AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಗೆದ್ದು ಬಂದು ಆಕ್ಸಿ ಮೀಟರ್ ಬಗ್ಗೆ ತುಂಬ ಉಪಯುಕ್ತ ಮಾಹಿತಿ ಹಂಚಿಕೊಂಡ ನಟಿ ಪೂಜಾ ಹೆಗ್ಡೆ

Pooja Hegde: ಆಕ್ಸಿ ಮೀಟರ್​ ಬಳಸಲು ಸರಿಯಾದ ಕ್ರಮ ಇದೆ ಎಂದು ವೈದ್ಯರು ಹೇಳುವವರೆಗೂ ನನಗೆ ತಿಳಿದಿರಲಿಲ್ಲ. ಈ ಮಾಹಿತಿಯಿಂದ ಸಹಾಯ ಆಗಲಿದೆ ಎಂದು ಭಾವಿಸುತ್ತೇನೆ. ಈ ರೋಗವನ್ನು ಮಣಿಸುವಲ್ಲಿ ಯಾವ ಮಾಹಿತಿ ಕೂಡ ಸಣ್ಣದಲ್ಲ.

ಕೊವಿಡ್ ಗೆದ್ದು ಬಂದು ಆಕ್ಸಿ ಮೀಟರ್ ಬಗ್ಗೆ ತುಂಬ ಉಪಯುಕ್ತ ಮಾಹಿತಿ ಹಂಚಿಕೊಂಡ ನಟಿ ಪೂಜಾ ಹೆಗ್ಡೆ
ಪೂಜಾ ಹೆಗ್ಡೆ
ಮದನ್​ ಕುಮಾರ್​
| Edited By: |

Updated on: May 14, 2021 | 3:27 PM

Share

ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿತ್ತು. ಕೆಲವೇ ದಿನಗಳ ಹಿಂದೆ ಅವರು ಗುಣಮುಖರಾಗಿದ್ದಾರೆ. ಮಹಾಮಾರಿಯನ್ನು ಗೆದ್ದು ಬಂದಿರುವ ಅವರಿಗೆ ಅಭಿಮಾನಿಗಳು ಶುಭ ಹಾರೈಕೆಗಳನ್ನು ತಿಳಿಸುತ್ತಿದ್ದಾರೆ. ಅಂಥ ಎಲ್ಲ ಅಭಿಮಾನಿಗಳಿಗಾಗಿ ಪೂಜಾ ಒಂದು ಉಪಯುಕ್ತವಾದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಕ್ಸಿ ಮೀಟರ್​ ಉಪಯೋಗಿಸುವ ಸರಿಯಾದ ಕ್ರಮ ಯಾವುದು ಎಂಬುದನ್ನು ಅವರು ತಿಳಿಸಿಕೊಟ್ಟಿದ್ದಾರೆ.

ಏ.25ರಂದು ಪೂಜಾಗೆ ಕೊವಿಡ್​ ಸೋಂಕು ತಗುಲಿರುವುದು ದೃಡವಾಗಿತ್ತು. 10 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇದ್ದು ಚಿಕಿತ್ಸೆ ಪಡೆದ ಬಳಿಕ ಅವರು ಗುಣಮುಖರಾದರು. ಮೇ 5ರಂದು ತಮಗೆ ನೆಗೆಟಿವ್​ ವರದಿ ಬಂದಿರುವ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದರು. ತಮ್ಮ ಈ ಅನುಭವದ ಆಧಾರದ ಮೇಲೆ ಅವರು ಈ ಆಕ್ಸಿ ಮೀಟರ್​ ಮೂಲಕ ಪಲ್ಸ್​ ರೇಟ್​ ಮತ್ತು ಆಕ್ಸಿಜನ್​ ಲೆವೆಲ್​ ನೋಡಿಕೊಳ್ಳುವ ಸರಿಯಾದ ಕ್ರಮ ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.

ಪೂಜಾ ಅವರು ಅಭಿಮಾನಿಗಳ ಮೇಲಿನ ಕಾಳಜಿಯಿಂದ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನಾನು ಕೊವಿಡ್​ನಿಂದಾಗಿ ಹೋಮ್​ ಕ್ವಾರಂಟೈನ್​ ಆಗಿದ್ದಾಗ ನನ್ನ ಆಕ್ಸಿಜನ್​ ಲೆವೆಲ್​ ಅನ್ನು ನೋಡಿಕೊಳ್ಳಬೇಕಿತ್ತು. ಅದನ್ನು ನೋಡಲು ಸರಿಯಾದ ಕ್ರಮ ಇದೆ ಎಂದು ವೈದ್ಯರು ಹೇಳುವವರೆಗೂ ನನಗೆ ತಿಳಿದಿರಲಿಲ್ಲ. ಈ ಮಾಹಿತಿಯಿಂದ ಸಹಾಯ ಆಗಲಿದೆ ಎಂದು ಭಾವಿಸುತ್ತೇನೆ. ಈ ರೋಗವನ್ನು ಮಣಿಸುವಲ್ಲಿ ಯಾವ ಮಾಹಿತಿ ಕೂಡ ಸಣ್ಣದಲ್ಲ. ಎಲ್ಲರೂ ಮನೆಯಲ್ಲಿ ಸುರಕ್ಷಿತರಾಗಿರಿ’ ಎಂದು ಆ ವಿಡಿಯೋಗೆ ಪೂಜಾ ಕ್ಯಾಪ್ಷನ್​ ನೀಡಿದ್ದಾರೆ.

ಆಕ್ಸಿ ಮೀಟರ್​ ಬಳಸುವಾಗ ಉಗುರಿಗೆ ನೇಲ್​ ಪಾಲಿಶ್​ ಹಚ್ಚಿರಬಾರದು. ಕೈ ಸರಿಯಾಗಿ ತೊಳೆದುಕೊಂಡಿರಬೇಕು. ತೋರು ಬೆರಳು ಅಥವಾ ಉಂಗುರು ಬೆರಳುಗಳ ಮೂಲಕ ಮಾತ್ರ ನೋಡಿಕೊಳ್ಳಬೇಕು. ಚೆಕ್​ ಮಾಡಿಕೊಳ್ಳುವುದಕ್ಕಿಂತ 5 ನಿಮಿಷ ಮುಂದೆ ವಿಶ್ರಾಂತ ಸ್ಥಿತಿಯಲ್ಲಿ ಇರಬೇಕು ಎಂಬುದನ್ನು ವಿಡಿಯೋದಲ್ಲಿ ಪೂಜಾ ವಿವರಿಸಿದ್ದಾರೆ. ರಾಧೆ ಶ್ಯಾಮ್​, ಆಚಾರ್ಯಾ, ಮೋಸ್ಟ್​ ಎಲಿಜೆಬಲ್​ ಬ್ಯಾಚುಲರ್​, ಸರ್ಕಸ್​ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ:

ದಳಪತಿ 65 ಸಿನಿಮಾಗೆ ನಟಿ ಪೂಜಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್​; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್​ ಸಿಲಿಂಡರ್

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ