AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಸಾವಿನ ಬೆನ್ನಲ್ಲೇ ಮತ್ತೋರ್ವ ನಟಿಯ ಆತ್ಮಹತ್ಯೆ; ಪ್ರಿಯಕರನಿಗಾಗಿ ಹುಡುಕಾಟ

ಕಿರಣ್​ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆತ ಘಟನೆ ನಂತರದಲ್ಲಿ ತಲೆಮರಿಸಿಕೊಂಡಿದ್ದಾರೆ. ಸದ್ಯ, ಅವರ​ ವಿರುದ್ಧ ಪ್ರಕರಣ ದಾಖಲಾಗಿದೆ. ಶೀಘ್ರವೇ ಅವರನ್ನು ಬಂಧಿಸುವ ಬಗ್ಗೆ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಸಾವಿನ ಬೆನ್ನಲ್ಲೇ ಮತ್ತೋರ್ವ ನಟಿಯ ಆತ್ಮಹತ್ಯೆ; ಪ್ರಿಯಕರನಿಗಾಗಿ ಹುಡುಕಾಟ
ಅನುರಾಧಾ
TV9 Web
| Edited By: |

Updated on:Sep 30, 2021 | 10:05 PM

Share

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಅವರು ಇಂದು (ಸೆಪ್ಟೆಂಬರ್​ 30) ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದರು. ಇದಾದ ಬೆನ್ನಲ್ಲೇ ಟಾಲಿವುಡ್​ನಲ್ಲೂ ಒಂದು ಆತ್ಮಹತ್ಯೆ ನಡೆದಿದೆ. ತೆಲುಗಿನ ಜ್ಯೂನಿಯರ್​ ಆರ್ಟಿಸ್ಟ್​ ಅನುರಾಧಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿ ವಿಚಾರ ಈ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ.

ಹೈದರಾಬಾದ್​ನ ಬಂಜಾರಾ ಹಿಲ್ಸ್​ನಲ್ಲಿರುವ ತಮ್ಮ ನಿವಾಸದಲ್ಲೇ ಅನುರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅನುರಾಧಾ ಮನೆಯಿಂದ ಹೊರಗೆ ಬಂದಿರಲಿಲ್ಲ. ಇದು ನೆರೆಹೊರೆಯವರಿಗೆ ಅನುಮಾನ ಮೂಡಿಸಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ ಅವರು ನೇಣು ಹಾಕಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಪೊಲೀಸರು ಮನೆಗೆ ಬಂದು ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ ಅನುರಾಧಾ ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ಅವರ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅನುರಾಧಾ ಅವರು ಕಿರಣ್​ ಎಂಬುವವರನ್ನು ಪ್ರೀತಿಸುತ್ತಿದ್ದರು. ಅವರು ಅನುರಾಧಾಗೆ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದರು. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅನುರಾಧಾ ಅವರು ತೆಲುಗು ಇಂಡಸ್ಟ್ರಿಯಲ್ಲಿ ಜ್ಯೂನಿಯರ್​ ಆರ್ಟಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ ಕೂಡ ಸಿನಿಮಾ ಇಂಡಸ್ಟ್ರಿಯಲ್ಲೇ ಕೆಲಸ ಮಾಡಿಕೊಂಡಿದ್ದರು. ಆರು ವರ್ಷದ ಹಿಂದೆ ಇಬ್ಬರ ಪರಿಚಯವಾಗಿತ್ತು. ಶೀಘ್ರವೇ ಮದುವೆ ಆಗಲು ಇಬ್ಬರೂ ನಿರ್ಧರಿಸಿದ್ದರು. ಆದರೆ, ಕಿರಣ್ ಸಂಬಂಧ ಮುರಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಇದರಿಂದ ಅನುರಾಧಾ ಖಿನ್ನತೆಗೆ ಒಳಗಾದರು. ಈಗ ಅವರು ಆತ್ಮಹತ್ಯೆ ಮಾಡಿಕೊಂಡು ಜೀವವನ್ನೇ ತೆಗೆದುಕೊಂಡಿದ್ದಾರೆ.

ಸದ್ಯ, ಕಿರಣ್​ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆತ ಘಟನೆ ನಂತರದಲ್ಲಿ ತಲೆಮರಿಸಿಕೊಂಡಿದ್ದಾರೆ. ಸದ್ಯ, ಅವರ​ ವಿರುದ್ಧ ಪ್ರಕರಣ ದಾಖಲಾಗಿದೆ. ಶೀಘ್ರವೇ ಅವರನ್ನು ಬಂಧಿಸುವ ಬಗ್ಗೆ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಸಾವಿನ ಬಗ್ಗೆ ರಾಮನಗರ ಎಸ್​​ಪಿ ಹೇಳಿದ್ದಿಷ್ಟು

ಮೇಕಪ್ ಮ್ಯಾನ್​ ಮಹೇಶ್​ ಜತೆ ನಟಿ ಸವಿ ಮಾದಪ್ಪ ಕೊನೆಯ ಮಾತು

Published On - 9:46 pm, Thu, 30 September 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ