AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ!

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Sep 01, 2023 | 11:21 AM

Share

‘ಜೈಲರ್’ ಸಿನಿಮಾ (Jailer Movie) ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲೇ 328 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಇನ್ನೂ ಕೆಲವು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸಲಿದೆ. ರಜನಿಕಾಂತ್ (Rajinikanth) ಅವರ ವೃತ್ತಿ ಜೀವನದಲ್ಲಿ ಮತ್ತೊಂದು ದೊಡ್ಡ ಗೆಲುವು ಸಿಕ್ಕಿದೆ. ಮತ್ತೊಂದು ವಿಶೇಷ ಎಂದರೆ, ಈ ಚಿತ್ರದ ಮೂಲಕ ರಜನಿಕಾಂತ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ಹೀರೋ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ! ರಜನಿಕಾಂತ್​ಗೆ ಚೆಕ್ ಹಸ್ತಾಂತರ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಜೈಲರ್’ ಚಿತ್ರದ ನಟನೆಗೆ ರಜನಿಕಾಂತ್​ಗೆ 210 ಕೋಟಿ ರೂಪಾಯಿ ಸಂಭಾವನೆ ಸಿಕ್ಕಂತೆ ಆಗಿದೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದ ಮೊದಲ ಹೀರೋ ಎನ್ನುವ ಖ್ಯಾತಿ ರಜನಿಕಾಂತ್​ಗೆ ಸಿಕ್ಕಿದೆ. ಈ ವಿಚಾರ ಕೇಳಿ ರಜನಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಈ ಚಿತ್ರದ ಮೂಲಕ ರಜನಿಕಾಂತ್ ದೊಡ್ಡ ಯಶಸ್ಸು ಕಂಡರು. ಈ ಚಿತ್ರದಲ್ಲಿ ರಜನಿ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್ ಮೊದಲಾದವರು ಮಾಡಿರುವ ಪಾತ್ರ ಕೂಡ ಗಮನ ಸೆಳೆದಿದೆ. ಗುರುವಾರ (ಆಗಸ್ಟ್ 31) ಈ ಚಿತ್ರ 2.4 ಕೋಟಿ ರೂಪಾಯಿ ಗಳಿಕೆ ಮಾಡಿದೆ.  ಈ ಮಧ್ಯೆ ಸಿನಿಮಾದ ಎಚ್​ಡಿ ಪ್ರಿಂಟ್ ಆನ್​ಲೈನ್​ನಲ್ಲಿ ಸೋರಿಕೆ ಆಗಿದ್ದು, ಚಿತ್ರಕ್ಕೆ ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ