AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ.

‘ಕಾರ್ತಿಕ್ ಆರ್ಯನ್​ಗೂ ಇದೇ ಗತಿ ಬರುತ್ತದೆ’; ಸುಶಾಂತ್ ಸಾವಿನ ಬಳಿಕ ಮೂಡಿತ್ತು ಆತಂಕ
ಕಾರ್ತಿಕ್ ಆರ್ಯನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 22, 2024 | 7:23 AM

Share

ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ಗೊತ್ತೇ ಇದೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ವಿಚಾರ ಚರ್ಚೆಯಲ್ಲಿದೆ. 2020ರಲ್ಲಿ ಅವರು ನಿಧನ ಹೊಂದಿದರು. ಆರಂಭದಲ್ಲಿ ಸುಶಾಂತ್ ಅವರದ್ದು ಆತ್ಮಹತ್ಯೆ ಎಂದೇ ಹೇಳಲಾಯಿತು. ಅವರನ್ನು ಬಾಲಿವುಡ್​ನಲ್ಲಿ ಹೊರಗಿನವರು ಎಂದು ಪರಿಗಣಿಸಲಾಗಿತ್ತು. ಇದೇ ಗತಿ ಕಾರ್ತಿಕ್ ಆರ್ಯನ್​ಗೂ ಬರುತ್ತದೆ ಎನ್ನುವ ಮಾತುಗಳು ಕೇಳಿ ಬಂದವು. ಅದೃಷ್ಟವಶಾತ್ ಆ ರೀತಿ ಆಗಿಲ್ಲ.

ಕಾರ್ತಿಕ್ ಆರ್ಯನ್ ಅವರಿಗೆ ಇಂದು (ನವೆಂಬರ್ 22) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಅವರ ನಟನೆಯ ‘ಭೂಲ್ ಭುಲಯ್ಯ 3’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಕಾರ್ತಿಕ್ ಆರ್ಯನ್ ಖುಷಿ ಹೆಚ್ಚಿಸಿದೆ. ಅವರು ಆರಂಭದಲ್ಲಿ ಸಾಕಷ್ಟು ತೊಂದರೆ ಅನುಭವಿಸಿದ್ದರು.

ಸುಶಾಂತ್ ಅವರನ್ನು ತುಳಿಯುವ ಪ್ರಯತ್ನಗಳು ನಡೆದಿವೆ ಎನ್ನುವ ಆರೋಪ ಇದೆ. ದೊಡ್ಡ ದೊಡ್ಡ ತಲೆಗಳು ಸುಶಾಂತ್ ಸಾವಿಗೆ ಕಾರಣ ಎನ್ನುವ ಆರೋಪ ಇದೆ. ಅವರ ಸಾವಿನ ಬಳಿಕ ಎಲ್ಲರೂ ಕಾರ್ತಿಕ್ ಆರ್ಯನ್ ಬಗ್ಗೆ ಆತಂಕ ಹೊರಹಾಕಿದ್ದರು. ಅವರಿಗೂ ಇದೆ ಗತಿ ಬರಹುದು ಎಂದು ಹೇಳಲಾಗಿತ್ತು.

ಬಾಲಿವುಡ್​ನಲ್ಲಿರುವ ಕಷ್ಟಗಳ ಬಗ್ಗೆ ಮಾತನಾಡಿದ್ದ ಕಾರ್ತಿಕ್ ಆರ್ಯನ್, ‘ಅವಕಾಶ ಸಿಗೋದು ತುಂಬಾನೇ ಕಷ್ಟ. ನೀವು ಹೊರಗಿನವರು ಎಂದಾಗ ನಿಮ್ಮ ಕೆಲಸಗಳನ್ನು ಗುರುತಿಸೋದು ಕೂಡ ಕಡಿಮೆ. ನಾವು ಸಿನಿಮಾ ರಂಗದವರು ಅಲ್ಲ ಎಂಬುದು ಪದೇ ಪದೇ ನಿಮ್ಮ ಮೇಲೆ ಪ್ರಭಾವ ಬೀರುತ್ತಾ ಇರುತ್ತದೆ’ ಎಂದಿದ್ದರು.

ಇದನ್ನೂ ಓದಿ: ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಅವರು ಹೊರಗಿನವರಾದರೂ ‘ಸೋನು ಕಿ ಟು ಕಿ ಸ್ವೀಟಿ’, ’ಭೂಲ್ ಭುಲಯ್ಯ 2’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಭೂಲ್ ಭುಲಯ್ಯ 3’ ಕೂಡ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ.  ಸದ್ಯ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರು ಯಶಸ್ವಿ ಹೀರೋಗಳ ಸಾಲಿನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್