AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: May 22, 2021 | 7:42 PM

Share

bಕೊವಿಡ್​ ಹೆಚ್ಚುತ್ತಿರುವುದಕ್ಕೆ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಇನ್ನು, ಚಿತ್ರಮಂದಿರಗಳು ಮುಚ್ಚಿದ್ದು, ಸಿನಿಮಾ ಹಾಗೂ ಧಾರಾವಾಹಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಹೀಗಾಗಿ ಅನೇಕ ಧಾರಾವಾಹಿಗಳಿಗೆ ಅರ್ಧಕ್ಕೆ ನಿಲ್ಲುವ ಭಯ ಕಾಡಿದೆ. ಈಗ ಹಿಂದಿಯ ಜನಪ್ರಿಯ ಧಾರಾವಾಹಿ ‘ಶಾದಿ ಮುಬಾರಕ್’​ ಅರ್ಧಕ್ಕೆ ನಿಂತಿದೆ.

​‘ಶಾದಿ ಮುಬಾರಕ್’​ ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ಬಗ್ಗೆ ಸ್ಟಾರ್​ ಪ್ಲಸ್ ನಿರ್ಧಾರ ಕೈಗೊಂಡಿದೆ. ಧಾರಾವಾಹಿಯ ಮುಖ್ಯಪಾತ್ರಧಾರಿ ಮಾನವ್​ ಗೋಹಿಲ್​ಗೆ​ ಕೊವಿಡ್​-19 ಪಾಸಿಟಿವ್​ ಬಂದಿತ್ತು. ಹೀಗಾಗಿ, ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸಮಯ ಬೇಕು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸರ್ಕಾರ ಅನುಮತಿ ನೀಡಿದರೂ ಶೂಟಿಂಗ್​ ಅರಂಭವಾಗೋದು ಅನುಮಾನವೇ.

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿರ್ಧಾರದ ಬಗ್ಗೆ ಪಾತ್ರ ವರ್ಗದವರಿಗೆ ಈಗಾಗಲೇ ಸಂದೇಶ ರವಾನೆ ಆಗಿದೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಕನ್ನಡದ ಅನೇಕ ಧಾರಾವಾಹಿಗಳು ಅರ್ಧಕ್ಕೆ ನಿಂತಿದ್ದವು. ಹಿಂದಿಯಲ್ಲೂ ಕೂಡ ಸಾಕಷ್ಟು ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಪಟ್ಟಿವೆ. ಈಗ ಎರಡನೇ ಅಲೆ ಕಾಣಿಸಿಕೊಂಡಿದ್ದು ಮತ್ತೆ ಶೂಟಿಂಗ್​ ಸ್ಥಗಿತವಾಗಿದೆ. ಕರ್ನಾಟಕದಲ್ಲಿ ಲಾಕ್​ಡೌನ್​ ವಿಸ್ತರಣೆ ಆಗಿದೆ. ಹೀಗಾಗಿ, ಕನ್ನಡದ ಸಾಕಷ್ಟು ಧಾರಾವಾಹಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿವೆ. ಇನ್ನೂ ಕೆಲ ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಲಿವೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ.

ಇದನ್ನೂ ಓದಿ: Ranjani Raghavan: ‘ಕನ್ನಡತಿ’ ಧಾರಾವಾಹಿ ನಟಿ ರಂಜನಿ ರಾಘವನ್​ ಫೇಸ್​ಬುಕ್​ ಹ್ಯಾಕ್​; ಯಾರ ಮೇಲಿದೆ ಅನುಮಾನ?

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ