AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ಟೊಯೊಟೋ ವೆಲ್​ಫೈರ್​ ಕಾರನ್ನು ಧನಂಜಯ್​ಗೆ ಉಡುಗೊರೆಯಾಗಿ ನೀಡಲಾಗಿದೆ. ಇದರ ಎಕ್ಸ್​ ಶೋ ರೂಂ ಬೆಲೆ 96 ಲಕ್ಷ ರೂಪಾಯಿ ಇದೆ.

‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ
ರಾಜೇಶ್ ದುಗ್ಗುಮನೆ
|

Updated on:Mar 31, 2023 | 1:46 PM

Share

ನಟ ಡಾಲಿ ಧನಂಜಯ್ (Dhananjay) ನಟನೆಯ 25ನೇ ಸಿನಿಮಾ ‘ಹೊಯ್ಸಳ’ ರಿಲೀಸ್ ಆಗಿ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಡಾಲಿ ಧನಂಜಯ್ ಅವರು ಖಡಕ್ ಪೊಲೀಸ್ ಅಧಿಕಾರಿ ಆಗಿ ಗಮನ ಸೆಳೆದಿದ್ದಾರೆ. ಈ ಚಿತ್ರವನ್ನು ನಿರ್ಮಾಣ ಮಾಡಿದ ಕೆಆರ್​ಜಿ ಸ್ಟುಡಿಯೋಸ್​ನ ಯೋಗಿ ರಾಜ್ ಹಾಗೂ ಕಾರ್ತಿಕ್ ಗೌಡ (Kartik Gowda) ಲಾಭ ಕಂಡಿದ್ದಾರೆ. ಇದೇ ಖುಷಿಯಲ್ಲಿ ಧನಂಜಯ್​ಗೆ 1 ಕೋಟಿ ರೂಪಾಯಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೋ ಹಂಚಿಕೊಂಡು ಧನಂಜಯ್ ಸಂತಸ ವ್ಯಕ್ತಪಡಿಸಿದ್ದಾರೆ.

ಟೊಯೊಟೋ ವೆಲ್​ಫೈರ್​ ಕಾರನ್ನು ಧನಂಜಯ್​ಗೆ ಉಡುಗೊರೆಯಾಗಿ ನೀಡಲಾಗಿದೆ. ಇದರ ಎಕ್ಸ್​ ಶೋ ರೂಂ ಬೆಲೆ 96 ಲಕ್ಷ ರೂಪಾಯಿ ಇದೆ. ಆನ್​ರೋಡ್​ ಬೆಲೆ 1.19 ಕೋಟಿ ರೂಪಾಯಿ ಆಗಲಿದೆ. ಕಾರಿನ ಜೊತೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಧನಂಜಯ್ ಹಂಚಿಕೊಂಡಿದ್ದಾರೆ. ಯೋಗಿ ಹಾಗೂ ಕಾರ್ತಿಕ್ ಕೂಡ ಜೊತೆಗಿದ್ದಾರೆ.

‘25 ನೇ ಚಿತ್ರ ಮತ್ತು ನನ್ನ ವಿಶೇಷ ವ್ಯಕ್ತಿಗಳಿಂದ ವಿಶೇಷ ಉಡುಗೊರೆ’ ಎಂದು ಧನಂಜಯ್ ಬರೆದುಕೊಂಡಿದ್ದಾರೆ. ‘ನನ್ನ ನಿರ್ಮಾಪಕರ ಮತ್ತು ಅಭಿಮಾನಿಗಳ ಕೊಡುಗೆ’ ಎಂದು ಕೂಡ ಧನಂಜಯ್ ಹೇಳಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಜೊತೆಗೆ ಧನಂಜಯ್​ಗೆ ಶುಭಾಶಯ ತಿಳಿಸಿದ್ದಾರೆ.

ಧನಂಜಯ್ ಅವರು ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರಿದ್ದಾರೆ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ‘ಪುಷ್ಪ’ ಚಿತ್ರದಲ್ಲಿ ಅವರು ನಟಿಸಿದ್ದರು. ‘ಪುಷ್ಪ 2’ ಚಿತ್ರದಲ್ಲೂ ಅವರು ಬಣ್ಣ ಹಚ್ಚಲಿದ್ದಾರೆ. ‘ಕೆಆರ್​ಜಿ ಸ್ಟುಡಿಯೋಸ್​’ ಜೊತೆ ಈ ಮೊದಲು ಧನಂಜಯ್ ಮಾಡಿದ್ದ ‘ರತ್ನನ್ ಪ್ರಪಂಚ’ ಸಿನಿಮಾ ಯಶಸ್ಸು ಕಂಡಿತ್ತು. ಈ ನಿರ್ಮಾಣ ಸಂಸ್ಥೆ ಜೊತೆ ಧನಂಜಯ್ ಮಾಡಿರೋ ಎರಡನೇ ಸಿನಿಮಾ ಇದು. ಈಗ ಅವರಿಗೆ ಈ ನಿರ್ಮಾಣ ಸಂಸ್ಥೆಯಿಂದ ಕಾರು ಉಡುಗೊರೆಯಾಗಿ ಸಿಕ್ಕಿರೋದು ವಿಶೇಷ.

‘ಹೊಯ್ಸಳ’ ಸಿನಿಮಾಗೆ ವಿಜಯ್​ ಎನ್​. ನಿರ್ದೇಶನ ಇದೆ. ಡಾಲಿ ಧನಂಜಯ್​, ಅಮೃತಾ ಅಯ್ಯಂಗಾರ್​, ನವೀನ್​ ಶಂಕರ್, ಅನಿರುದ್ಧ್​ ಭಟ್​, ಮಯೂರಿ ನಟರಾಜ್​, ಅಚ್ಯುತ್​ ಕುಮಾರ್​, ರಾಜೇಶ್​ ನಟರಂಗ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಕಾರಿನ ವಿಶೇಷತೆ

2492 ಸಿಸಿ ಇಂಜಿನ್​​ ಅನ್ನು ಕಾರು ಹೊಂದಿದೆ.  ಕಾರಿನ ಮೈಲೇಜ್​ ಪ್ರತಿ ಲೀಟರ್​ ಪೆಟ್ರೋಲ್​ಗೆ 16 ಕಿ.ಮೀ ಇದೆ. ಏಳು ಸೀಟರ್​​ ಕಾರು ಇದಾಗಿದ್ದು, ಅತ್ಯಂತ ಲಕ್ಸುರಿ ಸೌಲಭ್ಯ ಇದೆ. ಜೀರೋದಿಂದ 100 ಕಿ.ಮೀ ವೇಗವನ್ನು 8 ಸೆಕೆಂಡ್​ನಲ್ಲಿ ವೆಲ್​ಫೈರ್ ತಲುಪುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Fri, 31 March 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ