AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಕುಂತಲಂ ನಿರ್ಮಾಣ ಮಾಡಿ ದೊಡ್ಡ ಹೊಡೆತ ತಿಂದೆ’; ಕೊನೆಗೂ ಒಪ್ಪಿಕೊಂಡ ನಿರ್ಮಾಪಕ

‘ಶಾಕುಂತಲಂ’ ಸಿನಿಮಾದ ಬಜೆಟ್​ 50 ಕೋಟಿ ರೂಪಾಯಿ ಮೀರಿದೆ. ಸಿನಿಮಾ ಇಷ್ಟೊಂದು ಹೀನಾಯವಾಗಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ.

‘ಶಾಕುಂತಲಂ ನಿರ್ಮಾಣ ಮಾಡಿ ದೊಡ್ಡ ಹೊಡೆತ ತಿಂದೆ’; ಕೊನೆಗೂ ಒಪ್ಪಿಕೊಂಡ ನಿರ್ಮಾಪಕ
ದಿಲ್ ರಾಜು-ಸಮಂತಾ
ರಾಜೇಶ್ ದುಗ್ಗುಮನೆ
|

Updated on: May 04, 2023 | 2:35 PM

Share

ನಟಿ ಸಮಂತಾಗೆ (Samantha) ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾಗಳು ಒಂದು ಮಟ್ಟದ ಕಲೆಕ್ಷನ್ ಮಾಡುತ್ತವೆ. ಆದರೆ, ಕೆಲವೊಮ್ಮೆ ಅಂದುಕೊಂಡಂತೆ ನಡೆಯುವುದಿಲ್ಲ. ಸಮಂತಾ ನಟನೆಯ ‘ಶಾಕುಂತಲಂ’ ಚಿತ್ರ ಹೀನಾಯವಾಗಿ ಸೋಲು ಕಂಡಿತು. ಈ ಸಿನಿಮಾ ಮೊದಲ ವಾರ 10 ಕೋಟಿ ರೂಪಾಯಿ ಗಳಿಸಲೂ ವಿಫಲವಾಯಿತು. ಮೊದಲ ವಾರವೇ ಇಷ್ಟು ಹೀನಾಯವಾಗಿದ್ದಾಗ ಮುಂದಿನ ದಿನಗಳ ಗಳಿಕೆ ಬಗ್ಗೆ ಯಾರೂ ಮಾತನಾಡುವುದಿಲ್ಲ. ಈಗ ‘ಶಾಕುಂತಲಂ’ ಸಿನಿಮಾ (Shakuntalam) ಸೋಲನ್ನು ನಿರ್ಮಾಪಕ ದಿಲ್ ರಾಜು ಒಪ್ಪಿಕೊಂಡಿದ್ದಾರೆ. ಸಿನಿಮಾ ದೊಡ್ಡ ಹೊಡೆತ ನೀಡಿದೆ ಎಂದು ಒಪ್ಪಿಕೊಂಡಿದ್ದಾರೆ.

ಗುಣಶೇಖರ್ ನಿರ್ದೇಶನದ ‘ಶಾಕುಂತಲಂ’ ಸಿನಿಮಾ ತೆಲುಗು ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಯಿತು. ಈ ಸಿನಿಮಾದ ಬಜೆಟ್ 50 ಕೋಟಿ ರೂಪಾಯಿ ಮೀರಿದೆ. ಸಿನಿಮಾ ಇಷ್ಟೊಂದು ಹೀನಾಯವಾಗಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಈ ಸಿನಿಮಾದಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸಿದ್ದಾರೆ. ರಾಜೇಶ್ ಮನ್ನ ಅವರ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ದಿಲ್ ರಾಜು ಈ ವಿಚಾರಮಾತನಾಡಿದ್ದಾರೆ.

‘ನಾನು 50ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. ನಾಲ್ಕರಿಂದ ಐದು ಸಿನಿಮಾಗಳು ಮಾತ್ರ ನನಗೆ ಆರ್ಥಿಕವಾಗಿ ಹೊರೆಯಾಗಿವೆ. ನನ್ನ 25 ವರ್ಷಗಳ ಕರಿಯರ್​ನಲ್ಲಿ ಶಾಕುಂತಲಂ ಸಿನಿಮಾ ದೊಡ್ಡ ಹೊಡೆತ ನೀಡಿತು’ ಎಂದಿದ್ದಾರೆ ದಿಲ್ ರಾಜು.

‘ಯಶಸ್ಸು ಸಿಕ್ಕಿಲ್ಲ ಅಂದರೆ ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ಜನರಿಗೆ ಸಿನಿಮಾ ಇಷ್ಟ ಆದರೆ ಅದನ್ನು ಸೆಲೆಬ್ರೇಟ್ ಮಾಡುತ್ತಾರೆ. ಒಂದೊಮ್ಮೆ ಅವರು ಸೆಲಬ್ರೆಟ್ ಮಾಡಿಲ್ಲ ಎಂದರೆ ನನ್ನ ಜಡ್ಜ್​ಮೆಂಟ್ ತಪ್ಪಾಗಿದೆ ಎಂದರ್ಥ’ ಎಂದು ದಿಲ್ ರಾಜು ಹೇಳಿದ್ದಾರೆ. ಆದರೆ ಅವರು ಎಲ್ಲಿಯೂ ನಿರ್ದೇಶಕರನ್ನಾಗಲೀ, ಕಲಾವಿದರನ್ನಾಗಲೀ ದೂರಿಲ್ಲ.

ಇದನ್ನೂ ಓದಿ: ‘ಶಾಕುಂತಲಂ’ ಸಿನಿಮಾ ಸೋತ ಬಳಿಕ ಸಮಂತಾಗೆ ನೆನಪಾಯ್ತು ಭಗವದ್ಗೀತೆಯ ಶ್ಲೋಕ

‘ಶಾಕುಂತಲಂ’ ಸೋಲು ಸಮಂತಾಗೆ ಬೇಸರ ತಂದಿದೆ. ಈ ಸಿನಿಮಾ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಮಂತಾ ಸಿನಿಮಾ ಗೆಲ್ಲಲು ವಿಫಲ ಆಯಿತು. ಇದನ್ನು ಮರೆತು ಅವರು ಮುನ್ನಡೆಯುತ್ತಿದ್ದಾರೆ. ‘ಸಿಟಾಡೆಲ್’ ಇಂಡಿಯ್ ವರ್ಷನ್​ನಲ್ಲಿ ಅವರು ನಟಿಸುತ್ತಿದ್ದಾರೆ. ಮೂಲ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ