AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಬೆಡ್​ರೂಂನಿಂದ ಬಂತು ಮುತ್ತಿನ ಶಬ್ದ! ಕೊಟ್ಟಿದ್ಯಾರು, ತೆಗೆದುಕೊಂಡಿದ್ಯಾರು?

Bigg Boss Kannada Rajeev: ರಾಜೀವ್​ ಹೊರಹೋದ ನಂತರ ಬೆಡ್​ರೂಂಗೆ ಬಂದು ಶುಭಾ ಕಣ್ಣೀರು ಹಾಕುತ್ತಾ ಮಲಗಿದ್ದರು. ಆಗ ಅವರ ಬಳಿ ಬಂದ ದಿವ್ಯಾ ಉರುಡುಗ ಹಾಗೂ ಅರವಿಂದ್ ಸಮಾಧಾನದ ಮಾತುಗಳನ್ನು ಆಡಿದರು.

Bigg Boss Kannada: ಬಿಗ್​ ಬಾಸ್​ ಬೆಡ್​ರೂಂನಿಂದ ಬಂತು ಮುತ್ತಿನ ಶಬ್ದ! ಕೊಟ್ಟಿದ್ಯಾರು, ತೆಗೆದುಕೊಂಡಿದ್ಯಾರು?
ಬಿಗ್ ಬಾಸ್​ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on:Apr 26, 2021 | 4:24 PM

Share

ಈ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಪ್ರೀತಿ-ಪ್ರೇಮ ಹುಟ್ಟಿಕೊಂಡಿವೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರ ಅವರು ಮದುವೆ ಆದ ಉದಾಹರಣೆ ಕೂಡ ಇದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್-ದಿವ್ಯಾ ಉರುಡುಗ ಹಾಗೂ ಮಂಜು ಪಾವಗಡ-ದಿವ್ಯಾ ಸುರೇಶ್​ ನಡುವೆ ಏನೋ ನಡೆಯುತ್ತಿದೆ ಎಂಬುದು ಪ್ರೇಕ್ಷಕರಿಗೆ ಅರ್ಥವಾಗಿದೆ. ಹೀಗಿರುವಾಗಲೆ ಬಿಗ್​ ಬಾಸ್​ ಮನೆಯ ಬೆಡ್​ರೂಂನಲ್ಲಿ ಮುತ್ತಿನ ಶಬ್ದ ಕೇಳಿದೆ.

ಎಂಟನೇ ವಾರದ ಎಪಿಸೋಡ್​ನಲ್ಲಿ ಬಿಗ್​ ಬಾಸ್ ಮನೆಯಿಂದ ರಾಜೀವ್​ ಹೊರ ಹೋಗಿದ್ದಾರೆ. ಅವರು ಮನೆಯಿಂದ ಹೊರ ಹೋಗಿರುವುದು ಸಾಕಷ್ಟು ಜನರಿಗೆ ಶಾಕ್​ ಮೂಡಿಸಿದೆ. ಅದರಲ್ಲೂ ರಾಜೀವ್​ ಅವರನ್ನು ತುಂಬಾನೇ ಹಚ್ಚಿಕೊಂಡಿದ್ದ ಶುಭಾ ಪೂಂಜಾ ಬಿಕ್ಕಿಬಿಕ್ಕಿ ಅತ್ತಿದ್ದಾರೆ.

ಗೋಲ್ಡನ್​ ಪಾಸ್​ ಟಾಸ್ಕ್​ನಲ್ಲಿ ಶುಭಾ ಹಾಗೂ ರಾಜೀವ್​ ಒಪ್ಪಂದ ಮಾಡಿಕೊಂಡಿದ್ದರು ಎನ್ನುವ ವಿಚಾರ ಭಾನುವಾರ (ಏಪ್ರಿಲ್​ 25) ಎಪಿಸೋಡ್​ನಲ್ಲಿ ಗೊತ್ತಾಗಿದೆ. ರಾಜೀವ್​ಗೆ ಗೋಲ್ಡ್​ ಪಾಸ್​ ಸಿಕ್ಕ ಹೊರತಾಗಿಯೂ  ಅದನ್ನು ಬಳಸಿಕೊಳ್ಳಲಿಲ್ಲ. ಇದು ಅವರು ಮನೆಯಿಂದ ಹೊರ ಹೋಗಲು ಪ್ರಮುಖ ಕಾರಣವಾಗಿತ್ತು.

ಈ ವಿಚಾರ ಶುಭಾಗೆ ತುಂಬಾನೇ ಬೇಸರ ತರಿಸಿದೆ. ಹೀಗಾಗಿ, ಅವರು ಬಿಟ್ಟು ಬಿಡದೆ ಅಳೋಕೆ ಶುರುಮಾಡಿದ್ದಾರೆ. ರಾಜೀವ್​ ಹೊರಹೋದ ನಂತರ ಬೆಡ್​ರೂಂಗೆ ಬಂದು ಶುಭಾ ಕಣ್ಣೀರು ಹಾಕುತ್ತಾ ಮಲಗಿದ್ದರು. ಆಗ ಅವರ ಬಳಿ ಬಂದ ದಿವ್ಯಾ ಉರುಡುಗ ಹಾಗೂ ಅರವಿಂದ್ ಸಮಾಧಾನದ ಮಾತುಗಳನ್ನು ಆಡಿದರು. ಆಗಲೂ ಶುಭಾ ಕಣ್ಣೀರು ನಿಂತಿಲ್ಲ.

ಈ ವೇಳೆ ದಿವ್ಯಾ ಪ್ರೀತಿಯಿಂದ ಶುಭಾ ಅವರನ್ನು ಎಳೆದುಕೊಂಡು ಮುತ್ತಿಟ್ಟರು. ಬೆಡ್​ರೂಂನಲ್ಲಿ ಕತ್ತಲಿತ್ತು. ಪಕ್ಕದಲ್ಲಿ ಅರವಿಂದ್ ಕೂಡ ಇದ್ದಿದ್ದರಿಂದ ಆರಂಭದಲ್ಲಿ ದಿವ್ಯಾ ಮುತ್ತು ಕೊಟ್ಟಿದ್ದು ಅರವಿಂದ್​ಗೆ ಎಂದು ಅನೇಕರಿಗೆ ಅನಿಸಿತ್ತು. ಆದರೆ, ಮತ್ತೊಮ್ಮೆ ರಿವೈಂಡ್​ ಮಾಡಿ ನೋಡಿದಾಗ ದಿವ್ಯಾ ಮುತ್ತುಕೊಟ್ಟಿದ್ದು ಶುಭಾಗೆ ಎನ್ನುವುದು ಗೊತ್ತಾಗಿದೆ.

ಇನ್ನು, ರಾಜೀವ್​ ಬಿಗ್​ ಬಾಸ್ ಮನೆಯಿಂದ ಹೊರ ಹೋಗಿರುವ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಕೂಡ ಆಗುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್​​ಬಾಸ್ ಮನೆಯಿಂದ ರಾಜೀವ್​ ಹೊರ ಹೋಗಿದ್ದು ಎಷ್ಟು ಸರಿ? ಸಾಮಾಜಿಕ ಜಾಲತಾಣದಲ್ಲಿ ಜೋರಾಯ್ತು ಚರ್ಚೆ

Published On - 4:08 pm, Mon, 26 April 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ