ವಿಚ್ಛೇದನದ ಬಳಿಕ ಮತ್ತೆ ನಟನೆಗೆ ಮರಳಿದ ಚಿರಂಜೀವಿ ಮನೆ ಮಗಳು ನಿಹಾರಿಕಾ ಕೊನಿಡೆಲಾ

ನಿಹಾರಿಕಾ ಬಣ್ಣದ ಲೋಕಕ್ಕೆ 2016ರಲ್ಲಿ ಕಾಲಿಟ್ಟರು. ‘ಒಕ ಮನಸು’ ಅವರ ನಟನೆಯ ಮೊದಲ ಚಿತ್ರ. ಈ ಚಿತ್ರಕ್ಕೆ ನಾಗ ಶೌರ್ಯ ಅವರು ಹೀರೋ ಆಗಿದ್ದರು. ಈ ಸಿನಿಮಾ ಗೆಲುವು ಕಾಣಲಿಲ್ಲ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು. ಈಗ ಅವರು ಐದು ವರ್ಷಗಳ ಬಳಿಕ ಕಂಬ್ಯಾಕ್ ಮಾಡುತ್ತಿದ್ದಾರೆ.

ವಿಚ್ಛೇದನದ ಬಳಿಕ ಮತ್ತೆ ನಟನೆಗೆ ಮರಳಿದ ಚಿರಂಜೀವಿ ಮನೆ ಮಗಳು ನಿಹಾರಿಕಾ ಕೊನಿಡೆಲಾ
Follow us
|

Updated on: Feb 02, 2024 | 10:37 AM

ನಟಿ ನಿಹಾರಿಕಾ ಕೊನಿಡೆಲಾ (Niharika Konidela) ಅವರು 2023ರಲ್ಲಿ ಸಖತ್ ಸುದ್ದಿ ಆಗಿದ್ದರು. ಅವರು ಪತಿ ಚೈತನ್ಯ ಅವರಿಂದ ವಿಚ್ಛೇದನ ಪಡೆದರು. ವಿಚ್ಛೇದನದ ಬಳಿಕ ಅವರು ನಟನೆಗೆ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ. ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಅವರನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. 2019ರಿಂದ ಈಚೆಗೆ ಅವರು ನಟನೆಯಿಂದ ದೂರ ಇದ್ದರು. ನಿರ್ಮಾಣ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಐದು ವರ್ಷಗಳ ಬಳಿಕ ಅವರ ಕಂಬ್ಯಾಕ್ ಆಗುತ್ತಿದೆ.

ನಿಹಾರಿಕಾ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು 2016ರಲ್ಲಿ. ‘ಒಕ ಮನಸು’ ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರಕ್ಕೆ ನಾಗ ಶೌರ್ಯ ಅವರು ಹೀರೋ. ಈ ಸಿನಿಮಾ ಗೆಲುವು ಕಾಣಲಿಲ್ಲ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ಯೂಟ್ಯೂಬ್ ವಿಡಿಯೋಗಳನ್ನು ಅವರು ಮಾಡಿದರು. ನಂತರ ನಿರ್ಮಾಣದತ್ತ ಹೊರಳಿದರು. ಅನೇಕ ಚಿತ್ರಗಳನ್ನು ಅವರು ನಿರ್ಮಿಸಿದ್ದಾರೆ. ಈಗ ಅವರು ನಟನೆಗೆ ಕಂಬ್ಯಾಕ್ ಮಾಡುತ್ತಿದ್ದಾರೆ.

ನಿಹಾರಿಕಾ ಮುಂದಿನ ಸಿನಿಮಾ ಕುರಿತ ಪೋಸ್ಟ್​

ನಿಹಾರಿಕಾ ಹೊಸ ಸಿನಿಮಾ ತಮಿಳಿನಲ್ಲಿ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ‘ಮದ್ರಾಸ್ಕರನ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಮಲಯಾಳಂ ನಟ ಶೇನ್ ನಿಗಮ್ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದು ಶೇನ್ ಅವರ ಮೊದಲ ತಮಿಳು ಸಿನಿಮಾ. ನಿಹಾರಿಕಾಗೆ ಇದು ಎರಡನೇ ತಮಿಳು ಚಿತ್ರ. ಈ ಮೊದಲು ನಿಹಾರಿಕಾ ‘ಒರು ನಲ್ಲ ಬಾಲ್ ಪಾತು ಸೊಲ್ರನ್’ ಹೆಸರಿನ ತಮಿಳು ಸಿನಿಮಾದಲ್ಲಿ ಅವರು ನಟಿಸಿದ್ದರು.

ಇದನ್ನೂ ಓದಿ: ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ನಿಹಾರಿಕಾ ಅವರು ನಾಗೇಂದ್ರ ಬಾಬು ಮಗಳು. 2020ರಲ್ಲಿ ಚೈತನ್ಯ ಹಾಗೂ ನಿಹಾರಿಕಾ ಅದ್ದೂರಿಯಾಗಿ ಮದುವೆ ಆದರು. ಚಿರಂಜೀವಿ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದರು. ಆದರೆ, ಮೂರೇ ವರ್ಷದಲ್ಲಿ ಇವರ ಸಂಬಂಧ ಮುರಿದು ಬಿತ್ತು. 2023ರ ವೇಳೆಗೆ ಚೈತನ್ಯ ಹಾಗೂ ನಿಹಾರಿಕಾ ಬೇರೆ ಆದರು. ವಿಚ್ಛೇದನ ವಿಚಾರವನ್ನು ನಿಹಾರಿಕಾ ಅವರೇ ಖಚಿತಪಡಿಸಿದ್ದರು. ಈಗ ಅವರು ಮತ್ತೆ ನಟನೆಯತ್ತ ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ