AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕ ಮತ್ತೆ ನಟನೆಗೆ ಮರಳಿದ ಚಿರಂಜೀವಿ ಮನೆ ಮಗಳು ನಿಹಾರಿಕಾ ಕೊನಿಡೆಲಾ

ನಿಹಾರಿಕಾ ಬಣ್ಣದ ಲೋಕಕ್ಕೆ 2016ರಲ್ಲಿ ಕಾಲಿಟ್ಟರು. ‘ಒಕ ಮನಸು’ ಅವರ ನಟನೆಯ ಮೊದಲ ಚಿತ್ರ. ಈ ಚಿತ್ರಕ್ಕೆ ನಾಗ ಶೌರ್ಯ ಅವರು ಹೀರೋ ಆಗಿದ್ದರು. ಈ ಸಿನಿಮಾ ಗೆಲುವು ಕಾಣಲಿಲ್ಲ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು. ಈಗ ಅವರು ಐದು ವರ್ಷಗಳ ಬಳಿಕ ಕಂಬ್ಯಾಕ್ ಮಾಡುತ್ತಿದ್ದಾರೆ.

ವಿಚ್ಛೇದನದ ಬಳಿಕ ಮತ್ತೆ ನಟನೆಗೆ ಮರಳಿದ ಚಿರಂಜೀವಿ ಮನೆ ಮಗಳು ನಿಹಾರಿಕಾ ಕೊನಿಡೆಲಾ
ರಾಜೇಶ್ ದುಗ್ಗುಮನೆ
|

Updated on: Feb 02, 2024 | 10:37 AM

Share

ನಟಿ ನಿಹಾರಿಕಾ ಕೊನಿಡೆಲಾ (Niharika Konidela) ಅವರು 2023ರಲ್ಲಿ ಸಖತ್ ಸುದ್ದಿ ಆಗಿದ್ದರು. ಅವರು ಪತಿ ಚೈತನ್ಯ ಅವರಿಂದ ವಿಚ್ಛೇದನ ಪಡೆದರು. ವಿಚ್ಛೇದನದ ಬಳಿಕ ಅವರು ನಟನೆಗೆ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ. ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಅವರನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. 2019ರಿಂದ ಈಚೆಗೆ ಅವರು ನಟನೆಯಿಂದ ದೂರ ಇದ್ದರು. ನಿರ್ಮಾಣ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಐದು ವರ್ಷಗಳ ಬಳಿಕ ಅವರ ಕಂಬ್ಯಾಕ್ ಆಗುತ್ತಿದೆ.

ನಿಹಾರಿಕಾ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು 2016ರಲ್ಲಿ. ‘ಒಕ ಮನಸು’ ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರಕ್ಕೆ ನಾಗ ಶೌರ್ಯ ಅವರು ಹೀರೋ. ಈ ಸಿನಿಮಾ ಗೆಲುವು ಕಾಣಲಿಲ್ಲ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ಯೂಟ್ಯೂಬ್ ವಿಡಿಯೋಗಳನ್ನು ಅವರು ಮಾಡಿದರು. ನಂತರ ನಿರ್ಮಾಣದತ್ತ ಹೊರಳಿದರು. ಅನೇಕ ಚಿತ್ರಗಳನ್ನು ಅವರು ನಿರ್ಮಿಸಿದ್ದಾರೆ. ಈಗ ಅವರು ನಟನೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ.

ನಿಹಾರಿಕಾ ಮುಂದಿನ ಸಿನಿಮಾ ಕುರಿತ ಪೋಸ್ಟ್​

ನಿಹಾರಿಕಾ ಹೊಸ ಸಿನಿಮಾ ತಮಿಳಿನಲ್ಲಿ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ‘ಮದ್ರಾಸ್ಕರನ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಮಲಯಾಳಂ ನಟ ಶೇನ್ ನಿಗಮ್ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದು ಶೇನ್ ಅವರ ಮೊದಲ ತಮಿಳು ಸಿನಿಮಾ. ನಿಹಾರಿಕಾಗೆ ಇದು ಎರಡನೇ ತಮಿಳು ಚಿತ್ರ. ಈ ಮೊದಲು ನಿಹಾರಿಕಾ ‘ಒರು ನಲ್ಲ ಬಾಲ್ ಪಾತು ಸೊಲ್ರನ್’ ಹೆಸರಿನ ತಮಿಳು ಸಿನಿಮಾದಲ್ಲಿ ಅವರು ನಟಿಸಿದ್ದರು.

ಇದನ್ನೂ ಓದಿ: ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ನಿಹಾರಿಕಾ ಅವರು ನಾಗೇಂದ್ರ ಬಾಬು ಮಗಳು. 2020ರಲ್ಲಿ ಚೈತನ್ಯ ಹಾಗೂ ನಿಹಾರಿಕಾ ಅದ್ದೂರಿಯಾಗಿ ಮದುವೆ ಆದರು. ಚಿರಂಜೀವಿ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದರು. ಆದರೆ, ಮೂರೇ ವರ್ಷದಲ್ಲಿ ಇವರ ಸಂಬಂಧ ಮುರಿದು ಬಿತ್ತು. 2023ರ ವೇಳೆಗೆ ಚೈತನ್ಯ ಹಾಗೂ ನಿಹಾರಿಕಾ ಬೇರೆ ಆದರು. ವಿಚ್ಛೇದನ ವಿಚಾರವನ್ನು ನಿಹಾರಿಕಾ ಅವರೇ ಖಚಿತಪಡಿಸಿದ್ದರು. ಈಗ ಅವರು ಮತ್ತೆ ನಟನೆಯತ್ತ ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!