AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ಗೆ ತುಚ್ಛ ಪದ ಬಳಸಿದ್ದ ಪೋಸಾನಿ ಕೃಷ್ಣ ಸಿನಿಮಾ ಬದುಕು ಅಂತ್ಯ?

ವೈಎಸ್​ಆರ್​ಸಿಪಿ ಸೇರಿದ ಬಳಿಕ ಪೋಸಾನಿಗೆ ಕೆಟ್ಟ ಹೆಸರು ಬಂತು. ಅವರು ಚಂದ್ರಬಾಬು ನಾಯ್ಡು ವಿರುದ್ಧ ಕೆಟ್ಟದಾಗಿ ಮಾತನಾಡಿದರು. ಸಮಯ ಕಳೆದಂತೆ ಅವರು ಚಿರಂಜೀವಿಯನ್ನು ಟೀಕಿಸಿದರು. ಒಂದು ಹಂತದಲ್ಲಿ ಪೋಸಾನಿ ಕೃಷ್ಣ ಅವರಿಗೆ ಸಿನಿಮಾ ರಂಗದಲ್ಲಿ ಆಫರ್​ಗಳೇ ಇಲ್ಲದಂತೆ ಆಯಿತು.

ಪವನ್ ಕಲ್ಯಾಣ್​ಗೆ ತುಚ್ಛ ಪದ ಬಳಸಿದ್ದ ಪೋಸಾನಿ ಕೃಷ್ಣ ಸಿನಿಮಾ ಬದುಕು ಅಂತ್ಯ?
ಪವನ್-ಪೋಸಾನಿ
ರಾಜೇಶ್ ದುಗ್ಗುಮನೆ
|

Updated on: Jun 07, 2024 | 10:54 AM

Share

ಪೋಸಾನಿ ಕೃಷ್ಣ (Posani Krishna) ಟಾಲಿವುಡ್​ನಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದರು. ಹಾಸ್ಯ ನಟನಾಗಿ, ವಿಲನ್ ಆಗಿ ಗಮನ ಸೆಳೆದಿದ್ದರು. ಆದರೆ, ಅವರು ರಾಜಕೀಯಕ್ಕೆ ಬಂದು ಹೆಸರು ಹಾಳು ಮಾಡಿಕೊಂಡರು. ಆರಂಭದಲ್ಲಿ ಅವರು ಪ್ರಜಾ ರಾಜ್ಯಂ ಪಕ್ಷದಲ್ಲಿ ಇದ್ದರು. ಅಲ್ಲಿ ಚುನಾವಣೆಗೆ ನಿಂತು ಸೋತರು. ನಂತರ ಅವರು ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್​ಆರ್​ಸಿಪಿ ಸೇರಿದರು. ಅಲ್ಲಿಂದ ಅವರು ಹಾದಿ ತಪ್ಪಿದರು. ಈಗ ನಾರಾ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಅಧಿಕಾರಕ್ಕೆ ಬಂದಿದ್ದು ಪೋಸಾನಿ ಕೃಷ್ಣ ವೃತ್ತಿ ಜೀವನ ಕೊನೆ ಆಗಲಿದೆ ಎನ್ನಲಾಗುತ್ತಿದೆ.

ವೈಎಸ್​ಆರ್​ಸಿಪಿ ಸೇರಿದ ಬಳಿಕ ಪೋಸಾನಿಗೆ ಕೆಟ್ಟ ಹೆಸರು ಬಂತು. ಅವರು ಚಂದ್ರಬಾಬು ನಾಯ್ಡು ವಿರುದ್ಧ ಕೆಟ್ಟದಾಗಿ ಮಾತನಾಡಿದರು. ಸಮಯ ಕಳೆದಂತೆ ಅವರು ಚಿರಂಜೀವಿಯನ್ನು ಟೀಕಿಸಿದರು. ಒಂದು ಹಂತದಲ್ಲಿ ಪೋಸಾನಿ ಕೃಷ್ಣ ಅವರಿಗೆ ಸಿನಿಮಾ ರಂಗದಲ್ಲಿ ಆಫರ್​ಗಳೇ ಇಲ್ಲದಂತೆ ಆಯಿತು. ಆ ಬಳಿಕ ಪೋಸಾನಿ ಕೃಷ್ಣ ಅವರು ಪವನ್ ಕಲ್ಯಾಣ್​ನ ಟೀಕಿಸಲು ಆರಂಭಿಸಿದರು. ಅವರ ವಿರುದ್ಧ ತುಚ್ಛ ಹಾಗೂ ಅಶ್ಲೀಲ ಪದ ಬಳಕೆ ಮಾಡಿದರು.

ಪವನ್​ ಕಲ್ಯಾಣ್ ಹಾಗೂ ಚಿರಂಜೀವಿ ಜೊತೆ ಪೋಸಾನಿ ನಟಿಸಿದ್ದಾರೆ. ಆದಾಗ್ಯೂ, ಅವರ ವಿರುದ್ಧ ದ್ವೇಷ ಸಾಧಿಸುತ್ತಾ ಬಂದಿದ್ದಾರೆ. ಜಗನ್ ಅವರು ಪೋಸಾನಿನ ನಂಬಿ ಆಂಧ್ರಪ್ರದೇಶ ಫಿಲ್ಮ್​ ಡೆವಲಪ್​ಮೆಂಟ್​ನಲ್ಲಿ ಪ್ರಮುಖ ಪಾತ್ರ ನೀಡಿದರು. ಆದರೆ, ಪೋಸಾನಿ ಅವರ ಗಮನ ಅಲ್ಲಿರಲೇ ಇಲ್ಲ.

ಇದನ್ನೂ ಓದಿ: ಚುನಾವಣೆ ಗೆದ್ದ ಪವನ್​ ಕಲ್ಯಾಣ್​ಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿ ಸ್ವಾಗತ; ವಿಡಿಯೋ ನೋಡಿ..

ಈಗ ಟಿಡಿಪಿ ಮೈತ್ರಿ ಆಂಧ್ರ ಪ್ರದೇಶದಲ್ಲಿ ಗೆಲುವು ಕಂಡಿದೆ. ಈಗ ಪೋಸಾನಿ ಅವರು ಪವನ್ ವಿರುದ್ಧ ಮತ್ತೆ ಹರಿಹಾಯುತ್ತಾರಾ ನೋಡಬೇಕಿದೆ. ಪೋಸಾನಿ ವೃತ್ತಿ ಬದುಕು ಸಂಪೂರ್ಣವಾಗಿ ಕೊನೆ ಆಯಿತು ಎಂದೇ ಎಲ್ಲರೂ ಭಾವಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!