AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಬಳಿಕ ಪೂನಂ​ ಕೌರ್​ಗೆ ಅಂಟಿತು ವಿಚಿತ್ರ ಕಾಯಿಲೆ; ಮೆದುಳಿನ ಮೇಲೂ ಬೀರುತ್ತೆ ಪರಿಣಾಮ  

ನವೆಂಬರ್ 18ರಂದು ನಟಿಗೆ ಫೈಬ್ರೋಮಯಾಲ್ಜಿಯಾ ಸಮಸ್ಯೆ ಇರುವುದು ತಿಳಿದು ಬಂದಿದೆ. ಆಯುರ್ವೇದ ಚಿಕಿತ್ಸೆ ಬಳಿಕ ನಟಿಯ ಆರೋಗ್ಯ ಸುಧಾರಣೆ ಕಂಡಿದೆ ಎನ್ನಲಾಗಿದೆ.

ಸಮಂತಾ ಬಳಿಕ ಪೂನಂ​ ಕೌರ್​ಗೆ ಅಂಟಿತು ವಿಚಿತ್ರ ಕಾಯಿಲೆ; ಮೆದುಳಿನ ಮೇಲೂ ಬೀರುತ್ತೆ ಪರಿಣಾಮ  
ಸಮಂತಾ-ಪೂನಂ
TV9 Web
| Edited By: |

Updated on:Dec 02, 2022 | 8:27 AM

Share

ನಟಿ ಸಮಂತಾ (Samantha) ಅವರು myositis ಹೆಸರಿನ ಕಾಯಿಲೆಗೆ ತುತ್ತಾಗಿದ್ದಾರೆ. ಈ ಸಮಸ್ಯೆ ಎದುರಾದರೆ ಸ್ನಾಯುಗಳಲ್ಲಿ ಸಾಕಷ್ಟು ನೋವು ಕಾಣಿಸಿಕೊಳ್ಳುತ್ತದೆ. ಈ ಕಾರಣಕ್ಕೆ ಸಮಂತಾ ಒಪ್ಪಿಕೊಂಡ ಸಿನಿಮಾ ಕೆಲಸಗಳು ಹಿಂದಿ ಬಿದ್ದಿವೆ. ಈ ಕಾಯಿಲೆಗೆ ಚಿಕಿತ್ಸೆ ಪಡೆಯಲು ಸಮಂತಾ ಹರಸಹಾಸ ಪಡುತ್ತಿದ್ದಾರೆ. ಸದ್ಯ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಅವರು ನಿರ್ಧರಿಸಿದ್ದಾರೆ. ಈಗ ಪೂನಂ ಕೌರ್​ಗೆ (Poonam Kaur) ಇದೇ ಮಾದರಿಯ ಸಮಸ್ಯೆ ಕಾಣಿಸಿಕೊಂಡಿದೆ.

ಪೂನಂ​ ಕೌರ್​ಗೆ ಕಾಣಿಸಿಕೊಂಡಿರುವ ರೋಗದ ಹೆಸರು ಫೈಬ್ರೋಮಯಾಲ್ಜಿಯಾ. ಇದು ಕೂಡ ಅಪರೂಪದ ಕಾಯಿಲೆ. ನವೆಂಬರ್ 12ರಂದು ಪೂನಂ ಅವರು ದೆಹಲಿಯಲ್ಲಿ ಬ್ರಹ್ಮಕುಮಾರಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗಲು ಹೊರಟಿದ್ದರು. ಆಗ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡಿದೆ. ನಂತರ ಅವರು ಕೇರಳಕ್ಕೆ ತೆರಳಿ ಆಯುರ್ವೇದ ಚಿಕಿತ್ಸೆ ಪಡೆದಿದ್ದಾರೆ. ನವೆಂಬರ್ 18ರಂದು ನಟಿಗೆ ಫೈಬ್ರೋಮಯಾಲ್ಜಿಯಾ ಸಮಸ್ಯೆ ಇರುವುದು ತಿಳಿದು ಬಂದಿದೆ. ಆಯುರ್ವೇದ ಚಿಕಿತ್ಸೆ ಬಳಿಕ ನಟಿಯ ಆರೋಗ್ಯ ಸುಧಾರಣೆ ಕಂಡಿದೆ ಎನ್ನಲಾಗಿದೆ. ಸದ್ಯ ಅವರು ಮುಂಬೈನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Myositis ರೀತಿಯೇ ಫೈಬ್ರೋಮಯಾಲ್ಜಿಯಾವನ್ನು ಗುಣಪಡಿಸಲು ಸಾಧ್ಯವಿಲ್ಲ. ಇದು Myositis ಕಾಯಿಲೆಯಷ್ಟು ಅಪಾಯಕಾರಿ ಅಲ್ಲ ಎನ್ನಲಾಗಿದೆ. ಫೈಬ್ರೋಮಯಾಲ್ಜಿಯಾ ಬಂದರೆ ಸ್ನಾಯುಗಳಲ್ಲಿ ನೋವು ಹೆಚ್ಚಾಗುತ್ತದೆ. ಮಿದುಳಿನ ಕಾರ್ಯನಿರ್ವಹಣೆಯ ಮೇಲೆ ಇದು ಪರಿಣಾಮ ಬೀರುತ್ತವೆ. ಆದರೆ, ಪೂನಂ ಪರಿಸ್ಥಿತಿ ಅಷ್ಟು ಅಪಾಯದಲ್ಲಿ ಇಲ್ಲ ಎನ್ನಲಾಗಿದೆ.

ಪೂನಂ ಅವರು ಇತ್ತೀಚೆಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ ಆಗಿದ್ದರು. ರಾಹುಲ್ ಗಾಂಧಿ ಅವರ ಜತೆ ಕೈ ಕೈ ಹಿಡಿದು ಸಾಗಿದ್ದರು. ಈ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಪೂನಂ ಅವರಿಗೆ ಮಿಸ್ ಆಂಧ್ರ ಪ್ರದೇಶ ಅವಾರ್ಡ್ ಸಿಕ್ಕ ನಂತರದಲ್ಲಿ ಜನಪ್ರಿಯತೆ ಪಡೆದರು. ಅವರು 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು.  2008ರಲ್ಲಿ ತೆರೆಗೆ ಬಂದ ಕನ್ನಡದ ‘ಬಂಧು ಬಳಗ’ ಚಿತ್ರದಲ್ಲಿ ಪೂನಂ ಬಣ್ಣ ಹಚ್ಚಿದ್ದರು. ಇದು ಅವರು ಕನ್ನಡದಲ್ಲಿ ನಟಿಸಿದ ಮೊದಲ ಹಾಗೂ ಕೊನೆಯ ಸಿನಿಮಾ. ಇತ್ತೀಚೆಗೆ ಅವರು ಅಷ್ಟಾಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ಇದನ್ನೂ ಓದಿ: ಸಮಂತಾ ನಟನೆಯ‘ಯಶೋದಾ’ ಚಿತ್ರಕ್ಕೆ ಕೋರ್ಟ್​​ನಿಂದ ತಡೆ; ಒಟಿಟಿ ರಿಲೀಸ್​​ಗೆ ಸಂಕಷ್ಟ

ಸಮಂತಾಗೆ ದಕ್ಷಿಣ ಕೊರಿಯಾದಲ್ಲಿ ಚಿಕಿತ್ಸೆ?

ನಟಿ ಸಮಂತಾ ರುತ್​ ಪ್ರಭು ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಈ ವಿಚಾರವನ್ನು ಅವರು ಬಾಯ್ಬಿಟ್ಟು ಹೇಳುವುದಕ್ಕೂ ಮುನ್ನವೇ ಅನೇಕ ಮಾಧ್ಯಮಗಳಲ್ಲಿ ಜಗಜ್ಜಾಹೀರು ಆಗಿತ್ತು. ನಂತರ ತಮಗೆ Myositis ಎಂಬ ಕಾಯಿಲೆ ಇದೆ ಎಂದು ಸ್ವತಃ ಸಮಂತಾ ಒಪ್ಪಿಕೊಂಡರು ಆಯುರ್ವೇದ ಔಷದಿ ಪ್ರಯತ್ನಿಸಿದ್ದ ಸಮಂತಾ ಅವರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಆದ್ದರಿಂದ ಅವರು ದಕ್ಷಿಣ ಕೊರಿಯಾದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎಂಬ ಮಾಹಿತಿ ಹರಡಿದೆ. ಈ ಬಗ್ಗೆ ಸಮಂತಾ ಕಡೆಯಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

Published On - 8:27 am, Fri, 2 December 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್