AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ಟೊಯೊಟೋ ವೆಲ್​ಫೈರ್​ ಕಾರನ್ನು ಧನಂಜಯ್​ಗೆ ಉಡುಗೊರೆಯಾಗಿ ನೀಡಲಾಗಿದೆ. ಇದರ ಎಕ್ಸ್​ ಶೋ ರೂಂ ಬೆಲೆ 96 ಲಕ್ಷ ರೂಪಾಯಿ ಇದೆ.

‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ
Follow us
ರಾಜೇಶ್ ದುಗ್ಗುಮನೆ
|

Updated on:Mar 31, 2023 | 1:46 PM

ನಟ ಡಾಲಿ ಧನಂಜಯ್ (Dhananjay) ನಟನೆಯ 25ನೇ ಸಿನಿಮಾ ‘ಹೊಯ್ಸಳ’ ರಿಲೀಸ್ ಆಗಿ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಡಾಲಿ ಧನಂಜಯ್ ಅವರು ಖಡಕ್ ಪೊಲೀಸ್ ಅಧಿಕಾರಿ ಆಗಿ ಗಮನ ಸೆಳೆದಿದ್ದಾರೆ. ಈ ಚಿತ್ರವನ್ನು ನಿರ್ಮಾಣ ಮಾಡಿದ ಕೆಆರ್​ಜಿ ಸ್ಟುಡಿಯೋಸ್​ನ ಯೋಗಿ ರಾಜ್ ಹಾಗೂ ಕಾರ್ತಿಕ್ ಗೌಡ (Kartik Gowda) ಲಾಭ ಕಂಡಿದ್ದಾರೆ. ಇದೇ ಖುಷಿಯಲ್ಲಿ ಧನಂಜಯ್​ಗೆ 1 ಕೋಟಿ ರೂಪಾಯಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೋ ಹಂಚಿಕೊಂಡು ಧನಂಜಯ್ ಸಂತಸ ವ್ಯಕ್ತಪಡಿಸಿದ್ದಾರೆ.

ಟೊಯೊಟೋ ವೆಲ್​ಫೈರ್​ ಕಾರನ್ನು ಧನಂಜಯ್​ಗೆ ಉಡುಗೊರೆಯಾಗಿ ನೀಡಲಾಗಿದೆ. ಇದರ ಎಕ್ಸ್​ ಶೋ ರೂಂ ಬೆಲೆ 96 ಲಕ್ಷ ರೂಪಾಯಿ ಇದೆ. ಆನ್​ರೋಡ್​ ಬೆಲೆ 1.19 ಕೋಟಿ ರೂಪಾಯಿ ಆಗಲಿದೆ. ಕಾರಿನ ಜೊತೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಧನಂಜಯ್ ಹಂಚಿಕೊಂಡಿದ್ದಾರೆ. ಯೋಗಿ ಹಾಗೂ ಕಾರ್ತಿಕ್ ಕೂಡ ಜೊತೆಗಿದ್ದಾರೆ.

‘25 ನೇ ಚಿತ್ರ ಮತ್ತು ನನ್ನ ವಿಶೇಷ ವ್ಯಕ್ತಿಗಳಿಂದ ವಿಶೇಷ ಉಡುಗೊರೆ’ ಎಂದು ಧನಂಜಯ್ ಬರೆದುಕೊಂಡಿದ್ದಾರೆ. ‘ನನ್ನ ನಿರ್ಮಾಪಕರ ಮತ್ತು ಅಭಿಮಾನಿಗಳ ಕೊಡುಗೆ’ ಎಂದು ಕೂಡ ಧನಂಜಯ್ ಹೇಳಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಜೊತೆಗೆ ಧನಂಜಯ್​ಗೆ ಶುಭಾಶಯ ತಿಳಿಸಿದ್ದಾರೆ.

ಧನಂಜಯ್ ಅವರು ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರಿದ್ದಾರೆ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ‘ಪುಷ್ಪ’ ಚಿತ್ರದಲ್ಲಿ ಅವರು ನಟಿಸಿದ್ದರು. ‘ಪುಷ್ಪ 2’ ಚಿತ್ರದಲ್ಲೂ ಅವರು ಬಣ್ಣ ಹಚ್ಚಲಿದ್ದಾರೆ. ‘ಕೆಆರ್​ಜಿ ಸ್ಟುಡಿಯೋಸ್​’ ಜೊತೆ ಈ ಮೊದಲು ಧನಂಜಯ್ ಮಾಡಿದ್ದ ‘ರತ್ನನ್ ಪ್ರಪಂಚ’ ಸಿನಿಮಾ ಯಶಸ್ಸು ಕಂಡಿತ್ತು. ಈ ನಿರ್ಮಾಣ ಸಂಸ್ಥೆ ಜೊತೆ ಧನಂಜಯ್ ಮಾಡಿರೋ ಎರಡನೇ ಸಿನಿಮಾ ಇದು. ಈಗ ಅವರಿಗೆ ಈ ನಿರ್ಮಾಣ ಸಂಸ್ಥೆಯಿಂದ ಕಾರು ಉಡುಗೊರೆಯಾಗಿ ಸಿಕ್ಕಿರೋದು ವಿಶೇಷ.

‘ಹೊಯ್ಸಳ’ ಸಿನಿಮಾಗೆ ವಿಜಯ್​ ಎನ್​. ನಿರ್ದೇಶನ ಇದೆ. ಡಾಲಿ ಧನಂಜಯ್​, ಅಮೃತಾ ಅಯ್ಯಂಗಾರ್​, ನವೀನ್​ ಶಂಕರ್, ಅನಿರುದ್ಧ್​ ಭಟ್​, ಮಯೂರಿ ನಟರಾಜ್​, ಅಚ್ಯುತ್​ ಕುಮಾರ್​, ರಾಜೇಶ್​ ನಟರಂಗ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಕಾರಿನ ವಿಶೇಷತೆ

2492 ಸಿಸಿ ಇಂಜಿನ್​​ ಅನ್ನು ಕಾರು ಹೊಂದಿದೆ.  ಕಾರಿನ ಮೈಲೇಜ್​ ಪ್ರತಿ ಲೀಟರ್​ ಪೆಟ್ರೋಲ್​ಗೆ 16 ಕಿ.ಮೀ ಇದೆ. ಏಳು ಸೀಟರ್​​ ಕಾರು ಇದಾಗಿದ್ದು, ಅತ್ಯಂತ ಲಕ್ಸುರಿ ಸೌಲಭ್ಯ ಇದೆ. ಜೀರೋದಿಂದ 100 ಕಿ.ಮೀ ವೇಗವನ್ನು 8 ಸೆಕೆಂಡ್​ನಲ್ಲಿ ವೆಲ್​ಫೈರ್ ತಲುಪುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Fri, 31 March 23

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ