AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: May 22, 2021 | 7:42 PM

Share

bಕೊವಿಡ್​ ಹೆಚ್ಚುತ್ತಿರುವುದಕ್ಕೆ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಇನ್ನು, ಚಿತ್ರಮಂದಿರಗಳು ಮುಚ್ಚಿದ್ದು, ಸಿನಿಮಾ ಹಾಗೂ ಧಾರಾವಾಹಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಹೀಗಾಗಿ ಅನೇಕ ಧಾರಾವಾಹಿಗಳಿಗೆ ಅರ್ಧಕ್ಕೆ ನಿಲ್ಲುವ ಭಯ ಕಾಡಿದೆ. ಈಗ ಹಿಂದಿಯ ಜನಪ್ರಿಯ ಧಾರಾವಾಹಿ ‘ಶಾದಿ ಮುಬಾರಕ್’​ ಅರ್ಧಕ್ಕೆ ನಿಂತಿದೆ.

​‘ಶಾದಿ ಮುಬಾರಕ್’​ ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ಬಗ್ಗೆ ಸ್ಟಾರ್​ ಪ್ಲಸ್ ನಿರ್ಧಾರ ಕೈಗೊಂಡಿದೆ. ಧಾರಾವಾಹಿಯ ಮುಖ್ಯಪಾತ್ರಧಾರಿ ಮಾನವ್​ ಗೋಹಿಲ್​ಗೆ​ ಕೊವಿಡ್​-19 ಪಾಸಿಟಿವ್​ ಬಂದಿತ್ತು. ಹೀಗಾಗಿ, ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸಮಯ ಬೇಕು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸರ್ಕಾರ ಅನುಮತಿ ನೀಡಿದರೂ ಶೂಟಿಂಗ್​ ಅರಂಭವಾಗೋದು ಅನುಮಾನವೇ.

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿರ್ಧಾರದ ಬಗ್ಗೆ ಪಾತ್ರ ವರ್ಗದವರಿಗೆ ಈಗಾಗಲೇ ಸಂದೇಶ ರವಾನೆ ಆಗಿದೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಕನ್ನಡದ ಅನೇಕ ಧಾರಾವಾಹಿಗಳು ಅರ್ಧಕ್ಕೆ ನಿಂತಿದ್ದವು. ಹಿಂದಿಯಲ್ಲೂ ಕೂಡ ಸಾಕಷ್ಟು ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಪಟ್ಟಿವೆ. ಈಗ ಎರಡನೇ ಅಲೆ ಕಾಣಿಸಿಕೊಂಡಿದ್ದು ಮತ್ತೆ ಶೂಟಿಂಗ್​ ಸ್ಥಗಿತವಾಗಿದೆ. ಕರ್ನಾಟಕದಲ್ಲಿ ಲಾಕ್​ಡೌನ್​ ವಿಸ್ತರಣೆ ಆಗಿದೆ. ಹೀಗಾಗಿ, ಕನ್ನಡದ ಸಾಕಷ್ಟು ಧಾರಾವಾಹಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿವೆ. ಇನ್ನೂ ಕೆಲ ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಲಿವೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ.

ಇದನ್ನೂ ಓದಿ: Ranjani Raghavan: ‘ಕನ್ನಡತಿ’ ಧಾರಾವಾಹಿ ನಟಿ ರಂಜನಿ ರಾಘವನ್​ ಫೇಸ್​ಬುಕ್​ ಹ್ಯಾಕ್​; ಯಾರ ಮೇಲಿದೆ ಅನುಮಾನ?

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು