AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ರಿಲೀಸ್ ಪೋಸ್ಟ್​ಪೋನ್ ಆದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ನಟ ಪ್ರಭಾಸ್

‘ಸಲಾರ್’ ಸಿನಿಮಾ ರಿಲೀಸ್​ಗಾಗಿ ಕಾದಿದ್ದರು ಪ್ರಭಾಸ್. ಸಾಲು ಸಾಲು ಸೋಲು ಕಾಣುತ್ತಿರುವುದರಿಂದ ಅವರಿಗೆ ‘ಸಲಾರ್’ ಮೂಲಕ ಒಂದು ದೊಡ್ಡ ಗೆಲವು ಬೇಕಿತ್ತು. ಆದರೆ, ಸಿನಿಮಾ ರಿಲೀಸ್ ಪೋಸ್ಟ್​ಪೋನ್ ಮಾಡಲಾಗಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೀಗಾಗಿ, ಪ್ರಭಾಸ್​ ಬೇರೆ ದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

‘ಸಲಾರ್’ ರಿಲೀಸ್ ಪೋಸ್ಟ್​ಪೋನ್ ಆದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ನಟ ಪ್ರಭಾಸ್
ಸಲಾರ್
ರಾಜೇಶ್ ದುಗ್ಗುಮನೆ
|

Updated on: Sep 14, 2023 | 7:33 AM

Share

ಪ್ರಭಾಸ್ ಅವರು ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ಬೆನ್ನಲ್ಲೇ ಪ್ರಭಾಸ್ (Prabhas) ವಿದೇಶಕ್ಕೆ ಹಾರಿದ್ದಾರೆ ಎಂದು ವರದಿ ಆಗಿದೆ. ಆದರೆ, ಯಾವುದೂ ಅಧಿಕೃತವಾಗಿಲ್ಲ.

‘ಸಲಾರ್’ ಸಿನಿಮಾ ರಿಲೀಸ್​ಗಾಗಿ ಕಾದಿದ್ದರು ಪ್ರಭಾಸ್. ಸಾಲು ಸಾಲು ಸೋಲು ಕಾಣುತ್ತಿರುವುದರಿಂದ ಅವರಿಗೆ ‘ಸಲಾರ್’ ಮೂಲಕ ಒಂದು ದೊಡ್ಡ ಗೆಲವು ಬೇಕಿತ್ತು. ಆದರೆ, ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಕೆಲಸಗಳಿಗೆ ಇನ್ನೂ ಹೆಚ್ಚಿನ ಸಮಯ ಬೇಕು ಎಂದು ನಿರ್ದೇಶಕ ಪ್ರಶಾಂತ್​ ನೀಲ್​ಗೆ ಅನಿಸಿದೆ. ಈ ಕಾರಣದಿಂದ ಅವರು ಸಿನಿಮಾ ರಿಲೀಸ್  ಪೋಸ್ಟ್​ಪೋನ್ ಮಾಡಿದ್ದಾರೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೀಗಾಗಿ, ಪ್ರಭಾಸ್​ ಬೇರೆ ದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಕೆಲವು ವರದಿಗಳ ಪ್ರಕಾರ ಪ್ರಭಾಸ್ ಅವರು ವಿದೇಶಕ್ಕೆ ತೆರಳಿದ್ದು ಕಾಲಿನ ಸರ್ಜರಿಗೆ ಎನ್ನಲಾಗುತ್ತಿದೆ. ಕಾಲಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಈ ಮೊದಲು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗ ಅವರು ಎರಡನೇ ಬಾರಿಗೆ ಅವರು ಸರ್ಜರಿ ಮಾಡಿಸಿಕೊಳ್ಳಬೇಕಿದೆ. ಇನ್ನೂ ಕೆಲವು ವರದಿಗಳು ಹೇಳೋದೇ ಬೇರೆ. ‘ಆದಿಪುರುಷ್’ ರಿಲೀಸ್ ಬಳಿಕ ಅವರು ಒಂದಷ್ಟು ಸಮಯ ವಿದೇಶದಲ್ಲಿ ಕಳೆದು ಬಂದಿದ್ದರು. ಆ ಬಳಿಕ ಅವರು ನಿರಂತರವಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆದರು. ಅವರಿಗೆ ಒಂದು ಬ್ರೇಕ್ ಬೇಕಿದೆ. ಹೀಗಾಗಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಪ್ರಭಾಸ್ ಉಳಿದ ಸೆಲೆಬ್ರಿಟಗಳಂತಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಅಷ್ಟೊಂದು ಆ್ಯಕ್ಟೀವ್ ಆಗಿಲ್ಲ. ಅವರು ಫೋಟೋಗಳನ್ನು ಹಂಚಿಕೊಳ್ಳೋದು ತುಂಬಾನೇ ಕಡಿಮೆ. ಈ ಕಾರಣಕ್ಕೆ ಅವರು ಯಾವ ದೇಶಕ್ಕೆ ತೆರಳಿದ್ದಾರೆ, ಯಾವ ಕಾರಣಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ರಿವೀಲ್ ಆಗೋ ಸಾಧ್ಯತೆ ಕಡಿಮೆ.

ಇದನ್ನೂ ಓದಿ: ‘ಸಲಾರ್’ ರಿಲೀಸ್ ಡೇಟ್​ನಲ್ಲಿ ಬರುತ್ತಿದೆ ಶ್ರೀಲೀಲಾ ಸಿನಿಮಾ; ಪ್ರಮೋಷನ್​ಗೆ ಭರ್ಜರಿ ಪ್ಲಾನ್

‘ಸಲಾರ್’ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಮೊದಲಾದವರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಮೂಲಕ ವಿಜಯ್ ಕಿರಗಂದೂರು ಇದನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ