AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಹಮಾನ್ ವಿಚ್ಛೇದನದ ಬಳಿಕ ದೊಡ್ಡ ಬೆಳವಣಿಗೆ; ಗಾಯಕನ ತಂಡದಲ್ಲಿದ್ದವಳಿಂದಲೂ ಡಿವೋರ್ಸ್ ಘೋಷಣೆ

ರೆಹಮಾನ್ ಅವರು ತಮ್ಮದೇ ಟ್ರೂಫ್ ಹೊಂದಿದ್ದಾರೆ. ಈ ಟ್ರೂಫ್​ನಲ್ಲಿ ಮೋಹಿನಿ ಅವರು ಬಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೋಹಿನಿ ಮ್ಯೂಸಿಕ್ ಕಂಪೋಸರ್ ಮಾರ್ಕ್ ಎಂಬುವವರ ಜೊತೆ ವಿವಾಹ ಆಗಿದ್ದರು. ಈಗ ಇಬ್ಬರೂ ವಿಚ್ಛೇದನ ಘೋಷಣೆ ಮಾಡಿದ್ದಾರೆ.

ರೆಹಮಾನ್ ವಿಚ್ಛೇದನದ ಬಳಿಕ ದೊಡ್ಡ ಬೆಳವಣಿಗೆ; ಗಾಯಕನ ತಂಡದಲ್ಲಿದ್ದವಳಿಂದಲೂ ಡಿವೋರ್ಸ್ ಘೋಷಣೆ
ಮೋಹಿನಿ-ರೆಹಮಾನ್
ರಾಜೇಶ್ ದುಗ್ಗುಮನೆ
|

Updated on:Nov 20, 2024 | 2:38 PM

Share

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಅವರು ಪತ್ನಿ ಸೈರಾ ಬಾನು ಜೊತೆ ವಿಚ್ಛೇದನ ಘೋಷಣೆ ಮಾಡಿದ್ದಾರೆ. ಇದು ಅನೇಕರಿಗೆ ಶಾಕಿಂಗ್ ಎನಿಸಿದೆ. ಇವರ ವಿಚ್ಛೇದನಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ. ಹೀಗಿರುವಾಗಲೇ ಅವರ ಟ್ರೂಫ್​ನಲ್ಲೇ ಇದ್ದ ಮೋಹಿನಿ ಡೇ ಕೂಡ ಡಿವೋರ್ಸ್ ಘೋಷಣೆ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ರೆಹಮಾನ್ ಅವರು ತಮ್ಮದೇ ಟ್ರೂಫ್ ಹೊಂದಿದ್ದಾರೆ. ಈ ಟ್ರೂಫ್​ನಲ್ಲಿ ಮೋಹಿನಿ ಅವರು ಬಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೋಹಿನಿ ಮ್ಯೂಸಿಕ್ ಕಂಪೋಸರ್ ಮಾರ್ಕ್ ಎಂಬುವವರ ಜೊತೆ ವಿವಾಹ ಆಗಿದ್ದರು. ಈಗ ಇಬ್ಬರೂ ವಿಚ್ಛೇದನ ಘೋಷಣೆ ಮಾಡಿದ್ದಾರೆ. ರೆಹಮಾನ್ ವಿಚ್ಛೇದನ ಘೋಷಣೆಯ ಬೆನ್ನಲ್ಲೇ ಮೋಹಿನಿ ಈ ಘೋಷಣೆ ಮಾಡಿದ್ದಾರೆ. ಒಂದೇ ದಿನ ಇಬ್ಬರೂ ಡಿವೋರ್ಸ್​ ಘೋಷಣೆ ಮಾಡಿರುವುದು ಕಾಕತಾಳೀಯವೂ ಆಗಿರಬಹುದು ಎಂದು ಕೆಲವರು ಊಹಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಮೋಹಿನಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಭಾರದ ಮನಸ್ಸಿನಿಂದ ನಾನು ಹಾಗೂ ಮಾರ್ಕ್ ಬೇರೆ ಆಗುತ್ತಿದ್ದೇವೆ. ಇಬ್ಬರೂ ಪರಸ್ಪರ ಸಮ್ಮತಿಯಿಂದ ದೂರ ಆಗುತ್ತಿದ್ದೇವೆ. ನಮ್ಮ ಜೀವನದಲ್ಲಿ ಇಬ್ಬರಿಗೂ ಬೇರೆ ಬೇರೆ ಅಂಶಗಳು ಬೇಕಾಗಿವೆ. ಪರಸ್ಪರ ಒಪ್ಪಂದ ಪಡೆದು ಬೇರೆ ಆಗುತ್ತಿದ್ದೇವೆ’ ಎಂದು ಮೋಹಿನಿ ಬರೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿತನಕ್ಕೆ ಆದ್ಯತೆ ನೀಡಿ ಎಂದುಕೋರಿದ್ದಾರೆ.

ಮೋಹಿನಿ ಡೇ ಅವರು ವಿಚ್ಛೇದನದ ಬಳಿಕ ಸುಮ್ಮನೆ ಕೂರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರು ಮುಂದಿನ ದಿನಗಳಲ್ಲಿ ವಿವಿಧ ಪ್ರಾಜೆಕ್ಟ್​ಗಳಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿಕೊಂಡಿದ್ದಾರೆ. ರೆಹಮಾನ್ ಅವರ 40ಕ್ಕೂ ಅಧಿಕ ಶೋಗಳಲ್ಲಿ ಮೋಹಿನಿ ಕೆಲಸ ಮಾಡಿದ್ದಾರೆ. ಅವರು ಕೋಲ್ಕತ್ತಾ ಮೂಲದವರು. ಅವರಿಗೆ ಈಗಿನ್ನೂ 29 ವರ್ಷ.  ಸದ್ಯ ವಿಚ್ಛೇದನ ಘೋಷಣೆ ಮಾಡಿರುವ ಪೋಸ್ಟ್​ಗೆ ಕಮೆಂಟ್ ಆಯ್ಕೆಯನ್ನು ಅವರು ನೀಡಿಲ್ಲ.

ಇದನ್ನೂ ಓದಿ: ಎಆರ್ ರೆಹಮಾನ್ ಹಾಗೂ ಸೈರಾ ಬಾನು ವಿಚ್ಛೇದನಕ್ಕೆ ಕೊನೆಗೂ ಸಿಕ್ಕಿತು ಕಾರಣ

ರೆಹಮಾನ್ ಅವರ ವಿಚಾರಕ್ಕೆ ಬರೋದಾದರೆ 1995ರಲ್ಲಿ ಸೈರಾ ಬಾನು ಜೊತೆ ರೆಹಮಾನ್ ವಿವಾಹ ನೆರವೇರಿತು. ಇಬ್ಬರೂ 29 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದರು. ಆದರೆ, ಇವರು ಈಗ ಬೇರೆ ಆಗುವ ಘೋಷಣೆ ಮಾಡುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:20 pm, Wed, 20 November 24

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ