AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಕೊವಿಡ್​ ಕಾರಣದಿಂದ ಅರ್ಧಕ್ಕೆ ನಿಂತ ಖ್ಯಾತ ಧಾರಾವಾಹಿ; ವೀಕ್ಷಕರಿಗೆ ಬೇಸರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: May 22, 2021 | 7:42 PM

Share

bಕೊವಿಡ್​ ಹೆಚ್ಚುತ್ತಿರುವುದಕ್ಕೆ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಇನ್ನು, ಚಿತ್ರಮಂದಿರಗಳು ಮುಚ್ಚಿದ್ದು, ಸಿನಿಮಾ ಹಾಗೂ ಧಾರಾವಾಹಿ ಶೂಟಿಂಗ್​ ಕೂಡ ನಿಲ್ಲಿಸಲಾಗಿದೆ. ಹೀಗಾಗಿ ಅನೇಕ ಧಾರಾವಾಹಿಗಳಿಗೆ ಅರ್ಧಕ್ಕೆ ನಿಲ್ಲುವ ಭಯ ಕಾಡಿದೆ. ಈಗ ಹಿಂದಿಯ ಜನಪ್ರಿಯ ಧಾರಾವಾಹಿ ‘ಶಾದಿ ಮುಬಾರಕ್’​ ಅರ್ಧಕ್ಕೆ ನಿಂತಿದೆ.

​‘ಶಾದಿ ಮುಬಾರಕ್’​ ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ಬಗ್ಗೆ ಸ್ಟಾರ್​ ಪ್ಲಸ್ ನಿರ್ಧಾರ ಕೈಗೊಂಡಿದೆ. ಧಾರಾವಾಹಿಯ ಮುಖ್ಯಪಾತ್ರಧಾರಿ ಮಾನವ್​ ಗೋಹಿಲ್​ಗೆ​ ಕೊವಿಡ್​-19 ಪಾಸಿಟಿವ್​ ಬಂದಿತ್ತು. ಹೀಗಾಗಿ, ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸಮಯ ಬೇಕು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸರ್ಕಾರ ಅನುಮತಿ ನೀಡಿದರೂ ಶೂಟಿಂಗ್​ ಅರಂಭವಾಗೋದು ಅನುಮಾನವೇ.

ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​ ಇರುವುದರಿಂದ ಸಿನಿಮಾ ಶೂಟಿಂಗ್​ ಬೇರೆಡೆ ಶಿಫ್ಟ್​ ಮಾಡೋಣ ಎಂದರೆ ಅದೂ ಅಸಾಧ್ಯವೇ. ಹೀಗಾಗಿ, ವಾಹಿನಿಯವರು ಧಾರಾವಾಹಿಯನ್ನು ಅರ್ಧಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿರ್ಧಾರದ ಬಗ್ಗೆ ಪಾತ್ರ ವರ್ಗದವರಿಗೆ ಈಗಾಗಲೇ ಸಂದೇಶ ರವಾನೆ ಆಗಿದೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಕನ್ನಡದ ಅನೇಕ ಧಾರಾವಾಹಿಗಳು ಅರ್ಧಕ್ಕೆ ನಿಂತಿದ್ದವು. ಹಿಂದಿಯಲ್ಲೂ ಕೂಡ ಸಾಕಷ್ಟು ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಪಟ್ಟಿವೆ. ಈಗ ಎರಡನೇ ಅಲೆ ಕಾಣಿಸಿಕೊಂಡಿದ್ದು ಮತ್ತೆ ಶೂಟಿಂಗ್​ ಸ್ಥಗಿತವಾಗಿದೆ. ಕರ್ನಾಟಕದಲ್ಲಿ ಲಾಕ್​ಡೌನ್​ ವಿಸ್ತರಣೆ ಆಗಿದೆ. ಹೀಗಾಗಿ, ಕನ್ನಡದ ಸಾಕಷ್ಟು ಧಾರಾವಾಹಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿವೆ. ಇನ್ನೂ ಕೆಲ ಧಾರಾವಾಹಿಗಳು ಅರ್ಧಕ್ಕೆ ನಿಲ್ಲಲ್ಲಿವೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ.

ಇದನ್ನೂ ಓದಿ: Ranjani Raghavan: ‘ಕನ್ನಡತಿ’ ಧಾರಾವಾಹಿ ನಟಿ ರಂಜನಿ ರಾಘವನ್​ ಫೇಸ್​ಬುಕ್​ ಹ್ಯಾಕ್​; ಯಾರ ಮೇಲಿದೆ ಅನುಮಾನ?

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!