AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ!

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Sep 01, 2023 | 11:21 AM

Share

‘ಜೈಲರ್’ ಸಿನಿಮಾ (Jailer Movie) ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲೇ 328 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಇನ್ನೂ ಕೆಲವು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸಲಿದೆ. ರಜನಿಕಾಂತ್ (Rajinikanth) ಅವರ ವೃತ್ತಿ ಜೀವನದಲ್ಲಿ ಮತ್ತೊಂದು ದೊಡ್ಡ ಗೆಲುವು ಸಿಕ್ಕಿದೆ. ಮತ್ತೊಂದು ವಿಶೇಷ ಎಂದರೆ, ಈ ಚಿತ್ರದ ಮೂಲಕ ರಜನಿಕಾಂತ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ಹೀರೋ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ! ರಜನಿಕಾಂತ್​ಗೆ ಚೆಕ್ ಹಸ್ತಾಂತರ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಜೈಲರ್’ ಚಿತ್ರದ ನಟನೆಗೆ ರಜನಿಕಾಂತ್​ಗೆ 210 ಕೋಟಿ ರೂಪಾಯಿ ಸಂಭಾವನೆ ಸಿಕ್ಕಂತೆ ಆಗಿದೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದ ಮೊದಲ ಹೀರೋ ಎನ್ನುವ ಖ್ಯಾತಿ ರಜನಿಕಾಂತ್​ಗೆ ಸಿಕ್ಕಿದೆ. ಈ ವಿಚಾರ ಕೇಳಿ ರಜನಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಈ ಚಿತ್ರದ ಮೂಲಕ ರಜನಿಕಾಂತ್ ದೊಡ್ಡ ಯಶಸ್ಸು ಕಂಡರು. ಈ ಚಿತ್ರದಲ್ಲಿ ರಜನಿ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್ ಮೊದಲಾದವರು ಮಾಡಿರುವ ಪಾತ್ರ ಕೂಡ ಗಮನ ಸೆಳೆದಿದೆ. ಗುರುವಾರ (ಆಗಸ್ಟ್ 31) ಈ ಚಿತ್ರ 2.4 ಕೋಟಿ ರೂಪಾಯಿ ಗಳಿಕೆ ಮಾಡಿದೆ.  ಈ ಮಧ್ಯೆ ಸಿನಿಮಾದ ಎಚ್​ಡಿ ಪ್ರಿಂಟ್ ಆನ್​ಲೈನ್​ನಲ್ಲಿ ಸೋರಿಕೆ ಆಗಿದ್ದು, ಚಿತ್ರಕ್ಕೆ ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು