AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ

ಫೈಟ್ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ಜೂ ಎನ್​ಟಿಆರ್ ಬಿದ್ದು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಸಲಾಗಿದೆ ಎಂಬ ಸುದ್ದಿ ಹರಿದಾಡಲು ಆರಂಭಿಸಿತ್ತು. ಹೀಗಾಗಿ, ‘ವಾರ್ 2’ ಸಿನಿಮಾ ಶೂಟಿಂಗ್ ಎರಡು ತಿಂಗಳು ಮುಂದಕ್ಕೆ ಹೋಗಿದೆ.

ಜೂನಿಯರ್​ ಎನ್​ಟಿಆರ್​ಗೆ ಆದ ಗಾಯದಿಂದ ‘ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ
ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Aug 19, 2024 | 8:54 AM

Share

ಈ ವರ್ಷ ಆಗಸ್ಟ್ 15ರಂದು ‘ಸ್ತ್ರೀ 2’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಮುಂದಿನ ವರ್ಷ ಇದೇ ಸಂದರ್ಭದಲ್ಲಿ ‘ವಾರ್ 2’ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಘೋಷಣೆ ಆಗಿದೆ. ಆದರೆ, ಅಂದುಕೊಂಡ ದಿನಾಂಕದಂದು ಸಿನಿಮಾ ಶೂಟ್ ಪೂರ್ಣಗೊಳ್ಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರೋದು ಜೂನಿಯರ್ ಎನ್​ಟಿಆರ್ ಅವರಿಗೆ ಆದ ಗಾಯ. ಸೆಟ್​ನಲ್ಲಿ ಅವರಿಗೆ ಇಂಜೂರಿ ಆಗಿದೆ. ಹೀಗಾಗಿ, ಶೂಟಿಂಗ್ ಎರಡು ತಿಂಗಳು ಮುಂದಕ್ಕೆ ಹೋಗಿದೆ.

‘ವಾರ್ 2’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದ ಜೂನಿಯರ್ ಎನ್​ಟಿಆರ್ ಅವರು ಪ್ರಮುಖ ಆ್ಯಕ್ಷನ್ ದೃಶ್ಯವನ್ನು ಮಾಡುತ್ತಿದ್ದರು. ಆಗ ಅವರ ಕೈಗೆ ಗಾಯ ಆಗಿತ್ತು. ಅವರಿಗೆ ಎರಡು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ, ಮುಂಬೈನಲ್ಲಿ ನಡೆಯಬೇಕಿದ್ದ ‘ವಾರ್ 2’ ಶೂಟಿಂಗ್ ಎರಡು ತಿಂಗಳು ಮುಂದಕ್ಕೆ ಹೋಗಿದೆ. ಇದರಿಂದ ‘ಯಶ್ ರಾಜ್ ಫಿಲ್ಮ್ಸ್​’ ಸಂಸ್ಥೆಗೆ ನಷ್ಟ ಉಂಟಾಗಿದೆ.

‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಅವರಿಗೆ ಭರ್ಜರಿ ಎಂಟ್ರಿ ಇರಲಿದೆ. ಇದನ್ನು ಈಗ ಶೂಟ್ ಮಾಡಲು ತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಅಕ್ಟೋಬರ್​ನಲ್ಲಿ ಇದನ್ನು ಶೂಟ್ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ. ‘ದೇವರ’ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ. ಇದಾದ ಬಳಿಕವೇ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಶೂಟ್​ನಲ್ಲಿ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಜೂ ಎನ್​ಟಿಆರ್​ಗೆ ಗಾಯ, ಅಧಿಕೃತ ಹೇಳಿಕೆ ಬಿಡುಗಡೆ

‘ದೇವರ’ ಸಿನಿಮಾದ ಪ್ರಚಾರದಲ್ಲಿ ಜೂನಿಯರ್​ ಎನ್​ಟಿಆರ್ ಭಾಗಿ ಆಗಲಿದ್ದಾರೆ. ಈ ಚಿತ್ರದ ಪ್ರಮೋಷನ್​ಗಾಗಿ ನಾನಾ ಕಡೆಗಳಿಗೆ ಅವರು ಭೇಟಿ ಮಾಡಿ ಸಿನಿಮಾ ನೋಡುವಂತೆ ಕೋರಿಕೊಳ್ಳಲಿದ್ದಾರೆ. ಸದ್ಯ ಹೃತಿಕ್ ರೋಷನ್ ಹಾಗೂ ಕಿಯಾರಾ ಅಡ್ವಾಣಿ ಅವರ ದೃಶ್ಯಗಳನ್ನು ಶೂಟ್ ಮಾಡಲು ತಂಡ ಮುಂದಾಗಿದೆ. ಸೆಪ್ಟೆಂಬರ್​ನಲ್ಲಿ ತಂಡ ಯುರೋಪ್​ಗೆ ತೆರಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ