‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ!

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?
ರಜನಿಕಾಂತ್
Follow us
|

Updated on: Sep 01, 2023 | 11:21 AM

‘ಜೈಲರ್’ ಸಿನಿಮಾ (Jailer Movie) ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲೇ 328 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಇನ್ನೂ ಕೆಲವು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸಲಿದೆ. ರಜನಿಕಾಂತ್ (Rajinikanth) ಅವರ ವೃತ್ತಿ ಜೀವನದಲ್ಲಿ ಮತ್ತೊಂದು ದೊಡ್ಡ ಗೆಲುವು ಸಿಕ್ಕಿದೆ. ಮತ್ತೊಂದು ವಿಶೇಷ ಎಂದರೆ, ಈ ಚಿತ್ರದ ಮೂಲಕ ರಜನಿಕಾಂತ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ಹೀರೋ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ! ರಜನಿಕಾಂತ್​ಗೆ ಚೆಕ್ ಹಸ್ತಾಂತರ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಜೈಲರ್’ ಚಿತ್ರದ ನಟನೆಗೆ ರಜನಿಕಾಂತ್​ಗೆ 210 ಕೋಟಿ ರೂಪಾಯಿ ಸಂಭಾವನೆ ಸಿಕ್ಕಂತೆ ಆಗಿದೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದ ಮೊದಲ ಹೀರೋ ಎನ್ನುವ ಖ್ಯಾತಿ ರಜನಿಕಾಂತ್​ಗೆ ಸಿಕ್ಕಿದೆ. ಈ ವಿಚಾರ ಕೇಳಿ ರಜನಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಈ ಚಿತ್ರದ ಮೂಲಕ ರಜನಿಕಾಂತ್ ದೊಡ್ಡ ಯಶಸ್ಸು ಕಂಡರು. ಈ ಚಿತ್ರದಲ್ಲಿ ರಜನಿ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್ ಮೊದಲಾದವರು ಮಾಡಿರುವ ಪಾತ್ರ ಕೂಡ ಗಮನ ಸೆಳೆದಿದೆ. ಗುರುವಾರ (ಆಗಸ್ಟ್ 31) ಈ ಚಿತ್ರ 2.4 ಕೋಟಿ ರೂಪಾಯಿ ಗಳಿಕೆ ಮಾಡಿದೆ.  ಈ ಮಧ್ಯೆ ಸಿನಿಮಾದ ಎಚ್​ಡಿ ಪ್ರಿಂಟ್ ಆನ್​ಲೈನ್​ನಲ್ಲಿ ಸೋರಿಕೆ ಆಗಿದ್ದು, ಚಿತ್ರಕ್ಕೆ ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ