AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ!

‘ಜೈಲರ್’ ಗೆದ್ದ ಖುಷಿಯಲ್ಲಿ ರಜನಿಗೆ 100 ಕೋಟಿ ರೂ. ಚೆಕ್ ಕೊಟ್ಟ ಕಲಾನಿಧಿ ಮಾರನ್; ಒಟ್ಟೂ ಸಂಭಾವನೆ ಎಷ್ಟು?
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Sep 01, 2023 | 11:21 AM

Share

‘ಜೈಲರ್’ ಸಿನಿಮಾ (Jailer Movie) ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲೇ 328 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರ ಇನ್ನೂ ಕೆಲವು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸಲಿದೆ. ರಜನಿಕಾಂತ್ (Rajinikanth) ಅವರ ವೃತ್ತಿ ಜೀವನದಲ್ಲಿ ಮತ್ತೊಂದು ದೊಡ್ಡ ಗೆಲುವು ಸಿಕ್ಕಿದೆ. ಮತ್ತೊಂದು ವಿಶೇಷ ಎಂದರೆ, ಈ ಚಿತ್ರದ ಮೂಲಕ ರಜನಿಕಾಂತ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ಹೀರೋ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ರಜನಿಕಾಂತ್ ಅವರು ‘ಜೈಲರ್’ ಚಿತ್ರಕ್ಕಾಗಿ 110 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಭಾವನೆ ಹಣವನ್ನು ಈ ಮೊದಲೇ ನೀಡಲಾಗಿದೆ. ಇದರ ಜೊತೆಗೆ ಪ್ರಾಫಿಟ್​ನಲ್ಲೂ ರಜನಿಗೆ ಪಾಲು ಸಿಕ್ಕಿದೆ. ಸನ್ ಪಿಕ್ಚರ್ಸ್​ನ ಮುಖ್ಯಸ್ಥ ಕಲಾನಿಧಿ ಮಾರನ್ ಅವರು ರಜನಿಕಾಂತ್​ಗೆ 100 ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ! ರಜನಿಕಾಂತ್​ಗೆ ಚೆಕ್ ಹಸ್ತಾಂತರ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಜೈಲರ್’ ಚಿತ್ರದ ನಟನೆಗೆ ರಜನಿಕಾಂತ್​ಗೆ 210 ಕೋಟಿ ರೂಪಾಯಿ ಸಂಭಾವನೆ ಸಿಕ್ಕಂತೆ ಆಗಿದೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆದ ಮೊದಲ ಹೀರೋ ಎನ್ನುವ ಖ್ಯಾತಿ ರಜನಿಕಾಂತ್​ಗೆ ಸಿಕ್ಕಿದೆ. ಈ ವಿಚಾರ ಕೇಳಿ ರಜನಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಈ ಚಿತ್ರದ ಮೂಲಕ ರಜನಿಕಾಂತ್ ದೊಡ್ಡ ಯಶಸ್ಸು ಕಂಡರು. ಈ ಚಿತ್ರದಲ್ಲಿ ರಜನಿ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್ ಮೊದಲಾದವರು ಮಾಡಿರುವ ಪಾತ್ರ ಕೂಡ ಗಮನ ಸೆಳೆದಿದೆ. ಗುರುವಾರ (ಆಗಸ್ಟ್ 31) ಈ ಚಿತ್ರ 2.4 ಕೋಟಿ ರೂಪಾಯಿ ಗಳಿಕೆ ಮಾಡಿದೆ.  ಈ ಮಧ್ಯೆ ಸಿನಿಮಾದ ಎಚ್​ಡಿ ಪ್ರಿಂಟ್ ಆನ್​ಲೈನ್​ನಲ್ಲಿ ಸೋರಿಕೆ ಆಗಿದ್ದು, ಚಿತ್ರಕ್ಕೆ ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ