AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’ ಬಳಿಕ ಮೂರು ವರ್ಷ ಮಹೇಶ್ ಬಾಬು ಹೊಸ ಸಿನಿಮಾ ಒಪ್ಪಿಕೊಳ್ಳಲ್ಲ

ಸಿನಿಮಾ ಶೂಟಿಂಗ್ ಆರಂಭ ಆದ ಬಳಿಕ ಅವರ ಸಿನಿಮಾ ಹೀರೋ ಬೇರೆ ಸಿನಿಮಾದಲ್ಲಿ ನಟಿಸುವುದನ್ನು ರಾಜಮೌಳಿ ಒಪ್ಪುವುದಿಲ್ಲ. ಇದು ಮಹೇಶ್ ಬಾಬು ನಿರ್ಧಾರಕ್ಕೆ ಕಾರಣ.

‘ಗುಂಟೂರು ಖಾರಂ’ ಬಳಿಕ ಮೂರು ವರ್ಷ ಮಹೇಶ್ ಬಾಬು ಹೊಸ ಸಿನಿಮಾ ಒಪ್ಪಿಕೊಳ್ಳಲ್ಲ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Jun 01, 2023 | 12:10 PM

Share

ಟಾಲಿವುಡ್ ನಟ ಮಹೇಶ್ ಬಾಬು (Mahesh Babu) ಅವರ ಹೊಸ ಸಿನಿಮಾಗೆ ರಗಡ್ ಶೀರ್ಷಿಕೆ ಇಡಲಾಗಿದೆ. ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಚಿತ್ರ ಇದಾಗಿದ್ದು, ‘ಗುಂಟೂರು ಖಾರಂ’ ಎಂದು ಟೈಟಲ್ ನೀಡಲಾಗಿದೆ. ಮಹೇಶ್ ಬಾಬು ಪೂಜಾ ಹೆಗ್ಡೆ ಮತ್ತು ಶ್ರೀಲೀಲಾ (Sreeleela) ನಟಿಸಲಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಮಹೇಶ್ ಬಾಬು ಮಾಸ್ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ತೆರೆಕಂಡ ಬಳಿಕ ಮಹೇಶ್ ಬಾಬು ಅವರು ಮೂರು ವರ್ಷ ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲವಂತೆ.

ತ್ರಿವಿಕ್ರಂ ಸಿನಿಮಾದ ಬಳಿಕ ಮಹೇಶ್ ಬಾಬು ಅವರು ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ತಮ್ಮ ಸಿನಿಮಾದಲ್ಲಿ ನಟಿಸೋ ಹೀರೋಗಳಿಗೆ ರಾಜಮೌಳಿ ಅವರು ಕೆಲ ಷರತ್ತುಗಳನ್ನು ಹಾಕುತ್ತಾರೆ. ಸಿನಿಮಾ ಶೂಟಿಂಗ್ ಆರಂಭ ಆದ ಬಳಿಕ ಅವರ ಸಿನಿಮಾ ಹೀರೋ ಬೇರೆ ಸಿನಿಮಾದಲ್ಲಿ ನಟಿಸುವುದನ್ನು ರಾಜಮೌಳಿ ಒಪ್ಪುವುದಿಲ್ಲ. ರಾಜಮೌಳಿ ಅವರು ಈ ರೀತಿಯ ನಿಯಮ ಹಾಕಿಕೊಳ್ಳುವುದಕ್ಕೂ ಕಾರಣ ಇದೆ.

‘ಗುಂಟೂರು ಖಾರಂ’ ಬಿಡುಗಡೆಯಾದ ನಂತರ ಮಹೇಶ್ ಬಾಬು ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ರಾಜಮೌಳಿ ಅವರು ಈ ಚಿತ್ರಕ್ಕೆ ಅಂದಾಜು 3 ವರ್ಷ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಚಿತ್ರ ಮುಗಿಯುವವರೆಗೂ ಮಹೇಶ್ ಬಾಬು ಬೇರೆ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ರಾಜಮೌಳಿ ಚಿತ್ರಕ್ಕಾಗಿ ಮಹೇಶ್ ತಮ್ಮ ಲುಕ್ ಕೂಡ ಬದಲಾಯಿಸಿಕೊಳ್ಳಲಿದ್ದಾರೆ. ಈ ಪಾತ್ರಕ್ಕೆ ಸಾಕಷ್ಟು ಸಿದ್ಧತೆ ಕೂಡ ಬೇಕಿದೆ. ಹೀಗಾಗಿ, ಸಂಪೂರ್ಣವಾಗಿ ಮಹೇಶ್​ ಬಾಬು ಈ ಸಿನಿಮಾದಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು ಹೊಸ ಸಿನಿಮಾದ ಹೆಸರು ಘೋಷಣೆ: ಹೆಸರಲ್ಲೇ ಇದೆ ಖಾರ

ಮಹೇಶ್ ಬಾಬು ಹಾಗೂ ರಾಜಮೌಳಿ ಸಿನಿಮಾದ ಮೇಲೆ ಈಗಾಗಲೇ ಭಾರೀ ನಿರೀಕ್ಷೆ ಸೃಷ್ಟಿ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ಇದು ಮಹೇಶ್ ಬಾಬು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ವಿಶೇಷ. ‘ಗುಂಟೂರು ಖಾರಂ’ ಸಿನಿಮಾ 2024ರ ಜನವರಿಯಲ್ಲಿ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ