AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ಸುದೀಪ್​ ಮಾತಿಗೆ ಬೆಲೆಕೊಟ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಪ್ರಶಾಂತ್​ ಸಂಬರಗಿ; ಮನೆಯವರಿಗೆ ಶಾಕ್

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ಸುದೀಪ್​ ಧ್ವನಿ ಕೇಳಿತ್ತು. ಪ್ರತಿ ಸದಸ್ಯರಿಗೂ ಅವರು ಸಲಹೆ ಸೂಚನೆ ನೀಡಿದ್ದರು. ಪ್ರಶಾಂತ್​ ಸಂಬರಗಿಗೆ ಮುಟ್ಟಿ ನೋಡಿಕೊಳ್ಳುವಂತೆ ಹೇಳಿದ್ದರು.

Prashanth Sambargi: ಸುದೀಪ್​ ಮಾತಿಗೆ ಬೆಲೆಕೊಟ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಪ್ರಶಾಂತ್​ ಸಂಬರಗಿ; ಮನೆಯವರಿಗೆ ಶಾಕ್
ಬಿಗ್​ ಬಾಸ್​ ಕನ್ನಡ - ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: May 05, 2021 | 5:40 PM

Share

ಬಿಗ್​ ಬಾಸ್ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಎಂದಾಗ ನೆನಪಾಗೋದು ಅವರ ಕ್ರಾಂತಿಯ ಮಾತುಗಳು. ಮನೆಯಲ್ಲಿ ಗುಂಪುಗಾರಿಕೆ ಇದೆ, ಮನೆಯಲ್ಲಿ ಅಸಮಾನತೆ ಇದೆ ಎಂದೆಲ್ಲ ಕೂಗಾಡಿ, ಕಿರುಚಾಡಿ ಅನೇಕ ಬಾರಿ ಜಗಳ ಮಾಡಿದ್ದಾರೆ. ಆದರೆ, ಅವರು ಈಗ ತುಂಬಾನೇ ಬದಲಾಗಿದ್ದಾರೆ. ಎಲ್ಲರ ಜತೆಯೂ ಬೆರೆಯುತ್ತಿದ್ದಾರೆ. ಬೇರೆ ಸದಸ್ಯರಿಗೆ ಸಲಹೆ ಸೂಚನೆ ಕೊಡುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಇದಕ್ಕೆ ಸುದೀಪ್​ ಅವರ ಸೂಚನೆ ಕಾರಣ.

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ಸುದೀಪ್​ ಧ್ವನಿ ಕೇಳಿತ್ತು. ಪ್ರತಿ ಸದಸ್ಯರಿಗೂ ಅವರು ಸಲಹೆ ಸೂಚನೆ ನೀಡಿದ್ದರು. ಪ್ರಶಾಂತ್​ ಸಂಬರಗಿಗೆ ಮುಟ್ಟಿ ನೋಡಿಕೊಳ್ಳುವಂತೆ ಹೇಳಿದ್ದರು. ‘ಇದು ಒಂಥರಾ ಕಥೆ ಅಲ್ಲ, ಆದರೂ ಕಥೆ ಥರ ಕೇಳಿಸಿಕೊಳ್ಳಿ. ಅಳುವ ಮಗುವಿಗೆ ಹಾಲು ಜಾಸ್ತಿ ಸಿಗತ್ತೆ ಪ್ರಶಾಂತ್‌. ಹಾಗಂತ, ಅಳು ಜಾಸ್ತಿ ಆದರೆ ನೋಡುವವರಿಗೆ ಎರಡು ತಟ್ಟೋಣ ಅನ್ನಿಸಿಬಿಡತ್ತೆ ಅನ್ನೋದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ’ ಎಂದಿದ್ದರು.

ಪ್ರಶಾಂತ್​ ಸಣ್ಣ ಸಣ್ಣ ವಿಚಾರಕ್ಕೂ ಕೂಗಾಡುತ್ತಿದ್ದರು. ಇದರಿಂದ ಎಲ್ಲರ ಗಮನವನ್ನು ತಮ್ಮೆಡೆಗೆ ಸೆಳೆಯಬಹುದು ಎಂಬುದು ಅವರ ಆಲೋಚನೆ ಆಗಿತ್ತು. ಆದರೆ, ಇದು ಬೇರೆಯವರಿಗೆ ಹಿಂಸೆ ಆಗುತ್ತಿದೆ ಎಂಬುದನ್ನು ಪ್ರಶಾಂತ್​ಗೆ ಪರೋಕ್ಷವಾಗಿ ತಿಳಿಸಿದ್ದರು ಸುದೀಪ್​. ಇದಾದ ನಂತರ ಕ್ಯಾಮೆರಾ ಎದುರು ಹೋಗಿ ಮಾತನಾಡಿದ್ದ ಪ್ರಶಾಂತ್​, ನನ್ನ ತಪ್ಪನ್ನು ತಿದ್ದುಕೊಳ್ಳುತ್ತೇನೆ ಎಂದಿದ್ದರು.

ಈಗ ಪ್ರಶಾಂತ್​ ತಮ್ಮ ತಪ್ಪನ್ನು ತಿದ್ದಿಕೊಂಡಂತೆ ಕಾಣುತ್ತಿದೆ. ಅವರು ಮನೆಯ ಎಲ್ಲಾ ಸದಸ್ಯರ ಜತೆ ಬರೆಯುತ್ತಿದ್ದಾರೆ. ಯಾರ ಜತೆಯೂ ಅಷ್ಟಾಗಿ ಜಗಳ ಮಾಡುತ್ತಿಲ್ಲ. ಇದು ಮನೆಯವರಿಗೆ ಖುಷಿ ನೀಡಿದೆ. ಇದು ಮನೆಯವರ ಗಮನಕ್ಕೂ ಬಂದಿದೆ.

ಈ ಬಗ್ಗೆ ಮಾತನಾಡಿರುವ ರಘು ಗೌಡ, ಅಂತೂ 10ನೇ ವಾರಕ್ಕೆ ಬದಲಾದಿರಿ. ಇಷ್ಟು ವಾರಗಳಲ್ಲಿ ಎಲ್ಲಾ ಸದಸ್ಯರನ್ನು ನೀವು ಬೆಂಬಲಿಸಿದ್ದು ಇದೇ ಮೊದಲು ಎನಿಸುತ್ತದೆ ಅಲ್ಲವೇ ಎಂದು ಕೇಳಿದ್ದಾರೆ. ಇದಕ್ಕೆ ಪ್ರಶಾಂತ್​ ಕಡೆಯಿಂದ ಹೌದು ಎನ್ನುವ ಉತ್ತರ ಬಂತು.

ಇದನ್ನೂ ಓದಿ: Kichcha Sudeep: ಜಾಸ್ತಿ ಆದ್ರೆ ಎರಡು ತಟ್ಟೋಣ ಅನ್ಸುತ್ತೆ; ಪ್ರಶಾಂತ್ ಸಂಬರಗಿಗೆ ಸುದೀಪ್​ ವಾರ್ನಿಂಗ್​

Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ