AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ!

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Sep 01, 2023 | 11:21 AM

Share

‘ಜೈಲರ್’ ಸಿನಿಮಾ (Jailer Movie) ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲೇ 328 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಇನ್ನೂ ಕೆಲವು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸಲಿದೆ. ರಜನಿಕಾಂತ್ (Rajinikanth) ಅವರ ವೃತ್ತಿ ಜೀವನದಲ್ಲಿ ಮತ್ತೊಂದು ದೊಡ್ಡ ಗೆಲುವು ಸಿಕ್ಕಿದೆ. ಮತ್ತೊಂದು ವಿಶೇಷ ಎಂದರೆ, ಈ ಚಿತ್ರದ ಮೂಲಕ ರಜನಿಕಾಂತ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ಹೀರೋ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ! ರಜನಿಕಾಂತ್​ಗೆ ಚೆಕ್ ಹಸ್ತಾಂತರ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಜೈಲರ್’ ಚಿತ್ರದ ನಟನೆಗೆ ರಜನಿಕಾಂತ್​ಗೆ 210 ಕೋಟಿ ರೂಪಾಯಿ ಸಂಭಾವನೆ ಸಿಕ್ಕಂತೆ ಆಗಿದೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದ ಮೊದಲ ಹೀರೋ ಎನ್ನುವ ಖ್ಯಾತಿ ರಜನಿಕಾಂತ್​ಗೆ ಸಿಕ್ಕಿದೆ. ಈ ವಿಚಾರ ಕೇಳಿ ರಜನಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಈ ಚಿತ್ರದ ಮೂಲಕ ರಜನಿಕಾಂತ್ ದೊಡ್ಡ ಯಶಸ್ಸು ಕಂಡರು. ಈ ಚಿತ್ರದಲ್ಲಿ ರಜನಿ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್ ಮೊದಲಾದವರು ಮಾಡಿರುವ ಪಾತ್ರ ಕೂಡ ಗಮನ ಸೆಳೆದಿದೆ. ಗುರುವಾರ (ಆಗಸ್ಟ್ 31) ಈ ಚಿತ್ರ 2.4 ಕೋಟಿ ರೂಪಾಯಿ ಗಳಿಕೆ ಮಾಡಿದೆ.  ಈ ಮಧ್ಯೆ ಸಿನಿಮಾದ ಎಚ್​ಡಿ ಪ್ರಿಂಟ್ ಆನ್​ಲೈನ್​ನಲ್ಲಿ ಸೋರಿಕೆ ಆಗಿದ್ದು, ಚಿತ್ರಕ್ಕೆ ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!