AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಶಾಕಿಂಗ್​ ಹೇಳಿಕೆ ಬೆನ್ನಲ್ಲೇ ಉದ್ದನೆಯ ಸಾಲುಗಳನ್ನು ಬರೆದ ಶಿಲ್ಪಾ; ಕೆಲವೇ ಗಂಟೆಗಳಲ್ಲಿ ಡಿಲೀಟ್​

ಈ ಪೋಸ್ಟ್​ಅನ್ನು ಮಾಡಿದ್ದು ಏಕೆ ಎನ್ನುವ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಳ್ಳುತ್ತಿರುವಾಗಲೇ ಅವರು ಪೋಸ್ಟ್​ ಡಿಲೀಟ್​ ಮಾಡಿದ್ದಾರೆ. ಶಿಲ್ಪಾ ಯಾವ ಉದ್ದೇಶಕ್ಕೆ ಈ ಪೋಸ್ಟ್ ಮಾಡಿದ್ದಾರೆ ಎನ್ನುವ ವಿಚಾರ ತಿಳಿಯಲಿಲ್ಲ.

ಪತಿಯ ಶಾಕಿಂಗ್​ ಹೇಳಿಕೆ ಬೆನ್ನಲ್ಲೇ ಉದ್ದನೆಯ ಸಾಲುಗಳನ್ನು ಬರೆದ ಶಿಲ್ಪಾ; ಕೆಲವೇ ಗಂಟೆಗಳಲ್ಲಿ ಡಿಲೀಟ್​
ಶಿಲ್ಪಾ ಶೆಟ್ಟಿ-ರಾಜ್​​ ಕುಂದ್ರಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 16, 2021 | 7:00 AM

Share

ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಇತ್ತೀಚೆಗೆ ಶಾಕಿಂಗ್​ ಹೇಳಿಕೆ ಒಂದನ್ನು ನೀಡಿದ್ದರು. ಮೊದಲ ಪತ್ನಿ ಕವಿತಾ ಕುಂದ್ರಾ ಹೊಂದಿದ್ದ ಅಕ್ರಮ ಸಂಬಂಧದ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ಶಾಕಿಂಗ್​ ಹೇಳಿಕೆ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಇನ್​ಸ್ಟಾಗ್ರಾಂನಲ್ಲಿ ಉದ್ದನೆಯ ಸಾಲುಗಳನ್ನು ಬರೆದುಕೊಂಡಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ಅವರು ಅದನ್ನು ಡಿಲೀಟ್​ ಮಾಡಿದ್ದಾರೆ.

‘ಒಳ್ಳೆಯ ಮನುಷ್ಯನಿಗೆ ಬೇಸರವಾದರೆ, ಅವನ ಜತೆ ಒಳ್ಳೆಯವರೆಲ್ಲರೂ ನೋವುಣ್ಣುತ್ತಾರೆ. ಕೆಲವೊಮ್ಮೆ ಒಳ್ಳೆಯವರಿಗೆ ಕೆಟ್ಟದ್ದಾದರೆ ನಾವು ಅದನ್ನು ನೋಡುತ್ತೇವೆ. ಆದರೆ ನಾವು ಅದಕ್ಕೆ ಏನನ್ನೂ ಮಾಡುವುದಿಲ್ಲ. ಏಕೆಂದರೆ ಘಟನೆಗಳು ನಮ್ಮಿಂದ ದೂರವಿರುತ್ತವೆ ಅಥವಾ ಅದು ನಮಗೆ ಸಂಬಂಧಿಸಿದ್ದು ಆಗಿರುವುದಿಲ್ಲ’ ಎಂದು ಪೋಸ್ಟ್​ ಆರಂಭಿಸಿದ್ದಾರೆ.

‘ಒಂದೊಮ್ಮೆ ಒಳ್ಳೆಯ ವ್ಯಕ್ತಿ ಮೇಲೆ ದಾಳಿ ಆದರೆ, ಗಾಯವಾದರೆ, ಜೈಲಿಗೆ ಹಾಕಿದರೆ ನಮ್ಮ ಸುರಕ್ಷತೆ ಕಡಿಮೆ ಇದೆ ಎಂದರ್ಥ’ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ. ಈ ಪೋಸ್ಟ್​ಅನ್ನು ಮಾಡಿದ್ದು ಏಕೆ ಎನ್ನುವ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಳ್ಳುತ್ತಿರುವಾಗಲೇ ಅವರು ಪೋಸ್ಟ್​ ಡಿಲೀಟ್​ ಮಾಡಿದ್ದಾರೆ. ಶಿಲ್ಪಾ ಯಾವ ಉದ್ದೇಶಕ್ಕೆ ಈ ಪೋಸ್ಟ್ ಮಾಡಿದ್ದಾರೆ ಎನ್ನುವ ವಿಚಾರ ತಿಳಿಯಲಿಲ್ಲ.

ರಾಜ್​ ಕುಂದ್ರಾ ತಂಗಿಯ ಗಂಡ ಹಾಗೂ ರಾಜ್​ ಕುಂದ್ರಾ ಮೊದಲ ಪತ್ನಿ ಕವಿತಾ ನಡುವೆ ಅಕ್ರಮ ಸಂಬಂಧ ಇತ್ತು. ಇಬ್ಬರೂ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದರಂತೆ. ಈ ವಿಚಾರದ ಬಗ್ಗೆ ರಾಜ್​ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈ ಘಟನೆಯಿಂದ ಎರಡು ಕುಟುಂಬಗಳ ಬಾಳಲ್ಲಿ ಬಿರುಗಾಳಿ ಎದ್ದಿತ್ತು ಎಂದು ರಾಜ್​ ಮರುಗಿದ್ದರು. ಈ ಶಾಕಿಂಗ್​ ಹೇಳಿಕೆ ಬಗ್ಗೆ ಶಿಲ್ಪಾ ಶೆಟ್ಟಿ ಕೂಡ ಅಸಮಾಧಾನ ಹೊರ ಹಾಕಿದ್ದರು.

ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್​ಕುಂದ್ರಾ 2009ರಲ್ಲಿ ಮದುವೆ ಆದರು. ಇಬ್ಬರೂ ಸುಖ ಸಂಸಾರ ನಡೆಸುತ್ತಿದ್ದಾರೆ. ಸದಾ ಮಕ್ಕಳು ಹಾಗೂ ಪತಿಯೊಂದಿಗೆ ಸಮಯ ಕಳೆಯುವ ಶಿಲ್ಪಾ ಶೆಟ್ಟಿ ಅದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಇದನ್ನೂ ಓದಿ:  Shilpa Shetty: ಅಕ್ರಮ ಸಂಬಂಧದಿಂದ ಮುರಿದು ಬಿದ್ದಿತ್ತು ರಾಜ್ ಕುಂದ್ರಾ ಮೊದಲ ಮದುವೆ; ಅಪ್ಸೆಟ್ ಆದ ಶಿಲ್ಪಾ ಶೆಟ್ಟಿ

Published On - 6:59 am, Wed, 16 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ