Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಮಾಡುವುದು ಬಿಟ್ಟು ಬೇರೆ ಯಾವುದೇ ಆಯ್ಕೆ ಉಳಿದಿಲ್ಲ; ಆರ್ಥಿಕ ಸಂಕಷ್ಟದಲ್ಲಿ ಶ್ರುತಿ ಹಾಸನ್

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿ. ಕೆಜಿಎಫ್​ ನಿರ್ದೇಶಕ ಪ್ರಶಾಂತ್​ ನೀಲ್​ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಜರ್ನಲಿಸ್ಟ್​ ಆಗಿ ಶ್ರುತಿ ಕಾಣಿಸಿಕೊಳ್ಳುತ್ತಿದ್ದಾರೆ.  

ಕೆಲಸ ಮಾಡುವುದು ಬಿಟ್ಟು ಬೇರೆ ಯಾವುದೇ ಆಯ್ಕೆ ಉಳಿದಿಲ್ಲ; ಆರ್ಥಿಕ ಸಂಕಷ್ಟದಲ್ಲಿ ಶ್ರುತಿ ಹಾಸನ್
ಶೃತಿ ಹಾಸನ್
Follow us
ರಾಜೇಶ್ ದುಗ್ಗುಮನೆ
|

Updated on: May 10, 2021 | 6:30 PM

ಸ್ಟಾರ್​ ನಟರ ಮಕ್ಕಳಾದರೆ ಕೆರಿಯರ್​ ರೂಪಿಸಿಕೊಳ್ಳೋದು ಸುಲಭವಾಗುತ್ತದೆ ಎಂಬುದು ಎಲ್ಲರೂ ಒಪ್ಪಿಕೊಳ್ಳಲೇಬೇಕಾದ ವಿಚಾರ. ಆದರೆ, ಇದರ ಜತೆಗೆ ಕೆಲ ಸಣ್ಣ ಸಣ್ಣ ವಿಚಾರಕ್ಕೂ ಟ್ರೋಲ್​ ಆಗಬೇಕಾಗುತ್ತದೆ. ತಂದೆಯ ಹಣವನ್ನು ಇವರು ಉಡಾಯಿಸುತ್ತಿದ್ದಾರೆ ಎನ್ನುವ ಮಾತನ್ನು ಕೇಳಬೇಕಾಗುತ್ತದೆ. ಶ್ರುತಿ ಹಾಸನ್​ ಕೂಡ ಇದಕ್ಕೆ ಹೊರತಾಗಿಲ್ಲ. ಕಮಲ್​ ಹಾಸನ್​ ಮಗಳಾಗಿ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಈಗ ಅವರು ಮಾಧ್ಯಮದ ಜತೆ ಮುಚ್ಚುಮರೆ ಇಲ್ಲದೆ ಎಲ್ಲವನ್ನೂ ಹೇಳಿಕೊಂಡಿದ್ದಾರೆ.

‘ನನಗೆ ಹಣಕಾಸಿನ ತೊಂದರೆ ಇದೆ. ಹೀಗಾಗಿ, ಶೂಟಿಂಗ್​ನಲ್ಲಿ ಪಾಲ್ಗೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಶೂಟಿಂಗ್​​ ಮಾಡುವಾಗ ಮಾಸ್ಕ್​ ಇಲ್ಲದೆ ಕಾಣಿಸಿಕೊಳ್ಳುವುದಕ್ಕೆ ತುಂಬಾನೇ ಭಯವಾಗುತ್ತದೆ. ಆದಾಗ್ಯೂ ಒಪ್ಪಿಕೊಂಡ ಪ್ರಾಜೆಕ್ಟ್​ಗಳನ್ನು ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಖರ್ಚುಗಳನ್ನು ನಿಭಾಯಿಸಲು ಕೆಲಸ ಮಾಡುವುದೊಂದೇ ಆಯ್ಕೆ,’ ಎಂದಿದ್ದಾರೆ ಶ್ರುತಿ.

‘ಶ್ರುತಿ ಹಾಸನ್​ ಸ್ವಾವಲಂಬಿ ಎಂಬುದನ್ನು ಒತ್ತಿ ಹೇಳಿದ್ದಾರೆ. ನಾನು ಇಂಡಿಪೆಂಡೆಂಟ್​ ಮಹಿಳೆ. ನನ್ನ ತಂದೆ ನಟ-ರಾಜಕಾರಣಿ ಹೌದು. ಆದರೆ, ನನ್ನ ಬಿಲ್​ಗಳನ್ನು ನಾನೇ ಪೇ ಮಾಡುತ್ತೇನೆ. ನನ್ನ ತಂದೆ ತಾಯಿ ಬಳಿ ಯಾವಾಗಲೂ ಆರ್ಥಿಕ ಸಹಾಯ ಕೇಳಿಲ್ಲ’ ಎಂದಿದ್ದಾರೆ ಅವರು.

‘ತಪ್ಪಿರಲಿ, ಸರಿ ಇರಲಿ ನಾನೇ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ. 2020ರ ಆರಂಭದಲ್ಲಿ ನಾನು ಮನೆ ಒಂದನ್ನು ಖರೀದಿಸಿದ್ದೇನೆ. ನಂತರ ಕೊರೊನಾ ಆರಂಭವಾಯಿತು. ಸಿನಿಮಾ ಕೆಲಸಗಳು ಬಂದ್​ ಆದವು. ಈಗ ಎಲ್ಲವೂ ಸರಿಯಾಗುತ್ತಿದೆ ಎನ್ನುವಾಗಲೇ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ, ಹಣಕಾಸಿನ ತೊಂದರೆ ಇದೆ’ ಎಂದು ಅವರು ಹೇಳಿದ್ದಾರೆ.

‘ಹಣಕಾಸಿನ ತೊಂದರೆ ಇದೆ ಎಂದಾಗೆಲ್ಲ ಒಂದಷ್ಟು ವಿಚಾರಗಳು ತಲೆಗೆ ಬರುತ್ತವೆ. ನಾನು ಕೇವಲ ಇಎಂಐ ಕಟ್ಟಲು ಒದ್ದಾಡುತ್ತಿದ್ದೇನೆ ಅಷ್ಟೆ. ಅನೇಕರು ಆಹಾರಕ್ಕಾಗಿ, ಇನ್ನೂ ಕೆಲವರು ಔಷಧ ತೆಗೆದುಕೊಳ್ಳಲ ಹಣ ಇಲ್ಲದೆ ಒದ್ದಾಡುತ್ತಿದ್ದಾರೆ. ಅವರನ್ನು ನೆನಪಿಸಿಕೊಂಡಾಗ ನನ್ನ ಲೈಫ್​ ಅದ್ಭುತವಾಗಿದೆ ಎನಿಸುತ್ತದೆ’ ಎಂಬುದು ಶ್ರುತಿ ಮಾತು.

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾದಲ್ಲಿ ಶ್ರುತಿ ಹಾಸನ್​ ನಾಯಕಿ. ಕೆಜಿಎಫ್​ ನಿರ್ದೇಶಕ ಪ್ರಶಾಂತ್​ ನೀಲ್​ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಜರ್ನಲಿಸ್ಟ್​ ಆಗಿ ಶ್ರುತಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕಮಲ್​ ಹಾಸನ್​ ಚುನಾವಣಾ ಸೋಲಿನ ನಂತರ ನನ್ನ ತಂದೆ ಫೈಟರ್​ ಎಂದ ಶ್ರುತಿ ಹಾಸನ್​

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ