Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: May 22, 2021 | 7:42 PM

bಕೊವಿಡ್​ ಹೆಚ್ಚುತ್ತಿರುವುದಕ್ಕೆ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಇನ್ನು, ಚಿತ್ರಮಂದಿರಗಳು ಮುಚ್ಚಿದ್ದು, ಸಿನಿಮಾ ಹಾಗೂ ಧಾರಾವಾಹಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಹೀಗಾಗಿ ಅನೇಕ ಧಾರಾವಾಹಿಗಳಿಗೆ ಅರ್ಧಕ್ಕೆ ನಿಲ್ಲುವ ಭಯ ಕಾಡಿದೆ. ಈಗ ಹಿಂದಿಯ ಜನಪ್ರಿಯ ಧಾರಾವಾಹಿ ‘ಶಾದಿ ಮುಬಾರಕ್’​ ಅರ್ಧಕ್ಕೆ ನಿಂತಿದೆ.

​‘ಶಾದಿ ಮುಬಾರಕ್’​ ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ಬಗ್ಗೆ ಸ್ಟಾರ್​ ಪ್ಲಸ್ ನಿರ್ಧಾರ ಕೈಗೊಂಡಿದೆ. ಧಾರಾವಾಹಿಯ ಮುಖ್ಯಪಾತ್ರಧಾರಿ ಮಾನವ್​ ಗೋಹಿಲ್​ಗೆ​ ಕೊವಿಡ್​-19 ಪಾಸಿಟಿವ್​ ಬಂದಿತ್ತು. ಹೀಗಾಗಿ, ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸಮಯ ಬೇಕು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸರ್ಕಾರ ಅನುಮತಿ ನೀಡಿದರೂ ಶೂಟಿಂಗ್​ ಅರಂಭವಾಗೋದು ಅನುಮಾನವೇ.

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿರ್ಧಾರದ ಬಗ್ಗೆ ಪಾತ್ರ ವರ್ಗದವರಿಗೆ ಈಗಾಗಲೇ ಸಂದೇಶ ರವಾನೆ ಆಗಿದೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಕನ್ನಡದ ಅನೇಕ ಧಾರಾವಾಹಿಗಳು ಅರ್ಧಕ್ಕೆ ನಿಂತಿದ್ದವು. ಹಿಂದಿಯಲ್ಲೂ ಕೂಡ ಸಾಕಷ್ಟು ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಪಟ್ಟಿವೆ. ಈಗ ಎರಡನೇ ಅಲೆ ಕಾಣಿಸಿಕೊಂಡಿದ್ದು ಮತ್ತೆ ಶೂಟಿಂಗ್​ ಸ್ಥಗಿತವಾಗಿದೆ. ಕರ್ನಾಟಕದಲ್ಲಿ ಲಾಕ್​ಡೌನ್​ ವಿಸ್ತರಣೆ ಆಗಿದೆ. ಹೀಗಾಗಿ, ಕನ್ನಡದ ಸಾಕಷ್ಟು ಧಾರಾವಾಹಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿವೆ. ಇನ್ನೂ ಕೆಲ ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಲಿವೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ.

ಇದನ್ನೂ ಓದಿ: Ranjani Raghavan: ‘ಕನ್ನಡತಿ’ ಧಾರಾವಾಹಿ ನಟಿ ರಂಜನಿ ರಾಘವನ್​ ಫೇಸ್​ಬುಕ್​ ಹ್ಯಾಕ್​; ಯಾರ ಮೇಲಿದೆ ಅನುಮಾನ?

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್