AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಯಶಸ್ಸು ನೋಡಿ ಮನಸ್ಸು ಬದಲಿಸಿದ ‘ಪುಷ್ಪ 2’ ತಂಡ; ನೂರಾರು ಕೋಟಿ ಕೊಟ್ಟರೂ ಒಪ್ಪಲಿಲ್ಲ ನಿರ್ಮಾಪಕರು?

‘ಕೆಜಿಎಫ್ 2’ 433 ಕೋಟಿ ರೂಪಾಯಿ ಕಲೆ ಹಾಕಿತು. ಅಂದರೆ ಮೊದಲ ಚಾಪ್ಟರ್​ಗಿಂತ ಎರಡನೇ ಚಾಪ್ಟರ್​ 10 ಪಟ್ಟು ಹೆಚ್ಚು ಹಣವನ್ನು ಕಮಾಯಿ ಮಾಡಿತು. ಇದನ್ನು ‘ಪುಷ್ಪ’ ತಂಡದವರು ಗಮನದಲ್ಲಿ ಇಟ್ಟುಕೊಂಡಂತೆ ಇದೆ.

‘ಕೆಜಿಎಫ್ 2’ ಯಶಸ್ಸು ನೋಡಿ ಮನಸ್ಸು ಬದಲಿಸಿದ ‘ಪುಷ್ಪ 2’ ತಂಡ; ನೂರಾರು ಕೋಟಿ ಕೊಟ್ಟರೂ ಒಪ್ಪಲಿಲ್ಲ ನಿರ್ಮಾಪಕರು?
ಯಶ್-ಅಲ್ಲು ಅರ್ಜುನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 29, 2022 | 2:28 PM

ಸುಕುಮಾರ್ (Sukumar) ನಿರ್ದೇಶನದ, ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ ಸಿನಿಮಾದ ಶೂಟಿಂಗ್ ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಜುಲೈ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗುವ ನಿರೀಕ್ಷೆ ಇದೆ. ‘ಪುಷ್ಪ’ ಚಿತ್ರ (Pushpa Movie) ಸೂಪರ್-ಡೂಪರ್ ಹಿಟ್ ಆಗಿದ್ದರಿಂದ ಎರಡನೇ ಪಾರ್ಟ್ ಬಗ್ಗೆ ನಿರೀಕ್ಷೆ ಹೆಚ್ಚಿರುವುದು ಸಾಮಾನ್ಯ. ಈಗ ‘ಪುಷ್ಪ 2’ ಚಿತ್ರದ ಶೂಟಿಂಗ್ ಆರಂಭಕ್ಕೂ  ಮೊದಲೇ ಸಿನಿಮಾದ ಹಕ್ಕನ್ನು ಕೊಂಡುಕೊಳ್ಳಲು ಬಾಲಿವುಡ್​​ ಮಂದಿ ಆಸಕ್ತಿ ತೋರಿದ್ದಾರೆ. ಆದರೆ, ಇದಕ್ಕೆ ‘ಪುಷ್ಪ 2’ ತಂಡದವರು ಆಸಕ್ತಿ ತೋರಿಸಿಲ್ಲ ಎಂದು ವರದಿ ಆಗಿದೆ.

ಯಶ್ ನಟನೆಯ ಕನ್ನಡದ ‘ಕೆಜಿಎಫ್’ ಸಿನಿಮಾ ಹಿಂದಿಯಲ್ಲಿ ಕಲೆ ಹಾಕಿದ್ದು ಕೇವಲ 44 ಲಕ್ಷ ರೂಪಾಯಿ. ಆದರೆ, ‘ಕೆಜಿಎಫ್ 2’ 433 ಕೋಟಿ ರೂಪಾಯಿ ಕಲೆ ಹಾಕಿತು. ಅಂದರೆ ಮೊದಲ ಚಾಪ್ಟರ್​ಗಿಂತ ಎರಡನೇ ಚಾಪ್ಟರ್​ 10 ಪಟ್ಟು ಹೆಚ್ಚು ಹಣವನ್ನು ಕಮಾಯಿ ಮಾಡಿತು. ಇದನ್ನು ‘ಪುಷ್ಪ’ ತಂಡದವರು ಗಮನದಲ್ಲಿ ಇಟ್ಟುಕೊಂಡಂತೆ ಇದೆ. ಹೀಗಾಗಿ, ‘ಪುಷ್ಪ 2’ ಹಿಂದಿ ಹಂಚಿಕೆ ಹಕ್ಕನ್ನು ಮಾರಾಟ ಮಾಡಲು ಮೈತ್ರಿ ಮೂವೀ ಮೇಕರ್ಸ್​ ಆಸಕ್ತಿ ತೋರುತ್ತಿಲ್ಲ ಎಂದು ವರದಿ ಆಗಿದೆ.

ಬಾಲಿವುಡ್​ನಲ್ಲಿ 100 ಕೋಟಿ ಕಲೆ ಹಾಕಿದ ಹೆಚ್ಚುಗಾರಿಕೆ ‘ಪುಷ್ಪ’ ಚಿತ್ರಕ್ಕೆ ಇದೆ. ಹೀಗಾಗಿ, ಜನರು ‘ಪುಷ್ಪ 2’ ಚಿತ್ರಕ್ಕೆ ಮತ್ತಷ್ಟು ಆಸಕ್ತಿ ತೋರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ‘ಕೆಜಿಎಫ್ 2’ ಮಾದರಿಯಲ್ಲೇ ಉತ್ತರ ಭಾರತದಲ್ಲಿ ಚಿತ್ರಕ್ಕೆ ಹೆಚ್ಚು ಪ್ರಚಾರ ನೀಡಿದರೆ ಸಿನಿಮಾ ಬಂಗಾರದ ಬೆಳೆ ತೆಗೆಯುವುದು ಖಚಿತ ಎಂಬುದು ಸಿನಿಮಾ ಪಂಡಿತರ ಮಾತು.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

‘ಪುಷ್ಪ’ ಚಿತ್ರವನ್ನು ಹಿಂದಿಯಲ್ಲಿ ‘ಗೋಲ್ಡ್​ಮೈನ್​ ಫಿಲ್ಮ್ಸ್​’ ಹಂಚಿಕೆ ಮಾಡಿತ್ತು. ಈಗ ಹಲವು ದೊಡ್ಡ ನಿರ್ಮಾಣ ಸಂಸ್ಥೆಗಳು ‘ಪುಷ್ಪ 2’ ಹಂಚಿಕೆಗೆ ಆಸಕ್ತಿ ತೋರಿಸಿವೆ. ಆದರೆ, ಮೈತ್ರಿ ಮೂವೀ ಮೇಕರ್ಸ್​ ಇದಕ್ಕೆ ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ. ಬದಲಿಗೆ ಹಿಂದಿ ಬೆಲ್ಟ್​​ನಲ್ಲಿ ತಾವೇ ಸಿನಿಮಾ ರಿಲೀಸ್ ಮಾಡಲು ಆಸಕ್ತಿ ತೋರಿಸಿದೆ ಎನ್ನಲಾಗುತ್ತಿದೆ. ಈ ಮೂಲಕ ಹಿಂದಿ ಚಿತ್ರರಂಗದಲ್ಲೂ ತಮ್ಮ ಹೆಜ್ಜೆ ಇಡಲು ಈ ನಿರ್ಮಾಣ ಸಂಸ್ಥೆ ಲೆಕ್ಕಾಚಾರ ಹಾಕಿಕೊಂಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಬೇಕಿದೆ. ‘ಪುಷ್ಪ 2’ ಚಿತ್ರ 2023ರ ಬೇಸಿಗೆಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

Sukumar: ‘ಪುಷ್ಪ’ ನೋಡಿ ಸುಕುಮಾರ್​ಗೆ ಮೆಸೇಜ್​ ಮಾಡಿದ ‘3 ಈಡಿಯಟ್ಸ್​’ ನಿರ್ದೇಶಕ ರಾಜ್​ಕುಮಾರ್​ ಹಿರಾನಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ