AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ಟೊಯೊಟೋ ವೆಲ್​ಫೈರ್​ ಕಾರನ್ನು ಧನಂಜಯ್​ಗೆ ಉಡುಗೊರೆಯಾಗಿ ನೀಡಲಾಗಿದೆ. ಇದರ ಎಕ್ಸ್​ ಶೋ ರೂಂ ಬೆಲೆ 96 ಲಕ್ಷ ರೂಪಾಯಿ ಇದೆ.

‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ
ರಾಜೇಶ್ ದುಗ್ಗುಮನೆ
|

Updated on:Mar 31, 2023 | 1:46 PM

Share

ನಟ ಡಾಲಿ ಧನಂಜಯ್ (Dhananjay) ನಟನೆಯ 25ನೇ ಸಿನಿಮಾ ‘ಹೊಯ್ಸಳ’ ರಿಲೀಸ್ ಆಗಿ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಡಾಲಿ ಧನಂಜಯ್ ಅವರು ಖಡಕ್ ಪೊಲೀಸ್ ಅಧಿಕಾರಿ ಆಗಿ ಗಮನ ಸೆಳೆದಿದ್ದಾರೆ. ಈ ಚಿತ್ರವನ್ನು ನಿರ್ಮಾಣ ಮಾಡಿದ ಕೆಆರ್​ಜಿ ಸ್ಟುಡಿಯೋಸ್​ನ ಯೋಗಿ ರಾಜ್ ಹಾಗೂ ಕಾರ್ತಿಕ್ ಗೌಡ (Kartik Gowda) ಲಾಭ ಕಂಡಿದ್ದಾರೆ. ಇದೇ ಖುಷಿಯಲ್ಲಿ ಧನಂಜಯ್​ಗೆ 1 ಕೋಟಿ ರೂಪಾಯಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೋ ಹಂಚಿಕೊಂಡು ಧನಂಜಯ್ ಸಂತಸ ವ್ಯಕ್ತಪಡಿಸಿದ್ದಾರೆ.

ಟೊಯೊಟೋ ವೆಲ್​ಫೈರ್​ ಕಾರನ್ನು ಧನಂಜಯ್​ಗೆ ಉಡುಗೊರೆಯಾಗಿ ನೀಡಲಾಗಿದೆ. ಇದರ ಎಕ್ಸ್​ ಶೋ ರೂಂ ಬೆಲೆ 96 ಲಕ್ಷ ರೂಪಾಯಿ ಇದೆ. ಆನ್​ರೋಡ್​ ಬೆಲೆ 1.19 ಕೋಟಿ ರೂಪಾಯಿ ಆಗಲಿದೆ. ಕಾರಿನ ಜೊತೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಧನಂಜಯ್ ಹಂಚಿಕೊಂಡಿದ್ದಾರೆ. ಯೋಗಿ ಹಾಗೂ ಕಾರ್ತಿಕ್ ಕೂಡ ಜೊತೆಗಿದ್ದಾರೆ.

‘25 ನೇ ಚಿತ್ರ ಮತ್ತು ನನ್ನ ವಿಶೇಷ ವ್ಯಕ್ತಿಗಳಿಂದ ವಿಶೇಷ ಉಡುಗೊರೆ’ ಎಂದು ಧನಂಜಯ್ ಬರೆದುಕೊಂಡಿದ್ದಾರೆ. ‘ನನ್ನ ನಿರ್ಮಾಪಕರ ಮತ್ತು ಅಭಿಮಾನಿಗಳ ಕೊಡುಗೆ’ ಎಂದು ಕೂಡ ಧನಂಜಯ್ ಹೇಳಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಜೊತೆಗೆ ಧನಂಜಯ್​ಗೆ ಶುಭಾಶಯ ತಿಳಿಸಿದ್ದಾರೆ.

ಧನಂಜಯ್ ಅವರು ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರಿದ್ದಾರೆ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ‘ಪುಷ್ಪ’ ಚಿತ್ರದಲ್ಲಿ ಅವರು ನಟಿಸಿದ್ದರು. ‘ಪುಷ್ಪ 2’ ಚಿತ್ರದಲ್ಲೂ ಅವರು ಬಣ್ಣ ಹಚ್ಚಲಿದ್ದಾರೆ. ‘ಕೆಆರ್​ಜಿ ಸ್ಟುಡಿಯೋಸ್​’ ಜೊತೆ ಈ ಮೊದಲು ಧನಂಜಯ್ ಮಾಡಿದ್ದ ‘ರತ್ನನ್ ಪ್ರಪಂಚ’ ಸಿನಿಮಾ ಯಶಸ್ಸು ಕಂಡಿತ್ತು. ಈ ನಿರ್ಮಾಣ ಸಂಸ್ಥೆ ಜೊತೆ ಧನಂಜಯ್ ಮಾಡಿರೋ ಎರಡನೇ ಸಿನಿಮಾ ಇದು. ಈಗ ಅವರಿಗೆ ಈ ನಿರ್ಮಾಣ ಸಂಸ್ಥೆಯಿಂದ ಕಾರು ಉಡುಗೊರೆಯಾಗಿ ಸಿಕ್ಕಿರೋದು ವಿಶೇಷ.

‘ಹೊಯ್ಸಳ’ ಸಿನಿಮಾಗೆ ವಿಜಯ್​ ಎನ್​. ನಿರ್ದೇಶನ ಇದೆ. ಡಾಲಿ ಧನಂಜಯ್​, ಅಮೃತಾ ಅಯ್ಯಂಗಾರ್​, ನವೀನ್​ ಶಂಕರ್, ಅನಿರುದ್ಧ್​ ಭಟ್​, ಮಯೂರಿ ನಟರಾಜ್​, ಅಚ್ಯುತ್​ ಕುಮಾರ್​, ರಾಜೇಶ್​ ನಟರಂಗ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಕಾರಿನ ವಿಶೇಷತೆ

2492 ಸಿಸಿ ಇಂಜಿನ್​​ ಅನ್ನು ಕಾರು ಹೊಂದಿದೆ.  ಕಾರಿನ ಮೈಲೇಜ್​ ಪ್ರತಿ ಲೀಟರ್​ ಪೆಟ್ರೋಲ್​ಗೆ 16 ಕಿ.ಮೀ ಇದೆ. ಏಳು ಸೀಟರ್​​ ಕಾರು ಇದಾಗಿದ್ದು, ಅತ್ಯಂತ ಲಕ್ಸುರಿ ಸೌಲಭ್ಯ ಇದೆ. ಜೀರೋದಿಂದ 100 ಕಿ.ಮೀ ವೇಗವನ್ನು 8 ಸೆಕೆಂಡ್​ನಲ್ಲಿ ವೆಲ್​ಫೈರ್ ತಲುಪುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Fri, 31 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ