡ ‘ಇಂಡಿಯನ್​ ಐಡಲ್​ 12’ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ‘ನನಗೆ ಆ ಶೋ ಖಂಡಿತಾ ಇಷ್ಟ ಆಗಲಿಲ್ಲ. ಎಲ್ಲ ಸ್ಪರ್ಧಿಗಳನ್ನು ಹೊಗಳಬೇಕು ಎಂದು ಆಯೋಜಕರು ಹೇಳಿದ್ದರು. ಅದರಂತೆ ನಾನು ನಡೆದುಕೊಂಡೆ’ ಎಂದು ಮಾಧ್ಯಮವೊಂದಕ್ಕೆ ಅಮಿತ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದರು. ಹೀಗೆ ಎಲ್ಲ ಕಡೆಗಳಿಂದಲೂ ಇಂಡಿಯನ್​ ಐಡಲ್​ ಕಾರ್ಯಕ್ರಮದ ಬಗ್ಗೆ ಟೀಕೆ ಕೇಳಿಬರುತ್ತಿದೆ.

ಇದನ್ನೂ ಓದಿ:

IPL ಅಭಿಮಾನಿಗಳನ್ನು ಕೆಣಕಿದ ಇಂಡಿಯನ್​ ಐಡಲ್​ ನಿರೂಪಕ ಆದಿತ್ಯ ನಾರಾಯಣ್​; ಆರೋಪ ಒಪ್ಪಿಕೊಳ್ತಾರಾ ಪ್ರೇಕ್ಷಕರು?

Bigg Boss: ಕೊವಿಡ್​ ನಿಯಮ ಉಲ್ಲಂಘನೆ; ಬಿಗ್​ ಬಾಸ್​ ಮನೆ ಸೀಜ್​, 1 ಲಕ್ಷ ರೂಪಾಯಿ ದಂಡ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?