ಪವನ್ ಕಲ್ಯಾಣ್​ಗೆ ತುಚ್ಛ ಪದ ಬಳಸಿದ್ದ ಪೋಸಾನಿ ಕೃಷ್ಣ ಸಿನಿಮಾ ಬದುಕು ಅಂತ್ಯ?

ವೈಎಸ್​ಆರ್​ಸಿಪಿ ಸೇರಿದ ಬಳಿಕ ಪೋಸಾನಿಗೆ ಕೆಟ್ಟ ಹೆಸರು ಬಂತು. ಅವರು ಚಂದ್ರಬಾಬು ನಾಯ್ಡು ವಿರುದ್ಧ ಕೆಟ್ಟದಾಗಿ ಮಾತನಾಡಿದರು. ಸಮಯ ಕಳೆದಂತೆ ಅವರು ಚಿರಂಜೀವಿಯನ್ನು ಟೀಕಿಸಿದರು. ಒಂದು ಹಂತದಲ್ಲಿ ಪೋಸಾನಿ ಕೃಷ್ಣ ಅವರಿಗೆ ಸಿನಿಮಾ ರಂಗದಲ್ಲಿ ಆಫರ್​ಗಳೇ ಇಲ್ಲದಂತೆ ಆಯಿತು.

ಪವನ್ ಕಲ್ಯಾಣ್​ಗೆ ತುಚ್ಛ ಪದ ಬಳಸಿದ್ದ ಪೋಸಾನಿ ಕೃಷ್ಣ ಸಿನಿಮಾ ಬದುಕು ಅಂತ್ಯ?
ಪವನ್-ಪೋಸಾನಿ
Follow us
|

Updated on: Jun 07, 2024 | 10:54 AM

ಪೋಸಾನಿ ಕೃಷ್ಣ (Posani Krishna) ಟಾಲಿವುಡ್​ನಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದರು. ಹಾಸ್ಯ ನಟನಾಗಿ, ವಿಲನ್ ಆಗಿ ಗಮನ ಸೆಳೆದಿದ್ದರು. ಆದರೆ, ಅವರು ರಾಜಕೀಯಕ್ಕೆ ಬಂದು ಹೆಸರು ಹಾಳು ಮಾಡಿಕೊಂಡರು. ಆರಂಭದಲ್ಲಿ ಅವರು ಪ್ರಜಾ ರಾಜ್ಯಂ ಪಕ್ಷದಲ್ಲಿ ಇದ್ದರು. ಅಲ್ಲಿ ಚುನಾವಣೆಗೆ ನಿಂತು ಸೋತರು. ನಂತರ ಅವರು ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್​ಆರ್​ಸಿಪಿ ಸೇರಿದರು. ಅಲ್ಲಿಂದ ಅವರು ಹಾದಿ ತಪ್ಪಿದರು. ಈಗ ನಾರಾ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಅಧಿಕಾರಕ್ಕೆ ಬಂದಿದ್ದು ಪೋಸಾನಿ ಕೃಷ್ಣ ವೃತ್ತಿ ಜೀವನ ಕೊನೆ ಆಗಲಿದೆ ಎನ್ನಲಾಗುತ್ತಿದೆ.

ವೈಎಸ್​ಆರ್​ಸಿಪಿ ಸೇರಿದ ಬಳಿಕ ಪೋಸಾನಿಗೆ ಕೆಟ್ಟ ಹೆಸರು ಬಂತು. ಅವರು ಚಂದ್ರಬಾಬು ನಾಯ್ಡು ವಿರುದ್ಧ ಕೆಟ್ಟದಾಗಿ ಮಾತನಾಡಿದರು. ಸಮಯ ಕಳೆದಂತೆ ಅವರು ಚಿರಂಜೀವಿಯನ್ನು ಟೀಕಿಸಿದರು. ಒಂದು ಹಂತದಲ್ಲಿ ಪೋಸಾನಿ ಕೃಷ್ಣ ಅವರಿಗೆ ಸಿನಿಮಾ ರಂಗದಲ್ಲಿ ಆಫರ್​ಗಳೇ ಇಲ್ಲದಂತೆ ಆಯಿತು. ಆ ಬಳಿಕ ಪೋಸಾನಿ ಕೃಷ್ಣ ಅವರು ಪವನ್ ಕಲ್ಯಾಣ್​ನ ಟೀಕಿಸಲು ಆರಂಭಿಸಿದರು. ಅವರ ವಿರುದ್ಧ ತುಚ್ಛ ಹಾಗೂ ಅಶ್ಲೀಲ ಪದ ಬಳಕೆ ಮಾಡಿದರು.

ಪವನ್​ ಕಲ್ಯಾಣ್ ಹಾಗೂ ಚಿರಂಜೀವಿ ಜೊತೆ ಪೋಸಾನಿ ನಟಿಸಿದ್ದಾರೆ. ಆದಾಗ್ಯೂ, ಅವರ ವಿರುದ್ಧ ದ್ವೇಷ ಸಾಧಿಸುತ್ತಾ ಬಂದಿದ್ದಾರೆ. ಜಗನ್ ಅವರು ಪೋಸಾನಿನ ನಂಬಿ ಆಂಧ್ರಪ್ರದೇಶ ಫಿಲ್ಮ್​ ಡೆವಲಪ್​ಮೆಂಟ್​ನಲ್ಲಿ ಪ್ರಮುಖ ಪಾತ್ರ ನೀಡಿದರು. ಆದರೆ, ಪೋಸಾನಿ ಅವರ ಗಮನ ಅಲ್ಲಿರಲೇ ಇಲ್ಲ.

ಇದನ್ನೂ ಓದಿ: ಚುನಾವಣೆ ಗೆದ್ದ ಪವನ್​ ಕಲ್ಯಾಣ್​ಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿ ಸ್ವಾಗತ; ವಿಡಿಯೋ ನೋಡಿ..

ಈಗ ಟಿಡಿಪಿ ಮೈತ್ರಿ ಆಂಧ್ರ ಪ್ರದೇಶದಲ್ಲಿ ಗೆಲುವು ಕಂಡಿದೆ. ಈಗ ಪೋಸಾನಿ ಅವರು ಪವನ್ ವಿರುದ್ಧ ಮತ್ತೆ ಹರಿಹಾಯುತ್ತಾರಾ ನೋಡಬೇಕಿದೆ. ಪೋಸಾನಿ ವೃತ್ತಿ ಬದುಕು ಸಂಪೂರ್ಣವಾಗಿ ಕೊನೆ ಆಯಿತು ಎಂದೇ ಎಲ್ಲರೂ ಭಾವಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ